AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮೀ ಯೋಜನೆ ಪೋಸ್ಟರ್​ ವಿವಾದ; ಮುಸ್ಲಿಂ‌ ಯುವತಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಮನಗರ ಬಿಜೆಪಿ ಸದಸ್ಯ

ಆಗಸ್ಟ್ ತಿಂಗಳಾಂತ್ಯಕ್ಕೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಡುವೆ ಯೋಜನೆಯ ಪೋಸ್ಟರ್​​ನಲ್ಲಿರುವ ಮುಸ್ಲಿಂ ಮಹಿಳೆಯ ಬಗ್ಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಆಕೆ ಈ ದೇಶದ ಯುವತಿಯೇ ಎಂಬ ಪ್ರಶ್ನೆಯನ್ನು ಮಾಡುತ್ತಿದ್ದಾರೆ. ಅಲ್ಲದೆ, ಕೆಲವು ಪೋಸ್ಟರ್​ಗಳಲ್ಲಿ ಆಕೆಯ ಫೋಟೋ ಕಾಣಿಸದಿರುವುದು ಇವರ ಅನುಮಾನಕ್ಕೆ ಕಾರಣವಾಗಿದೆ.

ಗೃಹಲಕ್ಷ್ಮೀ ಯೋಜನೆ ಪೋಸ್ಟರ್​ ವಿವಾದ; ಮುಸ್ಲಿಂ‌ ಯುವತಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಮನಗರ ಬಿಜೆಪಿ ಸದಸ್ಯ
ಗೃಹಲಕ್ಷ್ಮೀ ಯೋಜನೆಯ ಪೋಸ್ಟರ್​ ವಿವಾದ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: Rakesh Nayak Manchi|

Updated on: Aug 13, 2023 | 7:25 PM

Share

ರಾಮನಗರ, ಆಗಸ್ಟ್ 13: ಆಗಸ್ಟ್ ತಿಂಗಳಾಂತ್ಯಕ್ಕೆ ಜಾರಿಯಾಗಲಿರುವ ಗೃಹಲಕ್ಷ್ಮೀ ಯೋಜನೆಯ ಪೋಸ್ಟರ್ (Gruha Lakshmi Scheme Poster) ಇದೀಗ ಆಕ್ಷೇಪಕ್ಕೆ ಕಾರಣವಾಗಿದೆ. ಫೋಟೋದಲ್ಲಿ ವಯಸ್ಸಾದ ಹಿಂದೂ ಮಹಿಳೆಯರ ಜಾತಿವಾರು ಫೋಟೋಗಳನ್ನು ಹಾಕಿದರೆ, ಕೆಲವು ಕಡೆಗಳಲ್ಲಿ ಮುಸ್ಲಿಂ ಯುವತಿಯ ಫೋಟೋ ಹಾಕಿದ್ದಾರೆ. ಈ ಮುಸ್ಲಿಂ ಯುವತಿ ನಿಜವಾಗಲೂ ಕರ್ನಾಟಕದವರಾ ಅಥವಾ ವಿದೇಶದವರಾ ಎಂಬ ಶಂಕೆ ವ್ಯಕ್ತವಾಗಿದೆ. ಇದರ ಜೊತೆಗೆ ಆಕೆಯ ಫೋಟೋ ಹಾಕಬೇಕೇ ಎಂಬ ಚರ್ಚೆ ಇಲಾಖೆ ಮಟ್ಟದಲ್ಲಿ ನಡೆಯುತ್ತಿದೆಯಾ ಎಂಬ ಅನುಮಾನ ಹುಟ್ಟುಹಾಕಿದೆ.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ರಾಮನಗರ ಬಿಜೆಪಿ ಸದಸ್ಯ ರಾಮಾಂಜನೇಯ, ಹೆಣ್ಣು ಮಕ್ಕಳು ಎಲ್ಲರೂ ಒಂದೆ. ಕೆಲವು ಕಡೆಗಳಲ್ಲಿ ಹಾಕಿರುವ ಪೋಸ್ಟರ್​ಗಲ್ಲಿ ಮೂರು ಫೋಟೋ, ಕೆಲವು ತಾಲೂಕಿನಲ್ಲಿ ನಾಲ್ಕು ಮಹಿಳೆಯರ ಫೋಟೋ ಹಾಕುತ್ತಿದ್ದಾರೆ. ಈ ರೀತಿಯ ಹೊಲಸು ರಾಜಕಾರಣ ಮಾಡಬಾರದು ಎಂದರು.

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿ

ಯೋಜನೆಯ ಫಲಾನುಭವಿ ಮನೆಯ ಹಿರಿಯ ಯಜಮಾನಿಯಾಗಿದ್ದಾಳೆ. ಆದರೆ ಈ ಪೋಸ್ಟರ್​ನಲ್ಲಿರುವ ಮುಸ್ಲಿಂ ಯುವತಿಯಾಗಿದ್ದಾರೆ. ಅಲ್ಲದೆ, ಬುರ್ಖಾ ತೊಟ್ಟಿರುವ ಆಕೆ ಕರ್ನಾಟಕದವರಾ ಎಂದು ಕಂಡುಹಿಡಿಯುವುದು ಹೇಗೆ? ಮುಸ್ಲಿಂ ಯುವತಿಯನ್ನು ನಿಲ್ಲಿಸಿ ಫೋಟೋಶೂಟ್ ಮಾಡಿದ ರೀತಿ ಕಾಣಿಸುತ್ತಿಲ್ಲ. ಜೊತೆಗೆ, ಹಿಂದೂ ಹಿರಿಯರ ಜೊತೆ ಅಂದದ ಮುಸ್ಲಿಂ ಯುವತಿಯ ಫೋಟೋ ಹಾಕುವ ಯಾವ ಸಂದೇಶ ರವಾನಿಸಲು ಹೊರಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಜಾತ್ಯತೀತ ಅಂತ ಹೇಳುವವರು ಹಿಜಾಬ್ ಧರಿಸಿದ ಯುವತಿಯ ಫೋಟೋ ಯಾಕೆ ಬಳಕೆ ಮಾಡುತ್ತಿದ್ದೀರಿ ಅಂತ ಪ್ರಶ್ನಿಸಿದ ರಾಮಾಂಜನೇಯ, ಕೆಲವು ಕಡೆ ಮುಸ್ಲಿಂ ಯುವತಿ ಫೋಟೋ ಇದೆ, ಇನ್ನೂ ಕೆಲವು ಕಡೆ ಇಲ್ಲ. ಹೀಗಾಗಿ ಮುಸ್ಲಿಂ‌ ಯುವತಿ ಕರ್ನಾಟಕದವರೋ ಅಥವಾ ಅಲ್ಲವೋ ಎಂಬ ಅನುಮಾನ ಇದೆ. ಕೂಡಲೇ ಪೋಸ್ಟರ್‌ ರದ್ದು ಪಡಿಸಿ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ