
ರಾಮನಗರ, ಜೂನ್ 26: ಅಡುಗೆ (cooking) ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಈ ವೇಳೆ ತುರಿಮಣೆಯಿಂದ ಹೊಡೆದು ಪತಿಯಿಂದ ಪತ್ನಿ (wife) ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ. ತಿಮ್ಮಮ್ಮ(65) ಹತ್ಯೆಗೈದ ರಂಗಯ್ಯ. ಹತ್ಯೆ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕರ ಎದುರೇ ಬ್ಲೇಡ್ನಿಂದ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹವಳಗಾ ಬಳಿ ನಡೆದಿದೆ. ವ್ಯಕ್ತಿ ಕತ್ತು ಕೊಯ್ದುಕೊಳ್ಳುವ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆ ಆಗಿದೆ.
ಇದನ್ನೂ ಓದಿ: ಬೆಂಗಳೂರಿಗೆ ಬಂತು ಗಾಂಜಾ ಮಿಶ್ರಿತ ಜೆಲ್ಲಿ ಚಾಕೊಲೇಟ್: ಪಾರ್ಸಲ್ ಸ್ವೀಕರಿಸುವಾಗಲೇ ಲಾಕ್
ಘಟನಾ ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕತ್ತು ಕೊಯ್ದುಕೊಂಡ ವ್ಯಕ್ತಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಪೊಲೀಸರು ಅಪರಿಚಿತ ವ್ಯಕ್ತಿಯ ಮಾಹಿತಿ ಕಲೆಹಾಕುತ್ತಿದ್ದಾರೆ.
ಮಹಿಳೆಯನ್ನು ಹಿಂಬಾಲಿಸಿದ ಖದೀಮರು ಸರಗಳ್ಳತನ ಮಾಡಿ ಪರಾರಿಯಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಸಂಜಪ್ಪ ಬಡಾವಣೆಯಲ್ಲಿ ನಡೆದಿದೆ. ಮಹಿಳೆಯ ಕೊರಳಲ್ಲಿದ್ದ ನಕಲಿ ಸರ ಕದ್ದು ಸರಗಳ್ಳರು ಪರಾರಿಯಾಗಿದ್ದಾರೆ. ಸರಗಳ್ಳತನದ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ.
ಇದನ್ನೂ ಓದಿ: ಸುಪಾರಿ ಕೊಟ್ಟವನನ್ನೇ ಕೊಂದರು: ಶಿಗ್ಗಾಂವಿ ಗುತ್ತಿಗೆದಾರನ ಹತ್ಯೆ ಹಿಂದೆ ರಾಸಲೀಲೆ, ವಿಡಿಯೋ ಫೋಟೋಗಳು
ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದ ಸರಗಳ್ಳರು ಸ್ಕೂಟರ್ ನಿಲ್ಲಿಸುತ್ತಿದ್ದಂತೆ ನಕಲಿ ಸರ ಕದ್ದು ಪರಾರಿ ಆಗಿದ್ದಾರೆ. ಸರಗಳ್ಳತನ ಕುರಿತು ದೂರು ನೀಡಿಲ್ಲ. ಹೀಗಾಗಿ ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:47 pm, Thu, 26 June 25