ಗೃಹಲಕ್ಷ್ಮೀ ಯೋಜನೆ ಪೋಸ್ಟರ್​ ವಿವಾದ; ಮುಸ್ಲಿಂ‌ ಯುವತಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಮನಗರ ಬಿಜೆಪಿ ಸದಸ್ಯ

ಆಗಸ್ಟ್ ತಿಂಗಳಾಂತ್ಯಕ್ಕೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಡುವೆ ಯೋಜನೆಯ ಪೋಸ್ಟರ್​​ನಲ್ಲಿರುವ ಮುಸ್ಲಿಂ ಮಹಿಳೆಯ ಬಗ್ಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಆಕೆ ಈ ದೇಶದ ಯುವತಿಯೇ ಎಂಬ ಪ್ರಶ್ನೆಯನ್ನು ಮಾಡುತ್ತಿದ್ದಾರೆ. ಅಲ್ಲದೆ, ಕೆಲವು ಪೋಸ್ಟರ್​ಗಳಲ್ಲಿ ಆಕೆಯ ಫೋಟೋ ಕಾಣಿಸದಿರುವುದು ಇವರ ಅನುಮಾನಕ್ಕೆ ಕಾರಣವಾಗಿದೆ.

ಗೃಹಲಕ್ಷ್ಮೀ ಯೋಜನೆ ಪೋಸ್ಟರ್​ ವಿವಾದ; ಮುಸ್ಲಿಂ‌ ಯುವತಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಮನಗರ ಬಿಜೆಪಿ ಸದಸ್ಯ
ಗೃಹಲಕ್ಷ್ಮೀ ಯೋಜನೆಯ ಪೋಸ್ಟರ್​ ವಿವಾದ
Edited By: Rakesh Nayak Manchi

Updated on: Aug 13, 2023 | 7:25 PM

ರಾಮನಗರ, ಆಗಸ್ಟ್ 13: ಆಗಸ್ಟ್ ತಿಂಗಳಾಂತ್ಯಕ್ಕೆ ಜಾರಿಯಾಗಲಿರುವ ಗೃಹಲಕ್ಷ್ಮೀ ಯೋಜನೆಯ ಪೋಸ್ಟರ್ (Gruha Lakshmi Scheme Poster) ಇದೀಗ ಆಕ್ಷೇಪಕ್ಕೆ ಕಾರಣವಾಗಿದೆ. ಫೋಟೋದಲ್ಲಿ ವಯಸ್ಸಾದ ಹಿಂದೂ ಮಹಿಳೆಯರ ಜಾತಿವಾರು ಫೋಟೋಗಳನ್ನು ಹಾಕಿದರೆ, ಕೆಲವು ಕಡೆಗಳಲ್ಲಿ ಮುಸ್ಲಿಂ ಯುವತಿಯ ಫೋಟೋ ಹಾಕಿದ್ದಾರೆ. ಈ ಮುಸ್ಲಿಂ ಯುವತಿ ನಿಜವಾಗಲೂ ಕರ್ನಾಟಕದವರಾ ಅಥವಾ ವಿದೇಶದವರಾ ಎಂಬ ಶಂಕೆ ವ್ಯಕ್ತವಾಗಿದೆ. ಇದರ ಜೊತೆಗೆ ಆಕೆಯ ಫೋಟೋ ಹಾಕಬೇಕೇ ಎಂಬ ಚರ್ಚೆ ಇಲಾಖೆ ಮಟ್ಟದಲ್ಲಿ ನಡೆಯುತ್ತಿದೆಯಾ ಎಂಬ ಅನುಮಾನ ಹುಟ್ಟುಹಾಕಿದೆ.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ರಾಮನಗರ ಬಿಜೆಪಿ ಸದಸ್ಯ ರಾಮಾಂಜನೇಯ, ಹೆಣ್ಣು ಮಕ್ಕಳು ಎಲ್ಲರೂ ಒಂದೆ. ಕೆಲವು ಕಡೆಗಳಲ್ಲಿ ಹಾಕಿರುವ ಪೋಸ್ಟರ್​ಗಲ್ಲಿ ಮೂರು ಫೋಟೋ, ಕೆಲವು ತಾಲೂಕಿನಲ್ಲಿ ನಾಲ್ಕು ಮಹಿಳೆಯರ ಫೋಟೋ ಹಾಕುತ್ತಿದ್ದಾರೆ. ಈ ರೀತಿಯ ಹೊಲಸು ರಾಜಕಾರಣ ಮಾಡಬಾರದು ಎಂದರು.

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿ

ಯೋಜನೆಯ ಫಲಾನುಭವಿ ಮನೆಯ ಹಿರಿಯ ಯಜಮಾನಿಯಾಗಿದ್ದಾಳೆ. ಆದರೆ ಈ ಪೋಸ್ಟರ್​ನಲ್ಲಿರುವ ಮುಸ್ಲಿಂ ಯುವತಿಯಾಗಿದ್ದಾರೆ. ಅಲ್ಲದೆ, ಬುರ್ಖಾ ತೊಟ್ಟಿರುವ ಆಕೆ ಕರ್ನಾಟಕದವರಾ ಎಂದು ಕಂಡುಹಿಡಿಯುವುದು ಹೇಗೆ? ಮುಸ್ಲಿಂ ಯುವತಿಯನ್ನು ನಿಲ್ಲಿಸಿ ಫೋಟೋಶೂಟ್ ಮಾಡಿದ ರೀತಿ ಕಾಣಿಸುತ್ತಿಲ್ಲ. ಜೊತೆಗೆ, ಹಿಂದೂ ಹಿರಿಯರ ಜೊತೆ ಅಂದದ ಮುಸ್ಲಿಂ ಯುವತಿಯ ಫೋಟೋ ಹಾಕುವ ಯಾವ ಸಂದೇಶ ರವಾನಿಸಲು ಹೊರಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಜಾತ್ಯತೀತ ಅಂತ ಹೇಳುವವರು ಹಿಜಾಬ್ ಧರಿಸಿದ ಯುವತಿಯ ಫೋಟೋ ಯಾಕೆ ಬಳಕೆ ಮಾಡುತ್ತಿದ್ದೀರಿ ಅಂತ ಪ್ರಶ್ನಿಸಿದ ರಾಮಾಂಜನೇಯ, ಕೆಲವು ಕಡೆ ಮುಸ್ಲಿಂ ಯುವತಿ ಫೋಟೋ ಇದೆ, ಇನ್ನೂ ಕೆಲವು ಕಡೆ ಇಲ್ಲ. ಹೀಗಾಗಿ ಮುಸ್ಲಿಂ‌ ಯುವತಿ ಕರ್ನಾಟಕದವರೋ ಅಥವಾ ಅಲ್ಲವೋ ಎಂಬ ಅನುಮಾನ ಇದೆ. ಕೂಡಲೇ ಪೋಸ್ಟರ್‌ ರದ್ದು ಪಡಿಸಿ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us