AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಪೊಲೀಸರ ಮೇಲೆ ಆರೋಪ; ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಮಹಿಳೆಯೊಬ್ಬರು ಪೊಲೀಸರ ಮೇಲೆ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಪಟ್ಟಣ ನಗರದ ಕೋಟೆ ನಿವಾಸಿ ಮಾಧುರಿ (31)ಎಂಬ ಮಹಿಳೆ ಸಾವು.

ರಾಮನಗರ: ಪೊಲೀಸರ ಮೇಲೆ ಆರೋಪ; ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಪ್ರಾತಿನಿಧಿಕ ಚಿತ್ರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Sep 03, 2023 | 10:06 PM

Share

ರಾಮನಗರ, ಸೆ.03: ಮಹಿಳೆಯೊಬ್ಬರು ಪೊಲೀಸರ ಮೇಲೆ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಪಟ್ಟಣ (channapattana) ನಗರದ ಕೋಟೆ ನಿವಾಸಿ ಮಾಧುರಿ (31)ಎಂಬ ಮಹಿಳೆ ಸಾವು. ಪೊಲೀಸರ ವರ್ತನೆ ಬಗ್ಗೆ ಆರೋಪಿಸಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಗುರುವಾರ ರೈಲ್ವೇ ನಿಲ್ದಾಣ ಬಳಿ ಮೃತ ಮಹಿಳೆ ಮತ್ತೊರ್ವ ಮಹಿಳೆ ಜ್ಯೋತಿ ಎಂಬಾಕೆ ಜೊತೆಗೆ ದುಡ್ಡಿನ ವಿಚಾರಕ್ಕೆ ಕಿತ್ತಾಟ ಮಾಡಿಕೊಂಡು, ಜ್ಯೋತಿ ಮೊಬೈಲ್ ಕಸಿದುಕೊಂಡಿದ್ದಾಗಿ ಆರೋಪಿಸಿದ್ದರು. ಗಲಾಟೆ ಬಳಿಕ ಪೊಲೀಸ್ ಠಾಣೆಗೆ ದೂರು ನೀಡಲು ಮೃತ ಮಹಿಳೆ ಬಂದಿದ್ದರು.

ಈ ಹಿಂದೆ ಮೃತ ಮಹಿಳೆ ಮೇಲೆ ಹಲವು ಮೋಸ ಮಾಡಿರುವ ಕೇಸ್ ದಾಖಲು ಆಗಿದೆ. ಫ್ರಾಡ್ ಕೇಸ್ ಇದೆ. ಎಂಬ ಕಾರಣಕ್ಕೆ ಪೊಲೀಸರು ಮಹಿಳೆಯ ದೂರು ಸ್ವೀಕರಿಸಲಿಲ್ಲ. ತನಗೆ ನ್ಯಾಯ ಕೇಳಲು ಹೋದ್ರೆ, ಅವಮಾನ ಮಾಡಿದ್ರು ಎಂದು ಮನನೊಂದು ಮೊಬೈಲ್‌ ವಿಡಿಯೋ‌ ಮಾಡುತ್ತಾ ನೂರಾರು ಮಾತ್ರೆಗಳನ್ನು ಒಂದೇ ಬಾರಿ ನುಂಗಿದ್ದರು. ಅಸ್ವಸ್ಥ ಮಾಧರಿಯನ್ನು ಆಸ್ಪತ್ರೆಗೆ ‌ದಾಖಲಿಸಲಾಗಿತ್ತು. ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.

ಇದನ್ನೂ ಓದಿ:ಬೆಳಗಾವಿ ಪಾಲಿಕೆ ಪೌರ ಕಾರ್ಮಿಕ ಆತ್ಮಹತ್ಯೆ; ಗುತ್ತಿಗೆದಾರನ ಕಿರುಕುಳವೇ ಕಾರಣವೆಂದು ಕುಟುಂಬಸ್ಥರ ಆರೋಪ

ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಸಾವು

ಆಸ್ಪತ್ರೆ ದಾಖಲಾಗಿದ್ದ ಮಹಿಳೆ ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗಿದೇ ಕೊನೆಯುಸಿರೆಳೆದಿದ್ದಾರೆ. ಇನ್ನು ವಿಡಿಯೋ ಅಲ್ಲಿ ಮಾಧುರಿ, ತಾನೂ ಟ್ಯಾಬ್ಲೆಟ್ ತೆಗದುಕೊಂಡ ಇಂದಲ್ಲ ನಾಳೆ ಸಾಯ್ತೀನಿ‌. ನನ್ನ ಸಾವಿಗೆ ನ್ಯಾಯ ಕೊಡಿಸುವಂತೆ ರಾಮನಗರ ಎಸ್ಪಿಗೆ ಮನವಿ ಮಾಡಿದ್ದರು. ಚನ್ನಪಟ್ಟಣ ಟೌನ್ ಇನ್ಸ್ ಪೆಕ್ಟರ್ ಶೋಭಾ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಆರೋಪಿಸಿದ್ದಾರೆ. ಈ ಘಟನೆ ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ