AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರದ ಕಬ್ಬಾಳು ಬೆಟ್ಟದಲ್ಲಿ ಪ್ರೇಮಿಗಳಿಂದ ಆತ್ಮಹತ್ಯೆ

ಸತೀಶ್ ಮತ್ತು ಚಂದನಾ 3 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಕನಕಪುರದ ಕಬ್ಬಾಳು ಬೆಟ್ಟದಲ್ಲಿ ಪ್ರೇಮಿಗಳಿಂದ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 26, 2021 | 10:58 PM

Share

ರಾಮನಗರ: ಕನಕಪುರ ತಾಲೂಕಿನ ಕಬ್ಬಾಳು ಬೆಟ್ಟದಲ್ಲಿ ಸೊಂಟಕ್ಕೆ ವೇಲ್ ಕಟ್ಟಿಕೊಂಡು ಬೆಟ್ಟದಿಂದ ಜಿಗಿದು ಸತೀಶ್ (21) ಮತ್ತು ಚಂದನಾ (21) ಎಂಬ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಪ್ರೇಮಿಗಳಾಗಿದ್ದರು ಎಂದು ತಿಳಿದುಬಂದಿದೆ. ಇಬ್ಬರೂ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉರುಗಮ್ ನಿವಾಸಿಗಳು. ಸತೀಶ್ ತಮಿಳುನಾಡಿನ ಹೊಸೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿದ್ದ. ಸತೀಶ್ ಮತ್ತು ಚಂದನಾ 3 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

1 ವರ್ಷದ ಹಿಂದೆ ಚಂದನಾ ಅವರನ್ನು ಕನಕಪುರದ ಸಮೀಪ ಮದುವೆ ಮಾಡಿಕೊಡಲಾಗಿತ್ತು. ಆದರೆ ಸೆಪ್ಟೆಂಬರ್ 22ರಂದು ಪತಿಯ ಮನೆಯಿಂದ ಚಂದನಾ ನಾಪತ್ತೆಯಾಗಿದ್ದರು. ಈಕುರಿತು ಕನಕಪುರ ಟೌನ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಯುಟರ್ನ್ ತೆಗೆದುಕೊಳ್ಳುವಾಗ ಬೈಕ್​ಗೆ ಬಿಎಂಟಿಸಿ ಬಸ್ ಡಿಕ್ಕಿ; ಯುವಕ ಯುವತಿ ಸಾವು ಆನೇಕಲ್: ಬೈಕ್​ಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ ಯುವಕ, ಯುವತಿ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ನಡೆದಿದೆ. ದಾವಣಗೆರೆ ಮೂಲದ ಪ್ರಭಾಕರ್(25), ಸಹನಾ‌(24) ಸಾವನ್ನಪ್ಪಿದ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಯುಟರ್ನ್ ತೆಗೆದುಕೊಳ್ಳುವಾಗ ಬಸ್ ಡಿಕ್ಕಿಯಾಗಿ ದುರ್ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಘಟಿಸಿದೆ.

ಧಾರವಾಡದಲ್ಲೂ ಅಪಘಾತ ಕಾರು ಮತ್ತು ಓಮಿನಿ ಮಧ್ಯೆ ರಸ್ತೆ ಅಪಘಾತವಾಗಿ ಗಾಯಾಳು ರಸ್ತೆ ಮಧ್ಯೆ ನೋವಿನಿಂದ ನರಳಾಡಿದ ದುರ್ಘಟನೆ ಧಾರವಾಡ-ಸವದತ್ತಿ ರಸ್ತೆಯಲ್ಲಿ ಘಟಿಸಿದೆ. ಧಾರವಾಡ ತಾಲೂಕಿನ ಅಮ್ಮಿನಬಾವಿ ಬಳಿ ಈ ದುರ್ಘಟನೆ ಸಂಭವಿಸಿದ್ದು ಕಾರು ಧಾರವಾಡದಿಂದ ಸವದತ್ತಿಗೆ ಪ್ರಯಾಣ ಬೆಳೆಸಿತ್ತು ಎಂದು ತಿಳಿದುಬಂದಿದೆ. ಕಾರು ಮತ್ತು ಓಮಿನಿ ನಡುವೆ ಓವರ್ ಟೇಕ್ ಮಾಡುವ ವೇಳೆ ಘಟನೆ ಸಂಭವಿಸಿದೆ. ಗಾಯಾಳುವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 

Sneha Dubey: ಕಾಶ್ಮೀರದ ಪ್ರಸ್ತಾಪವೆತ್ತಿದ ಪಾಕ್​ ಪ್ರಧಾನಿಗೆ ಕಟು ಉತ್ತರ ಕೊಟ್ಟ ಸ್ನೇಹಾ ದುಬೆ ಯಾರು? ಚಿಕ್ಕವಯಸ್ಸಿನ ಅಧಿಕಾರಿ ಬಗ್ಗೆ ಇಲ್ಲಿದೆ ಮಾಹಿತಿ

ಅಮೆರಿಕದ ಗುಪ್ತಚರ ಇಲಾಖೆ ಅಧಿಕಾರಿಯಲ್ಲಿ ಕಾಣಿಸಿಕೊಂಡಿರುವ ಹವಾನಾ ಸಿಂಡ್ರೋಮ್ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ

(Ramanagar lovers suicide by Kanakapura Kabbalu hill)

Published On - 3:07 pm, Sun, 26 September 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ