AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಪೊಲೀಸರ ಮೇಲೆ ಆರೋಪ; ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಮಹಿಳೆಯೊಬ್ಬರು ಪೊಲೀಸರ ಮೇಲೆ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಪಟ್ಟಣ ನಗರದ ಕೋಟೆ ನಿವಾಸಿ ಮಾಧುರಿ (31)ಎಂಬ ಮಹಿಳೆ ಸಾವು.

ರಾಮನಗರ: ಪೊಲೀಸರ ಮೇಲೆ ಆರೋಪ; ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಪ್ರಾತಿನಿಧಿಕ ಚಿತ್ರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Sep 03, 2023 | 10:06 PM

Share

ರಾಮನಗರ, ಸೆ.03: ಮಹಿಳೆಯೊಬ್ಬರು ಪೊಲೀಸರ ಮೇಲೆ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಪಟ್ಟಣ (channapattana) ನಗರದ ಕೋಟೆ ನಿವಾಸಿ ಮಾಧುರಿ (31)ಎಂಬ ಮಹಿಳೆ ಸಾವು. ಪೊಲೀಸರ ವರ್ತನೆ ಬಗ್ಗೆ ಆರೋಪಿಸಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಗುರುವಾರ ರೈಲ್ವೇ ನಿಲ್ದಾಣ ಬಳಿ ಮೃತ ಮಹಿಳೆ ಮತ್ತೊರ್ವ ಮಹಿಳೆ ಜ್ಯೋತಿ ಎಂಬಾಕೆ ಜೊತೆಗೆ ದುಡ್ಡಿನ ವಿಚಾರಕ್ಕೆ ಕಿತ್ತಾಟ ಮಾಡಿಕೊಂಡು, ಜ್ಯೋತಿ ಮೊಬೈಲ್ ಕಸಿದುಕೊಂಡಿದ್ದಾಗಿ ಆರೋಪಿಸಿದ್ದರು. ಗಲಾಟೆ ಬಳಿಕ ಪೊಲೀಸ್ ಠಾಣೆಗೆ ದೂರು ನೀಡಲು ಮೃತ ಮಹಿಳೆ ಬಂದಿದ್ದರು.

ಈ ಹಿಂದೆ ಮೃತ ಮಹಿಳೆ ಮೇಲೆ ಹಲವು ಮೋಸ ಮಾಡಿರುವ ಕೇಸ್ ದಾಖಲು ಆಗಿದೆ. ಫ್ರಾಡ್ ಕೇಸ್ ಇದೆ. ಎಂಬ ಕಾರಣಕ್ಕೆ ಪೊಲೀಸರು ಮಹಿಳೆಯ ದೂರು ಸ್ವೀಕರಿಸಲಿಲ್ಲ. ತನಗೆ ನ್ಯಾಯ ಕೇಳಲು ಹೋದ್ರೆ, ಅವಮಾನ ಮಾಡಿದ್ರು ಎಂದು ಮನನೊಂದು ಮೊಬೈಲ್‌ ವಿಡಿಯೋ‌ ಮಾಡುತ್ತಾ ನೂರಾರು ಮಾತ್ರೆಗಳನ್ನು ಒಂದೇ ಬಾರಿ ನುಂಗಿದ್ದರು. ಅಸ್ವಸ್ಥ ಮಾಧರಿಯನ್ನು ಆಸ್ಪತ್ರೆಗೆ ‌ದಾಖಲಿಸಲಾಗಿತ್ತು. ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.

ಇದನ್ನೂ ಓದಿ:ಬೆಳಗಾವಿ ಪಾಲಿಕೆ ಪೌರ ಕಾರ್ಮಿಕ ಆತ್ಮಹತ್ಯೆ; ಗುತ್ತಿಗೆದಾರನ ಕಿರುಕುಳವೇ ಕಾರಣವೆಂದು ಕುಟುಂಬಸ್ಥರ ಆರೋಪ

ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಸಾವು

ಆಸ್ಪತ್ರೆ ದಾಖಲಾಗಿದ್ದ ಮಹಿಳೆ ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗಿದೇ ಕೊನೆಯುಸಿರೆಳೆದಿದ್ದಾರೆ. ಇನ್ನು ವಿಡಿಯೋ ಅಲ್ಲಿ ಮಾಧುರಿ, ತಾನೂ ಟ್ಯಾಬ್ಲೆಟ್ ತೆಗದುಕೊಂಡ ಇಂದಲ್ಲ ನಾಳೆ ಸಾಯ್ತೀನಿ‌. ನನ್ನ ಸಾವಿಗೆ ನ್ಯಾಯ ಕೊಡಿಸುವಂತೆ ರಾಮನಗರ ಎಸ್ಪಿಗೆ ಮನವಿ ಮಾಡಿದ್ದರು. ಚನ್ನಪಟ್ಟಣ ಟೌನ್ ಇನ್ಸ್ ಪೆಕ್ಟರ್ ಶೋಭಾ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಆರೋಪಿಸಿದ್ದಾರೆ. ಈ ಘಟನೆ ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ