AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 3ನೇ ಅಲೆ ಭೀತಿ; ಪ್ರಸಿದ್ಧ ಅಂಬೆಗಾಲು ಕೃಷ್ಣ ದೇವಾಲಯ ಬಂದ್, ಭಕ್ತರಿಗೆ ನಿರಾಶೆ

Ambegalu Krishna Temple: ರಾಮನಗರ ಜಿಲ್ಲೆ ಚನ್ನಪಟ್ಟಣದ ಕಣ್ವ ನದಿ ತಟದಲ್ಲಿರುವ ಕಣ್ವ ಮಹರ್ಷಿಗಳಿಂದ ಪ್ರತಿಷ್ಠಾಪಿತವಾಗಿ ಪೂಜಿಸಲ್ಪಟ್ಟ ಐತಿಹಾಸಿಕ ದೇವಾಲಯವಾಗಿರುವ ಅಂಬೆಗಾಲು ಕೃಷ್ಣ ದೇವಾಲಯವನ್ನು ಬಂದ್ ಮಾಡಲಾಗಿದೆ.

ಕೊರೊನಾ 3ನೇ ಅಲೆ ಭೀತಿ; ಪ್ರಸಿದ್ಧ ಅಂಬೆಗಾಲು ಕೃಷ್ಣ ದೇವಾಲಯ ಬಂದ್, ಭಕ್ತರಿಗೆ ನಿರಾಶೆ
ಅಂಬೆಗಾಲು ಕೃಷ್ಣ ದೇವಾಲಯ (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 30, 2021 | 2:36 PM

Share

ರಾಮನಗರ: ಮಹಾಮಾರಿ ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಇತಿಹಾಸ ಪ್ರಸಿದ್ಧ ಅಂಬೆಗಾಲು ಕೃಷ್ಣ ದೇವಾಲಯ ಬಂದ್ ಮಾಡಿದೆ. ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಕೃಷ್ಣನ ಭಕ್ತರಿಗೆ ನಿರಾಶೆಯಾಗಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣದ ಕಣ್ವ ನದಿ ತಟದಲ್ಲಿರುವ ಕಣ್ವ ಮಹರ್ಷಿಗಳಿಂದ ಪ್ರತಿಷ್ಠಾಪಿತವಾಗಿ ಪೂಜಿಸಲ್ಪಟ್ಟ ಐತಿಹಾಸಿಕ ದೇವಾಲಯವಾಗಿರುವ ಅಂಬೆಗಾಲು ಕೃಷ್ಣ ದೇವಾಲಯವನ್ನು ಬಂದ್ ಮಾಡಲಾಗಿದೆ. ಈ ದೇವಾಲಯದಲ್ಲಿ ಶ್ರೀ ಕೃಷ್ಣ ಅಂಬೆಗಾಲಲ್ಲಿ ಕುಳಿತಿದ್ದು ದೇಶದಲ್ಲೇ ವಿಶೇಷವಾದ, ಅಪರೂಪದ ದೇವಾಲಯವಾಗಿದೆ. ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಕೃಷ್ಣನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು ಕೊರೊನಾ ನಿಯಮ ಉಲ್ಲಂಘನೆಯಾಗಬುವುದೆಂದು ದೇವಾಲಯವನ್ನು ಬಂದ್ ಮಾಡಲಾಗಿದೆ.

ಶ್ರೀಕೃಷ್ಣ ಜನ್ಮಾಷ್ಟಮಿಯಾದ ಇಂದು ಸಾಮಾನ್ಯವಾಗಿ ಭಕ್ತರು ತಮ್ಮ ಮಕ್ಕಳಿಗೆ ರಾಧೆ-ಕೃಷ್ಣನ ವೇಷಾ ಧರಿಸಿ ದೇವಾಲಯಕ್ಕೆ ಬರುತ್ತಾರೆ. ಹೀಗಾಗಿ ಇಲ್ಲಿ ಕೊರೊನಾ ಮೂರನೇ ಅಲೆ ಹೆಚ್ಚಾಗುವ, ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಭಕ್ತರು ದೇವಸ್ಥಾನದ ಬಾಗಿಲಲ್ಲೇ ಕೈ ಮುಗಿದು ತೆರಳುತ್ತಿದ್ದಾರೆ. ಕಳೆದ ಬಾರಿ ಕೂಡ ಕೊರೊನಾ 2ನೇ ಅಲೆಯಿಂದಾಗಿ ದೇವಸ್ಥಾನ ಮುಚ್ಚಲಾಗಿತ್ತು. ಈ ವರ್ಷ ಕೂಡ ಇದೇ ಪರಿಸ್ಥಿತಿ ಮುಂದುವರೆದಿದೆ.

ಇದನ್ನೂ ಓದಿ:  Krishna Janmashtami 2021: ಕೃಷ್ಣ ಜನ್ಮಾಷ್ಟಮಿ ವಿಶೇಷ: ತುಂಟ ಬಾಲಕ, ಕೊಳಲು ವಾದಕ, ಪ್ರೇಮಿ ಯುವಕ, ರಾಜತಂತ್ರ ನಿಪುಣ, ಧರ್ಮ ರಕ್ಷಕ ಶ್ರೀಕೃಷ್ಣ

Krishna Janmashtami 2021: ಶ್ರೀ ಕೃಷ್ಣನ 50 ಹೆಸರುಗಳು

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು