ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್​ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್

ಸಾಲ‌ ಕೊಡಿಸುವುದಾಗಿ ಮಹಿಳೆಯನ್ನು ಲಾಡ್ಜ್​ಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿ ಅತ್ಯಾಚಾರ ಎಸಗಿರುವ ಆರೋಪ ಬಿಜೆಪಿ ಮುಖಂಡನ ವಿರುದ್ಧ ಕೇಳಿಬಂದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು, ಬಿಜೆಪಿ ಮುಖಂಡನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ನಾಪತ್ತೆಯಾಗಿರುವ ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹಾಗಾದ್ರೆ, ಮಹಿಳೆ ನೀಡಿದ ದೂರಿನಲ್ಲೇನಿದೆ ಎನ್ನುವ ವಿವರ ಇಲ್ಲಿದೆ .

ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್​ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್
ಬಿಜೆಪಿ ಮುಖಂಡ ಚಲುವರಾಮು
Edited By:

Updated on: Dec 27, 2024 | 7:26 PM

ರಾಮನಗರ, (ಡಿಸೆಂಬರ್ 27): ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೋರ್ವಳು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬ್ಯೂಟಿಷನ್ ಕೆಲಸ ಮಾಡಿಕೊಂಡಿರುವ ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ರಾಮನಗರದ ಲಾಡ್ಜ್​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು. ಮಹಿಳೆ ನೀಡಿದ ಈ ದೂರಿನ ಮೇರೆಗೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸೂರನಹಳ್ಳಿಯ ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.

ತನ್ನ ಗಂಡನ ಕಾಗದ ಪತ್ರ ಸರಿಪಡಿಸಲು ಹಣದ ಅವಶ್ಯಕತೆ ಇತ್ತು. ಆಗ ಸಾಲ‌ ಕೊಡಿಸುವುದಾಗಿ ಚಲುವರಾಮು ಭರವಸೆ ನೀಡಿದ್ದರು. ಬಳಿಕ ಸಾಲ ಕೊಡುವವರು ಬರುತ್ತಿದ್ದಾರೆ ಬನ್ನಿ ಎಂದು ಲಾಡ್ಜ್ ಗೆ ಕರೆದುಕೊಂಡು ಹೋಗಿದ್ದು, ಸಾಲ ಕೊಡುವವರ ಕಚೇರಿ ಇಲ್ಲೇ ಇದೆ ಎಂದು ಹೇಳಿದ್ದ. ಬಳಿಕ ಮತ್ತು ಬರಿಸಿ ಲಾಡ್ಜ್​ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ತಡೆಯೊಡ್ಡಿದ್ದಕ್ಕೆ ಕಪಾಳಕ್ಕೆ ಹೊಡೆದಿದ್ದಾಗಿ ಮಹಿಳೆ ದೂರಿದ್ದಾಳೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ಅದಲು ಬದಲು: ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ..!

ಅಲ್ಲದೇ ಬಳಿಕ ವಿಡಿಯೋ ಕಾಲ್ ಮಾಡಿ ನಗ್ನ ದೇಹ ತೋರಿಸುವಂತೆ ಬೆದರಿಕೆ ಹಾಕುತ್ತಿದ್ದ, ನಿನ್ನ ಖಾಸಗಿ ವಿಡಿಯೋ ಇದೆ. ಎಲ್ಲಾ ಕಡೆ ಹಾಕುತ್ತೇನೆ ಎಂದು ಬೆದರಿಕೆ ಹಾಕಿರುವುದಾಗಿ ಮಹಿಳೆ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಇದೀಗ ಸಾತನೂರು ಪೊಲೀಸರು, ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us