AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿ ಟೊಯೊಟ ಕಿರ್ಲೋಸ್ಕರ್ ಘಟಕದ 45 ಕಾರ್ಮಿಕರು‌ ವಜಾ; ಕಾರ್ಮಿಕ ಸಂಘದ ಆಕ್ರೋಶ

ಕಂಪನಿಯು ತನ್ನ ಹಠಮಾರಿ ಧೋರಣೆ ಹಾಗೂ ಕಾರ್ಮಿಕ‌ ವಿರೋಧಿ ನೀತಿಯನ್ನು ಮತ್ತೆ ಮುಂದುವರಿಸಿದೆ. ಇದು ದುರಹಂಕಾರದ ಪರಮಾವಧಿ ಎಂದು ಕಾರ್ಮಿಕ  ಸಂಘವು ಟೀಕಿಸಿದೆ.

ಬಿಡದಿ ಟೊಯೊಟ ಕಿರ್ಲೋಸ್ಕರ್ ಘಟಕದ 45 ಕಾರ್ಮಿಕರು‌ ವಜಾ; ಕಾರ್ಮಿಕ ಸಂಘದ ಆಕ್ರೋಶ
ಟೊಯೊಟಾ ಕಿರ್ಲೋಸ್ಕರ್
TV9 Web
| Edited By: |

Updated on: Oct 02, 2021 | 2:36 PM

Share

ರಾಮನಗರ: ತಾಲೂಕಿನ ಬಿಡದಿ‌ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ತನ್ನ 45 ಉದ್ಯೋಗಿಗಳನ್ನು ಸೇವೆಯಿಂದ ವಜಾ ಮಾಡಿದೆ. ಕಾರ್ಮಿಕರ ಮೇಲೆ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಟಿಕೆಎಂ ನೌಕರರ ಸಂಘದ ನೇತೃತ್ವದಲ್ಲಿ ಕಳೆದ ವರ್ಷ ಕೆಲ ತಿಂಗಳುಗಳ ಕಾಲ ಸಾವಿರಾರು‌ ಕಾರ್ಮಿಕರು ಮುಷ್ಕರ ನಡೆಸಿದ್ದರು. ಇದರಿಂದಾಗಿ ಎರಡೆರಡು ಬಾರಿ ಕಂಪನಿ‌ ಲಾಕೌಟ್ ಘೋಷಿಸಿತ್ತು. ನಂತರ ಸರ್ಕಾರದ ಮಧ್ಯಸ್ಥಿಕೆಯಲ್ಲಿ ಸಂಧಾನ ಸಭೆ ನಡೆದು‌ ಮತ್ತೆ ಉತ್ಪಾದನೆ ಪುನರಾರಂಭಗೊಂಡಿತ್ತು. ಆರೋಪ ಇರುವ ಕಾರ್ಮಿಕರು ಹೊರತು ಪಡೆಸಿ ಉಳಿದ ಕಾರ್ಮಿಕರು ಕೆಲಸಕ್ಕೆ ಹಾಜರಾಗಿದ್ದರು.

ಇನ್ನು ನಿಯಮಬಾಹಿರವಾಗಿ ಮುಷ್ಕರ ನಡೆಸಿದ ಆರೋಪದ‌ ಮೇಲೆ ಟಿಕೆಎಂ ತನ್ನ 66 ನೌಕರರನ್ನು ಸೇವೆಯಿಂದ ಅಮಾನತು ಮಾಡಿ, ಅವರ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಕಂಪನಿ‌ ನಿಯಮಗಳ ಪ್ರಕಾರ ಈ ಕಾರ್ಮಿಕರನ್ನು ಸೇವೆಯಿಂದ ವಜಾ‌ ಮಾಡಿರುವುದಾಗಿ ಟಿಕೆಎಂ‌ ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಮಿಕ ಸಂಘದ ಆಕ್ರೋಶ: ಕಂಪನಿಯ ಕ್ರಮಕ್ಕೆ ಟಿಕೆಎಂ ಕಾರ್ಮಿಕ ಸಂಘದ ಆಕ್ರೋಶ ಕಂಪನಿಯು ತನ್ನ ಹಠಮಾರಿ ಧೋರಣೆ ಹಾಗೂ ಕಾರ್ಮಿಕ‌ ವಿರೋಧಿ ನೀತಿಯನ್ನು ಮತ್ತೆ ಮುಂದುವರಿಸಿದೆ. ಇದು ದುರಹಂಕಾರದ ಪರಮಾವಧಿ ಎಂದು ಕಾರ್ಮಿಕ  ಸಂಘವು ಟೀಕಿಸಿದೆ.

ಇದನ್ನೂ ಓದಿ: 

40ನೇ ದಿನಕ್ಕೆ ಕಾಲಿಟ್ಟ ಟೊಯೋಟಾ ಕಿರ್ಲೋಸ್ಕರ್​ ಕಾರ್ಮಿಕರ ಮುಷ್ಕರ: DC ಕಚೇರಿ ಮುತ್ತಿಗೆಗೆ ಯತ್ನ

ಬಿಡದಿ: ಈಗಲ್ಟನ್​ ರೆಸಾರ್ಟ್ ಒತ್ತುವರಿ ಮಾಡ್ಕೊಂಡಿದ್ದ 928 ಕೋಟಿ ರೂ. ಮೌಲ್ಯದ 77 ಎಕರೆ ಸರ್ಕಾರಿ ಭೂಮಿ ಜಿಲ್ಲಾಡಳಿತ ವಶಕ್ಕೆ

Follow Us
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!