Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರನ್ನು ಅಟ್ಟಾಡಿಸಿಕೊಂಡು ಹೋದ 30 ಕಾಡಾನೆಗಳ ಹಿಂಡು: ಅನ್ನದಾತ ಬಚಾವ್

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಗ್ರಾಮದ ಬಳಿ ಬೈಕ್​ನಲ್ಲಿ ತೆರಳುತ್ತಿದ್ದ ರೈತರಿಬ್ಬರನ್ನು ಸುಮಾರು 30 ಆನೆಗಳ ಹಿಂಡು ಹಿಂಬಾಲಿಸಿದ್ದು, ಓಡಿ ಹೋಗಿ ಜೀವ ರಕ್ಷಣೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ರೈತರಿಬ್ಬರು ಬೈಕ್ ಬಿಟ್ಟು ಬೆಟ್ಟದ ಕಡೆ ಓಡಿ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಇತ್ತ ಸಿಟ್ಟಿನಲ್ಲಿ ಕಾಡಾನೆಗಳ ಹಿಂಡು ಬೈಕ್ ಪುಡಿಗಟ್ಟಿದೆ.

ರೈತರನ್ನು ಅಟ್ಟಾಡಿಸಿಕೊಂಡು ಹೋದ 30 ಕಾಡಾನೆಗಳ ಹಿಂಡು: ಅನ್ನದಾತ ಬಚಾವ್
ಕಾಡಾನೆ ದಾಳಿಗೆ ಬೈಕ್​ ಪುಡಿ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 29, 2023 | 10:24 PM

ರಾಮನಗರ, ಡಿಸೆಂಬರ್​ 29: ಜಿಲ್ಲೆಯ ಕನಕಪುರ ತಾಲೂಕಿನ ಗ್ರಾಮದ ಬಳಿ ಬೈಕ್​ನಲ್ಲಿ ತೆರಳುತ್ತಿದ್ದ ರೈತರಿಬ್ಬರನ್ನು ಸುಮಾರು 30 ಆನೆಗಳ (elephant) ಹಿಂಡು ಹಿಂಬಾಲಿಸಿದ್ದು, ಓಡಿ ಹೋಗಿ ಜೀವ ರಕ್ಷಣೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಹೊಲದಲ್ಲಾದ ಹಾನಿ ನೋಡಲು ರೈತರು ತೆರಳಿದ್ದಾರೆ. ಈ ವೇಳೆ ಕಾಡಾನೆಗಳ ಹಿಂಡು ಏಕಾಏಕಿ ನುಗಿದೆ. ರೈತರಿಬ್ಬರು ಬೈಕ್ ಬಿಟ್ಟು ಬೆಟ್ಟದ ಕಡೆ ಓಡಿ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಇತ್ತ ಸಿಟ್ಟಿನಲ್ಲಿ ಕಾಡಾನೆಗಳ ಹಿಂಡು ಬೈಕ್ ಪುಡಿಗಟ್ಟಿದೆ.

ಬನ್ನೇರುಘಟ್ಟದ ಬಿಳಿಕಲ್ ಅರಣ್ಯ ಕಡೆಯಿಂದ ಕಾಡಾನೆ ಗುಂಪು ಬಂದಿದ್ದು, ಹಲವು ಆನೆಗಳ ಪೈಕಿ ಮರಿಗಳೇ ಹೆಚ್ಚಿದ್ದವು. ಕನಕಪುರ ಸುತ್ತಮುತ್ತಲಿನ ಗ್ರಾಮದಲ್ಲಿ ಬೆಳೆ ನಾಶ ಮಾಡುತ್ತಿದ್ದವು. ಅರಣ್ಯ ಇಲಾಖೆ ಸಿಬ್ಬಂದಿಗಳು ಆನೆಗಳನ್ನು ಕಾಡಿನೆಡೆಗೆ ಓಡಿಸಿದ್ದಾರೆ.

ಇದನ್ನೂ ಓದಿ: ರಾಮನಗರ: ಆನೆ ಪಳಗಿಸುತ್ತೇನೆ ಎಂದು ಕಾಡಿಗೆ ಹೋದವನು ಕಾಡಾನೆಗೆ ಬಲಿ

ಕಳೆದ ವಾರ ಕಾಡಾನೆಗಳ ಹಿಂಡು ಬೆಳೆ ನಾಶಪಡಿಸುತ್ತಿರುವ ಬಗ್ಗೆ ರೈತರು ಹಲವು ಬಾರಿ ದೂರು ನೀಡಿದ್ದರು. ಹಿಗಾಗಿ ಅರಣ್ಯ ಇಲಾಖೆ ಬೆಟ್ಟೇಗೌಡನ ದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಆನೆಗಳನ್ನು ಕಾಡಿಗೆ ಕಳುಹಿಸುವಲ್ಲಿ ಯಶಸ್ವಿಯಾಗಿತ್ತು.

ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ರಾಜ್ಯದಲ್ಲಿ ಆನೆ ಕಾರ್ಯಪಡೆಗಳನ್ನು ಬಲಪಡಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಈ ವರ್ಷ ಆನೆಗಳು ಮಾನವ ವಾಸಸ್ಥಳಕ್ಕೆ ನುಗ್ಗಿದ ಹಲವಾರು ನಿದರ್ಶನಗಳು ವರದಿಯಾಗಿವೆ. ರಾಜ್ಯಾದ್ಯಂತ ಕಳೆದ ಮೂರು ತಿಂಗಳಲ್ಲಿ ಆನೆ ದಾಳಿಗೆ ಕನಿಷ್ಠ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.

ಕುರಿ ಕಾಯಲು ತೆರಳಿದ್ದ ರೈತನ ತುಳಿದು ಹಾಕಿದ ಕಾಡಾನೆ

ಜಿಲ್ಲೆಯ ಕನಕಪುರ ಹೊರವಲಯ ಹಾಗೂ ಹಾರೋಹಳ್ಳಿ ಭಾಗದ ರೈತರು ಆನೆಗಳ ದಾಳಿಗೆ ತತ್ತಿರಿಸಿದ್ದು ತಮ್ಮ ಬೆಳೆ ಉಳಿಸಿಲು ಹೋಗಿ ಪ್ರಾಣವನ್ನೇ ಕಳೆದುಕೊಳ್ಳುವ ಆತಂಕದಲ್ಲಿ ಬದುಕುತ್ತಿದ್ದಾರೆ. ಕನಕಪುರ ಹೊರವಲಯದ ಬನ್ನಿಮೂಡ್ಲು ಗ್ರಾಮದ ಐವತ್ತು ಐದು‌ ವರ್ಷದ ಚಂದ್ರಣ್ಣ ಕುರಿ ಮೇಯಿಸಲು ಕಾಡಿನೆಡೆಗೆ ಹೊರಟಿದ್ದ, ಅರಣ್ಯದೊಳಗೆ ಹೋಗಬೇಡ ಅಲ್ಲಿ ಕಾಡಾನೆ ಗುಂಪಿದೆ ಅಂತ ಗ್ರಾಮಸ್ಥರು ಎಚ್ಚಸಿದ್ದಾರೆ.‌

ಇದನ್ನೂ ಓದಿ: ರಾಮನಗರ: ತೋಟಕ್ಕೆ ತೆರಳಿದ ರೈತನ ಮೇಲೆ ಒಂಟಿ ಸಲಗ ದಾಳಿ; ಸ್ಥಳದಲ್ಲೇ ಸಾವು

ಇದ್ಯಾವುದನ್ನು ಲೆಕ್ಕಿಸದ ಚಂದ್ರಣ್ಣ, ನಾನು ಆನೆ‌ ಪಳಗಿಸುತ್ತೇನೆ ನನಗೇನು ಆಗಲ್ಲ ಅಂತ ಸೋಮವಾರ ಕಾಡಿಗೆ ನುಗ್ಗಿದ್ದಾನೆ.‌ ಕುರಿಗಳೆಲ್ಲವೂ‌ ಮೇಯ್ದು ಗ್ರಾಮಕ್ಕೆ ವಾಪಾಸ್ ಆದರೂ ಚಂದ್ರಣ್ಣ ಮನೆಗೆ ವಾಪಾಸ್ ಬರಲೇ ಇಲ್ಲ. ಅನುಮಾನಗೊಂಡು ಅರಣ್ಯ ಇಲಾಖೆ‌ ಸಿಬ್ಬಂದಿಗೆ ವಿಚಾರ ತಿಳಿಸಿದಾಗ ಬನ್ನೇರುಘಟ್ಟ ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ‌ಮಾಡಿದಾಗ ಚಂದ್ರಣ್ಣ ಶವ ಪತ್ತೆಯಾಗಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:21 pm, Fri, 29 December 23

ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು