AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಒನ್ ವೇನಲ್ಲಿ ಶಾಲಾವಾಹನ ಚಲಾಯಿಸಿದ್ದ ಚಾಲಕನ ಬಂಧನ

ಬೆಂಗಳೂರು- ಮೈಸೂರು ಎಕ್ಸಪ್ರೇಸ್ ವೇನಲ್ಲಿ ನಿನ್ನೆ(ಸೆ. 13) ಒನ್ ವೇಯಲ್ಲಿ ಶಾಲಾವಾಹನ ಚಲಾಯಿಸಿ ದುಸ್ಸಾಹಸ ಮೆರೆದಿದ್ದ ಚಾಲಕನನ್ನು ಗುರುವಾರ ಬಂಧಿಸಲಾಗಿದೆ. ಎಡಿಜಿಪಿ ಅಲೋಕ್ ಕುಮಾರ್​ ಆದೇಶ ಬೆನ್ನೆಲೆ ಕುಂಬಳಗೋಡು ಪೊಲೀಸರು ಹುಡುಕಾಟ ನಡೆಸಿ, ಕೊನೆಗೂ ಶಾಲಾವಾಹನ‌ ಚಾಲಕ ಮತ್ತು ಬಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ರಾಮನಗರ: ಒನ್ ವೇನಲ್ಲಿ ಶಾಲಾವಾಹನ ಚಲಾಯಿಸಿದ್ದ ಚಾಲಕನ ಬಂಧನ
ಬಂಧಿತ ಚಾಲಕ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Sep 14, 2023 | 9:50 PM

Share

ರಾಮನಗರ, ಸೆಪ್ಟೆಂಬರ್​ 14: ಬೆಂಗಳೂರು- ಮೈಸೂರು ಎಕ್ಸಪ್ರೇಸ್ ವೇನಲ್ಲಿ ನಿನ್ನೆ(ಸೆ. 13) ಒನ್ ವೇಯಲ್ಲಿ ಶಾಲಾವಾಹನ ಚಲಾಯಿಸಿ ದುಸ್ಸಾಹಸ ಮೆರೆದಿದ್ದ ಚಾಲಕ (driver) ನನ್ನು ಗುರುವಾರ ಬಂಧಿಸಲಾಗಿದೆ. ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ನಿನ್ನೆ ಬೆಳಗ್ಗೆ ಎಡಿಜಿಪಿ ಅಲೋಕ್ ಕುಮಾರ್​ರಿಂದ ಆದೇಶ ನೀಡಲಾಗಿತ್ತು. ಆದೇಶ ಬೆನ್ನೆಲೆ ಕುಂಬಳಗೋಡು ಪೊಲೀಸರು ಹುಡುಕಾಟ ನಡೆಸಿ, ಕೊನೆಗೂ ಶಾಲಾವಾಹನ‌ ಚಾಲಕ ಮತ್ತು ಬಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹನ್ನೆರಕ್ಕೂ ಹೆಚ್ಚು ಮಕ್ಕಳ‌ ಪ್ರಾಣದ ಜತೆ ಚೆಲ್ಲಾಟವಾಡಿದ ಚಾಲಕನ ದುಸ್ಸಾಹಸ ಇತರೆ ಕಾರಿನ ಮುಂಭಾಗದ ಕ್ಯಾಮೆರಾದಲ್ಲಿ ವಿಡಿಯೋ ಸೆರೆ ಆಗಿತ್ತು. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕೂಡ ಡೇಂಜರ್ ಡ್ರೈವ್ ವಿಡಿಯೋ ವೈರಲ್​ ಆಗಿತ್ತು.

ಇದನ್ನೂ ಓದಿ: Video: ಒನ್ ವೇಯಲ್ಲಿ ನುಗ್ಗಿದ ಶಾಲಾವಾಹನ: 12 ಮಕ್ಕಳ‌ ಪ್ರಾಣದ ಜತೆ ಚಾಲಕ ಚೆಲ್ಲಾಟ

ಘಟನೆ ನಡೆದ ತಕ್ಷಣ ಶಾಲಾ ಮಂಡಳಿ ಕ್ರಮ ಕೈಗೊಂಡಿದ್ದು, ಎರಡು ತಿಂಗಳ ಹಿಂದೆಯೇ ಚಾಲಕನನ್ನು ಕೆಲಸದಿಂದ ತೆಗೆಯಲಾಗಿತ್ತು. ಆದರೆ ವಿಡಿಯೋ ವೈರಲ್ ಆದ ಬಳಿಕ ಚಾಲಕ ಮತ್ತು ವಾಹನವನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ. ಕುಂಬಳಗೋಡು ಪೊಲೀಸರ ಕಾರ್ಯಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಡಿಜಿಪಿ ಅಲೋಕ್ ಕುಮಾರ್​ ಟ್ವೀಟ್ ಹೀಗಿದೆ

ಘಟನೆ ಕುರಿತಾಗಿ ಎಡಿಜಿಪಿ ಅಲೋಕ್ ಕುಮಾರ್​ ಟ್ವೀಟ್​ ಮಾಡಿದ್ದು, ವೈರಲ್​ ಆದ ವಿಡಿಯೋ ಹಳೆಯದು. ಘಟನೆ ನಡೆದ ತಕ್ಷಣ ಶಾಲಾ ಮಂಡಳಿ ಚಾಲಕನ ವಿರುದ್ದ ಕ್ರಮಕೈಗೊಂಡಿದ್ದು, ಎರಡು ತಿಂಗಳ ಹಿಂದೆಯೇ ಕೆಲಸದಿಂದ ತೆಗೆದು ಹಾಕಲಾಗಿದೆ. ಆದರೂ ನಿನ್ನೆ ಎಫ್ಐಆರ್ ದಾಖಲಾಗಿದ್ದು, ಇಂದು ಬಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಚಾಲಕನನ್ನು ಬಂಧಿಸಲಾಗಿದೆ. ಎಸ್ಪಿ ನೇತೃತ್ವದಲ್ಲಿ ರಾಮನಗರ ಪೊಲೀಸರು ಅತ್ಯಂತ ಕ್ಷಿಪ್ರವಾಗಿ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್