ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್​ ತವರು ಜಿಲ್ಲೆಯಲ್ಲೇ ಅನ್ನಭಾಗ್ಯ ಅಕ್ಕಿ ಕಳವು ಆರೋಪ; ಓರ್ವನ ಬಂಧನ

ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿರುವ ಟಿಎಪಿಸಿಎಂಎಸ್ ಗೋದಾಮಿನಲ್ಲಿದ್ದ 1500 ಕ್ವಿಂಟಾಲ್ ಅಕ್ಕಿ ಇದ್ದಕ್ಕಿದ್ದಂತೆ ಮಾಯವಾಗಿದೆ. ಇದೇ ಗೋದಾಮಿನಿಂದ ಚನ್ನಪಟ್ಟಣ ತಾಲೂಕಿನ 65 ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ವಿತರಣೆ ಮಾಡಲಾಗುತ್ತಿತ್ತು. ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಅನ್ನಭಾಗ್ಯ ಅಕ್ಕಿ ಗೋದಾಮಿನ ಸಿಬ್ಬಂದಿಯಿಂದಲೇ ಅವ್ಯವಹಾರ ಶಂಕೆ ವ್ಯಕ್ತವಾಗಿದೆ.

ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್​ ತವರು ಜಿಲ್ಲೆಯಲ್ಲೇ ಅನ್ನಭಾಗ್ಯ ಅಕ್ಕಿ ಕಳವು ಆರೋಪ; ಓರ್ವನ ಬಂಧನ
ರಾಮನಗರ
Edited By: ಕಿರಣ್ ಹನುಮಂತ್​ ಮಾದಾರ್

Updated on: Nov 22, 2023 | 9:59 PM

ರಾಮನಗರ, ನ.22: ಡಿಸಿಎಂ ಡಿಕೆ ತವರು ಜಿಲ್ಲೆಯಲ್ಲೇ ಅನ್ನಭಾಗ್ಯ ಯೋಜನಾ(Anna Bhagya Yojana) ಅಕ್ಕಿ ಕಳವು ಆರೋಪ ಕೇಳಿಬಂದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿರುವ ಟಿಎಪಿಸಿಎಂಎಸ್ ಗೋದಾಮಿನಲ್ಲಿದ್ದ 1500 ಕ್ವಿಂಟಾಲ್ ಅಕ್ಕಿ ಇದ್ದಕ್ಕಿದ್ದಂತೆ ಮಾಯವಾಗಿದೆ. ಇದೇ ಗೋದಾಮಿನಿಂದ ಚನ್ನಪಟ್ಟಣ ತಾಲೂಕಿನ 65 ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ವಿತರಣೆ ಮಾಡಲಾಗುತ್ತಿತ್ತು. ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಅನ್ನಭಾಗ್ಯ ಅಕ್ಕಿ ಗೋದಾಮಿನ ಸಿಬ್ಬಂದಿಯಿಂದಲೇ ಅವ್ಯವಹಾರ ಶಂಕೆ ವ್ಯಕ್ತವಾಗಿದೆ. ಕಳೆದ 6 ತಿಂಗಳಿನಿಂದ ಅನ್ನಭಾಗ್ಯ ಅಕ್ಕಿ ಕಳ್ಳತನ ಆಗಿರುವ ಅನುಮಾನ ಬಂದಿದೆ. ಈ ಹಿನ್ನಲೆ ಗೋದಾಮು ನಿರ್ವಹಣೆ ಮಾಡುತ್ತಿದ್ದ ನೌಕರ ಚಂದ್ರು ಎಂಬಾತನನ್ನು ಚನ್ನಪಟ್ಟಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.

50 ಲಕ್ಷ ರೂ. ಮೌಲ್ಯಕ್ಕೂ ಹೆಚ್ಚು ಮೊತ್ತದ ಅಕ್ಕಿ ಕಳವು ಆರೋಪ

ಇನ್ನು ಘಟನೆ ಸಂಬಂಧ ಓರ್ವನನ್ನು ಬಂಧಿಸಿದ್ದು, ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬರೊಬ್ಬರಿ 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಅನ್ನಭಾಗ್ಯ ಅಕ್ಕಿ ಕಳವು ಆಗಿರುವ ಆರೋಪ ಕೇಳಿಬಂದಿದೆ. ಇದು ಮುಖ್ಯವಾಗಿ ಡಿಸಿಎಂ ಡಿಕೆ ಶಿವಕುಮಾರ್​ ತವರು ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿದೆ. ಕೂಡಲೇ ಈ ಕುರಿತು ತನಿಖೆ ನಡೆಸಿ, ಅನ್ನಭಾಗ್ಯ ಅಕ್ಕಿಗೆ ಕನ್ನ ಹಾಕಿದವರನ್ನ ಬಂಧಿಸುವ ಕೆಲಸ ಮಾಡಬೇಕಾಗಿದೆ. ಜೊತೆಗೆ ಮತ್ತೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕಾಗಿದೆ.

ಇದನ್ನೂ ಓದಿ:ಅನ್ನಭಾಗ್ಯ ಅಕ್ಕಿ ಹೊರ ರಾಜ್ಯಕ್ಕೆ ಸಾಗಿಸುವ ಜಾಲ ಪತ್ತೆ: ಕಂಪ್ಲಿ ಶಾಸಕ ಜೆ.ಎನ್.ಗಣೇಶ್​​ ರಾತ್ರೋ ರಾತ್ರಿ‌ ದಾಳಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us