AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರದ ಕಬ್ಬಾಳು ಬೆಟ್ಟದಲ್ಲಿ ಪ್ರೇಮಿಗಳಿಂದ ಆತ್ಮಹತ್ಯೆ

ಸತೀಶ್ ಮತ್ತು ಚಂದನಾ 3 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಕನಕಪುರದ ಕಬ್ಬಾಳು ಬೆಟ್ಟದಲ್ಲಿ ಪ್ರೇಮಿಗಳಿಂದ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Updated By: guruganesh bhat|

Updated on:Sep 26, 2021 | 10:58 PM

Share

ರಾಮನಗರ: ಕನಕಪುರ ತಾಲೂಕಿನ ಕಬ್ಬಾಳು ಬೆಟ್ಟದಲ್ಲಿ ಸೊಂಟಕ್ಕೆ ವೇಲ್ ಕಟ್ಟಿಕೊಂಡು ಬೆಟ್ಟದಿಂದ ಜಿಗಿದು ಸತೀಶ್ (21) ಮತ್ತು ಚಂದನಾ (21) ಎಂಬ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಪ್ರೇಮಿಗಳಾಗಿದ್ದರು ಎಂದು ತಿಳಿದುಬಂದಿದೆ. ಇಬ್ಬರೂ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉರುಗಮ್ ನಿವಾಸಿಗಳು. ಸತೀಶ್ ತಮಿಳುನಾಡಿನ ಹೊಸೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿದ್ದ. ಸತೀಶ್ ಮತ್ತು ಚಂದನಾ 3 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

1 ವರ್ಷದ ಹಿಂದೆ ಚಂದನಾ ಅವರನ್ನು ಕನಕಪುರದ ಸಮೀಪ ಮದುವೆ ಮಾಡಿಕೊಡಲಾಗಿತ್ತು. ಆದರೆ ಸೆಪ್ಟೆಂಬರ್ 22ರಂದು ಪತಿಯ ಮನೆಯಿಂದ ಚಂದನಾ ನಾಪತ್ತೆಯಾಗಿದ್ದರು. ಈಕುರಿತು ಕನಕಪುರ ಟೌನ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಯುಟರ್ನ್ ತೆಗೆದುಕೊಳ್ಳುವಾಗ ಬೈಕ್​ಗೆ ಬಿಎಂಟಿಸಿ ಬಸ್ ಡಿಕ್ಕಿ; ಯುವಕ ಯುವತಿ ಸಾವು ಆನೇಕಲ್: ಬೈಕ್​ಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ ಯುವಕ, ಯುವತಿ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ನಡೆದಿದೆ. ದಾವಣಗೆರೆ ಮೂಲದ ಪ್ರಭಾಕರ್(25), ಸಹನಾ‌(24) ಸಾವನ್ನಪ್ಪಿದ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಯುಟರ್ನ್ ತೆಗೆದುಕೊಳ್ಳುವಾಗ ಬಸ್ ಡಿಕ್ಕಿಯಾಗಿ ದುರ್ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಘಟಿಸಿದೆ.

ಧಾರವಾಡದಲ್ಲೂ ಅಪಘಾತ ಕಾರು ಮತ್ತು ಓಮಿನಿ ಮಧ್ಯೆ ರಸ್ತೆ ಅಪಘಾತವಾಗಿ ಗಾಯಾಳು ರಸ್ತೆ ಮಧ್ಯೆ ನೋವಿನಿಂದ ನರಳಾಡಿದ ದುರ್ಘಟನೆ ಧಾರವಾಡ-ಸವದತ್ತಿ ರಸ್ತೆಯಲ್ಲಿ ಘಟಿಸಿದೆ. ಧಾರವಾಡ ತಾಲೂಕಿನ ಅಮ್ಮಿನಬಾವಿ ಬಳಿ ಈ ದುರ್ಘಟನೆ ಸಂಭವಿಸಿದ್ದು ಕಾರು ಧಾರವಾಡದಿಂದ ಸವದತ್ತಿಗೆ ಪ್ರಯಾಣ ಬೆಳೆಸಿತ್ತು ಎಂದು ತಿಳಿದುಬಂದಿದೆ. ಕಾರು ಮತ್ತು ಓಮಿನಿ ನಡುವೆ ಓವರ್ ಟೇಕ್ ಮಾಡುವ ವೇಳೆ ಘಟನೆ ಸಂಭವಿಸಿದೆ. ಗಾಯಾಳುವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 

Sneha Dubey: ಕಾಶ್ಮೀರದ ಪ್ರಸ್ತಾಪವೆತ್ತಿದ ಪಾಕ್​ ಪ್ರಧಾನಿಗೆ ಕಟು ಉತ್ತರ ಕೊಟ್ಟ ಸ್ನೇಹಾ ದುಬೆ ಯಾರು? ಚಿಕ್ಕವಯಸ್ಸಿನ ಅಧಿಕಾರಿ ಬಗ್ಗೆ ಇಲ್ಲಿದೆ ಮಾಹಿತಿ

ಅಮೆರಿಕದ ಗುಪ್ತಚರ ಇಲಾಖೆ ಅಧಿಕಾರಿಯಲ್ಲಿ ಕಾಣಿಸಿಕೊಂಡಿರುವ ಹವಾನಾ ಸಿಂಡ್ರೋಮ್ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ

(Ramanagar lovers suicide by Kanakapura Kabbalu hill)

Published On - 3:07 pm, Sun, 26 September 21

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ