AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಯಲ್ಲಿ ಹೊತ್ತಿ ಉರಿದ ಹೂ ಗಿಡಗಳು

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಯ ಮಾಯಗಾನಹಳ್ಳಿ ಸಮೀಪ ಸುಂದರವಾಗಿ ಕಾಣಿಸಲು ರಾಷ್ಟ್ರೀಯ ಹೆದ್ದಾರಿಯ ಡಿವೈಡರ್​​ನಲ್ಲಿ ನೆಡಲಾಗಿದ್ದ ಹೂ, ಗಿಡಗಳಿಗೆ ಬೆಂಕಿ ತಗುಲಿಕೊಂಡಿದ್ದು, ನೂರಾರು ಹೂ ಗಿಡಗಳು ಸುಟ್ಟು ಕರಕಲಾಗಿವೆ. ನೀರಿನ ವಾಹನ ಬರಲು ತಡವಾದ ಹಿನ್ನೆಲೆ ಸಾರ್ವಜನಿಕರ ವಾಹನ ತಡೆದು ಪೊಲೀಸರು ನೀರು ಹಾಕುತ್ತಿದ್ದಾರೆ.

Ramanagara: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಯಲ್ಲಿ ಹೊತ್ತಿ ಉರಿದ ಹೂ ಗಿಡಗಳು
ಬೆಂಕಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on:Feb 02, 2024 | 3:34 PM

Share

ರಾಮನಗರ, ಫೆಬ್ರುವರಿ 2: ಬೆಂಕಿ (FIRE) ಕಿಡಿಯಿಂದಾಗಿ ಹೂ, ಗಿಡಗಳು ಹೊತ್ತಿ ಉರಿದಿರುವಂತಹ ಘಟನೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಯ ಮಾಯಗಾನಹಳ್ಳಿ ಸಮೀಪ ನಡೆದಿದೆ. ಸಿಗರೇಟ್ ಸೇದಿ ಬಿಸಾಕಿದ ಪರಿಣಾಮ ಕಿಡಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸುಂದರವಾಗಿ ಕಾಣಿಸಲು ರಾಷ್ಟ್ರೀಯ ಹೆದ್ದಾರಿಯ ಡಿವೈಡರ್​​ನಲ್ಲಿ ನೆಡಲಾಗಿದ್ದ ಹೂ, ಗಿಡಗಳಿಗೆ ಬೆಂಕಿ ತಗುಲಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಗೆ ಆವರಿಸಿಕೊಂಡಿದ್ದು, ಸಾರ್ವಜನಿಕರ ವಾಹನ ತಡೆದು ಪೊಲೀಸರು ನೀರು ಹಾಕುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಸುಂದರವಾಗಿ ಕಾಣಿಸಲು ಕೋಟ್ಯಾಂತರ ರೂ. ವೆಚ್ಚದಲ್ಲಿ ಗಿಡಗಳನ್ನು ಬೆಳೆಸುವುದಕ್ಕೆ ಖರ್ಚು ಮಾಡಲಾಗಿದೆ.

ನೀರಿನ ವಾಹನ ಬರಲು ತಡವಾದ ಹಿನ್ನೆಲೆ ಸಾರ್ವಜನಿಕರ ವಾಹನ ತಡೆದು ಬಾಟಲ್​ ನೀರು ಹಾಕಲಾಗುತ್ತಿದೆ. ಇನ್ನಷ್ಟು ಬೆಂಕಿ ಹರಡದಂತೆ ಪೊಲೀಸರು ಬಾಟಲ್ ನೀರು ಹಾಕುತ್ತಿದ್ದಾರೆ. ಎಷ್ಟೇ ಬಾಟಲ್ ನೀರು ಹಾಕಿದರೂ ಬೆಂಕಿ ಮಾತ್ರ ಆರುತ್ತಿಲ್ಲ.

ಭತ್ತದ ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ 

ಮಂಡ್ಯ: ಭತ್ತದ ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂ ಮೌಲ್ಯದ ಮೆದೆ ನಾಶವಾಗಿರುವ ಘಟನೆ ಮಂಡ್ಯ ತಾಲೂಕಿನ ಹಳೇ ಬೂದನೂರು ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ನೆಲಮಂಗಲ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಓರ್ವ ವ್ಯಕ್ತಿ ಸಜೀವ ದಹನ

ಗ್ರಾಮದ ರೈತರ ಮಧು ಎಂಬುವವರು ತಮ್ಮ ಜಮೀನನ ಬಳಿಯೆ ಮೆದೆ ಹಾಕಿದ್ದರು. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ಟ್ರಾನ್ಸಫಾರ್ಮರ್ ಸ್ಫೋಟ: ತಪ್ಪಿದ ಭಾರಿ ಅನಾಹುತ

ವಿಜಯಪುರ: ಜಿಲ್ಲೆಯ ತಿಕೋಟಾ ಪಟ್ಟಣದ ಜನವಸತಿ ಪ್ರದೇಶದಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ಸ್ಫೋಟಗೊಂಡು ಹೊತ್ತಿ ಉತಿದ ಘಟನೆ ಇತ್ತೀಚೆಗೆ ಜರುಗಿದ್ದು, ಸುದೈವಶಾತ ಯಾವುದೇ ಅಪಾಯ ಸಂಭವಿಸಿರಲಿಲ್ಲ. ಕಳೆದ ರಾತ್ರಿ ತಿಕೋಟಾ ಪಟ್ಟಣದ ಬನಶಂಕರಿ ನಗರದ ಮಹಾಂತೇಶ ಬಂದಿ ಎಂಬವರ ಮನೆಯ ಮುಂದಿನ ವಿದ್ಯುತ್ ಟ್ರಾನ್ಸಫಾರ್ಮರ್ ಏಕಾಏಕಿ ಸ್ಫೋಟಗೊಂಡಿದ್ದು, ಬೆಂಕಿಯಿಂದ ಹೊತ್ತಿ ಉರಿದಿತ್ತು.

ಇದನ್ನೂ ಓದಿ: ಪಬ್ ಬೆಂಕಿ ದುರಂತ, ಬೆಂಗಳೂರು; ಸುತ್ತಮುತ್ತ ಶಾಲಾ ಕಾಲೇಜುಗಳಿದ್ದರೂ ಪಬ್ ನಡೆಸಲು ಅನುಮತಿ ನೀಡಲಾಗಿದೆ: ಪ್ರತ್ಯಕ್ಷದರ್ಶಿ

ವಿದ್ಯುತ್ ಒತ್ತಡದಿಂದ ಟ್ರಾನ್ಸಫಾರ್ಮರ್ ಸ್ಫೋಟಗೊಂಡು ಬೆಂಕಿಯಿಂದ ಹೊತ್ತಿ ಉರಿದಿತ್ತು. ಸ್ಫೋಟದಿಂದ ತೀವ್ರತೆಯಿಂದಾಗಿ ಮಹಾಂತೇಶ ಅವರ ಮನೆಯ ಆವರಣದಲ್ಲಿ ಬೆಂಕಿ ಹರಡಿಕೊಂಡಿತ್ತು. ಸುದೈವಶಾತ ಮನೆಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಸಂಭವನೀಯ ಅಪಾಯ ತಪ್ಪಿದೆ. ಸ್ಫೋಟದ ದೃಶ್ಯ ಸಿಸಿ ಕೆಮೆರಾದಲ್ಲಿ ಸೆರೆಯಾಗಿದ್ದು, ಮನೆಗೆ ಹತ್ತಿರದಲ್ಲಿರುವ ಕಾರಣ ಟ್ರಾನ್ಸಫಾರ್ಮರ್ ಸ್ಥಳಾಂತರಕ್ಕೆ ಹಲವು ಬಾರಿ ಮನವಿ ಮಾಡಿದರೂ ಯಾರೂ ಸ್ಪಂದಿಸಿಲ್ಲ ಎಂದು ಮಹಾಂತೇಶ ಕುಟುಂಬದವರು ದೂರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:28 pm, Fri, 2 February 24

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್