AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಯಲ್ಲಿ ಹೊತ್ತಿ ಉರಿದ ಹೂ ಗಿಡಗಳು

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಯ ಮಾಯಗಾನಹಳ್ಳಿ ಸಮೀಪ ಸುಂದರವಾಗಿ ಕಾಣಿಸಲು ರಾಷ್ಟ್ರೀಯ ಹೆದ್ದಾರಿಯ ಡಿವೈಡರ್​​ನಲ್ಲಿ ನೆಡಲಾಗಿದ್ದ ಹೂ, ಗಿಡಗಳಿಗೆ ಬೆಂಕಿ ತಗುಲಿಕೊಂಡಿದ್ದು, ನೂರಾರು ಹೂ ಗಿಡಗಳು ಸುಟ್ಟು ಕರಕಲಾಗಿವೆ. ನೀರಿನ ವಾಹನ ಬರಲು ತಡವಾದ ಹಿನ್ನೆಲೆ ಸಾರ್ವಜನಿಕರ ವಾಹನ ತಡೆದು ಪೊಲೀಸರು ನೀರು ಹಾಕುತ್ತಿದ್ದಾರೆ.

Ramanagara: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಯಲ್ಲಿ ಹೊತ್ತಿ ಉರಿದ ಹೂ ಗಿಡಗಳು
ಬೆಂಕಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Feb 02, 2024 | 3:34 PM

Share

ರಾಮನಗರ, ಫೆಬ್ರುವರಿ 2: ಬೆಂಕಿ (FIRE) ಕಿಡಿಯಿಂದಾಗಿ ಹೂ, ಗಿಡಗಳು ಹೊತ್ತಿ ಉರಿದಿರುವಂತಹ ಘಟನೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಯ ಮಾಯಗಾನಹಳ್ಳಿ ಸಮೀಪ ನಡೆದಿದೆ. ಸಿಗರೇಟ್ ಸೇದಿ ಬಿಸಾಕಿದ ಪರಿಣಾಮ ಕಿಡಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸುಂದರವಾಗಿ ಕಾಣಿಸಲು ರಾಷ್ಟ್ರೀಯ ಹೆದ್ದಾರಿಯ ಡಿವೈಡರ್​​ನಲ್ಲಿ ನೆಡಲಾಗಿದ್ದ ಹೂ, ಗಿಡಗಳಿಗೆ ಬೆಂಕಿ ತಗುಲಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಗೆ ಆವರಿಸಿಕೊಂಡಿದ್ದು, ಸಾರ್ವಜನಿಕರ ವಾಹನ ತಡೆದು ಪೊಲೀಸರು ನೀರು ಹಾಕುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಸುಂದರವಾಗಿ ಕಾಣಿಸಲು ಕೋಟ್ಯಾಂತರ ರೂ. ವೆಚ್ಚದಲ್ಲಿ ಗಿಡಗಳನ್ನು ಬೆಳೆಸುವುದಕ್ಕೆ ಖರ್ಚು ಮಾಡಲಾಗಿದೆ.

ನೀರಿನ ವಾಹನ ಬರಲು ತಡವಾದ ಹಿನ್ನೆಲೆ ಸಾರ್ವಜನಿಕರ ವಾಹನ ತಡೆದು ಬಾಟಲ್​ ನೀರು ಹಾಕಲಾಗುತ್ತಿದೆ. ಇನ್ನಷ್ಟು ಬೆಂಕಿ ಹರಡದಂತೆ ಪೊಲೀಸರು ಬಾಟಲ್ ನೀರು ಹಾಕುತ್ತಿದ್ದಾರೆ. ಎಷ್ಟೇ ಬಾಟಲ್ ನೀರು ಹಾಕಿದರೂ ಬೆಂಕಿ ಮಾತ್ರ ಆರುತ್ತಿಲ್ಲ.

ಭತ್ತದ ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ 

ಮಂಡ್ಯ: ಭತ್ತದ ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂ ಮೌಲ್ಯದ ಮೆದೆ ನಾಶವಾಗಿರುವ ಘಟನೆ ಮಂಡ್ಯ ತಾಲೂಕಿನ ಹಳೇ ಬೂದನೂರು ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ನೆಲಮಂಗಲ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಓರ್ವ ವ್ಯಕ್ತಿ ಸಜೀವ ದಹನ

ಗ್ರಾಮದ ರೈತರ ಮಧು ಎಂಬುವವರು ತಮ್ಮ ಜಮೀನನ ಬಳಿಯೆ ಮೆದೆ ಹಾಕಿದ್ದರು. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ಟ್ರಾನ್ಸಫಾರ್ಮರ್ ಸ್ಫೋಟ: ತಪ್ಪಿದ ಭಾರಿ ಅನಾಹುತ

ವಿಜಯಪುರ: ಜಿಲ್ಲೆಯ ತಿಕೋಟಾ ಪಟ್ಟಣದ ಜನವಸತಿ ಪ್ರದೇಶದಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ಸ್ಫೋಟಗೊಂಡು ಹೊತ್ತಿ ಉತಿದ ಘಟನೆ ಇತ್ತೀಚೆಗೆ ಜರುಗಿದ್ದು, ಸುದೈವಶಾತ ಯಾವುದೇ ಅಪಾಯ ಸಂಭವಿಸಿರಲಿಲ್ಲ. ಕಳೆದ ರಾತ್ರಿ ತಿಕೋಟಾ ಪಟ್ಟಣದ ಬನಶಂಕರಿ ನಗರದ ಮಹಾಂತೇಶ ಬಂದಿ ಎಂಬವರ ಮನೆಯ ಮುಂದಿನ ವಿದ್ಯುತ್ ಟ್ರಾನ್ಸಫಾರ್ಮರ್ ಏಕಾಏಕಿ ಸ್ಫೋಟಗೊಂಡಿದ್ದು, ಬೆಂಕಿಯಿಂದ ಹೊತ್ತಿ ಉರಿದಿತ್ತು.

ಇದನ್ನೂ ಓದಿ: ಪಬ್ ಬೆಂಕಿ ದುರಂತ, ಬೆಂಗಳೂರು; ಸುತ್ತಮುತ್ತ ಶಾಲಾ ಕಾಲೇಜುಗಳಿದ್ದರೂ ಪಬ್ ನಡೆಸಲು ಅನುಮತಿ ನೀಡಲಾಗಿದೆ: ಪ್ರತ್ಯಕ್ಷದರ್ಶಿ

ವಿದ್ಯುತ್ ಒತ್ತಡದಿಂದ ಟ್ರಾನ್ಸಫಾರ್ಮರ್ ಸ್ಫೋಟಗೊಂಡು ಬೆಂಕಿಯಿಂದ ಹೊತ್ತಿ ಉರಿದಿತ್ತು. ಸ್ಫೋಟದಿಂದ ತೀವ್ರತೆಯಿಂದಾಗಿ ಮಹಾಂತೇಶ ಅವರ ಮನೆಯ ಆವರಣದಲ್ಲಿ ಬೆಂಕಿ ಹರಡಿಕೊಂಡಿತ್ತು. ಸುದೈವಶಾತ ಮನೆಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಸಂಭವನೀಯ ಅಪಾಯ ತಪ್ಪಿದೆ. ಸ್ಫೋಟದ ದೃಶ್ಯ ಸಿಸಿ ಕೆಮೆರಾದಲ್ಲಿ ಸೆರೆಯಾಗಿದ್ದು, ಮನೆಗೆ ಹತ್ತಿರದಲ್ಲಿರುವ ಕಾರಣ ಟ್ರಾನ್ಸಫಾರ್ಮರ್ ಸ್ಥಳಾಂತರಕ್ಕೆ ಹಲವು ಬಾರಿ ಮನವಿ ಮಾಡಿದರೂ ಯಾರೂ ಸ್ಪಂದಿಸಿಲ್ಲ ಎಂದು ಮಹಾಂತೇಶ ಕುಟುಂಬದವರು ದೂರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:28 pm, Fri, 2 February 24

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ