Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಒನ್ ವೇನಲ್ಲಿ ಶಾಲಾವಾಹನ ಚಲಾಯಿಸಿದ್ದ ಚಾಲಕನ ಬಂಧನ

ಬೆಂಗಳೂರು- ಮೈಸೂರು ಎಕ್ಸಪ್ರೇಸ್ ವೇನಲ್ಲಿ ನಿನ್ನೆ(ಸೆ. 13) ಒನ್ ವೇಯಲ್ಲಿ ಶಾಲಾವಾಹನ ಚಲಾಯಿಸಿ ದುಸ್ಸಾಹಸ ಮೆರೆದಿದ್ದ ಚಾಲಕನನ್ನು ಗುರುವಾರ ಬಂಧಿಸಲಾಗಿದೆ. ಎಡಿಜಿಪಿ ಅಲೋಕ್ ಕುಮಾರ್​ ಆದೇಶ ಬೆನ್ನೆಲೆ ಕುಂಬಳಗೋಡು ಪೊಲೀಸರು ಹುಡುಕಾಟ ನಡೆಸಿ, ಕೊನೆಗೂ ಶಾಲಾವಾಹನ‌ ಚಾಲಕ ಮತ್ತು ಬಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ರಾಮನಗರ: ಒನ್ ವೇನಲ್ಲಿ ಶಾಲಾವಾಹನ ಚಲಾಯಿಸಿದ್ದ ಚಾಲಕನ ಬಂಧನ
ಬಂಧಿತ ಚಾಲಕ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 14, 2023 | 9:50 PM

ರಾಮನಗರ, ಸೆಪ್ಟೆಂಬರ್​ 14: ಬೆಂಗಳೂರು- ಮೈಸೂರು ಎಕ್ಸಪ್ರೇಸ್ ವೇನಲ್ಲಿ ನಿನ್ನೆ(ಸೆ. 13) ಒನ್ ವೇಯಲ್ಲಿ ಶಾಲಾವಾಹನ ಚಲಾಯಿಸಿ ದುಸ್ಸಾಹಸ ಮೆರೆದಿದ್ದ ಚಾಲಕ (driver) ನನ್ನು ಗುರುವಾರ ಬಂಧಿಸಲಾಗಿದೆ. ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ನಿನ್ನೆ ಬೆಳಗ್ಗೆ ಎಡಿಜಿಪಿ ಅಲೋಕ್ ಕುಮಾರ್​ರಿಂದ ಆದೇಶ ನೀಡಲಾಗಿತ್ತು. ಆದೇಶ ಬೆನ್ನೆಲೆ ಕುಂಬಳಗೋಡು ಪೊಲೀಸರು ಹುಡುಕಾಟ ನಡೆಸಿ, ಕೊನೆಗೂ ಶಾಲಾವಾಹನ‌ ಚಾಲಕ ಮತ್ತು ಬಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹನ್ನೆರಕ್ಕೂ ಹೆಚ್ಚು ಮಕ್ಕಳ‌ ಪ್ರಾಣದ ಜತೆ ಚೆಲ್ಲಾಟವಾಡಿದ ಚಾಲಕನ ದುಸ್ಸಾಹಸ ಇತರೆ ಕಾರಿನ ಮುಂಭಾಗದ ಕ್ಯಾಮೆರಾದಲ್ಲಿ ವಿಡಿಯೋ ಸೆರೆ ಆಗಿತ್ತು. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕೂಡ ಡೇಂಜರ್ ಡ್ರೈವ್ ವಿಡಿಯೋ ವೈರಲ್​ ಆಗಿತ್ತು.

ಇದನ್ನೂ ಓದಿ: Video: ಒನ್ ವೇಯಲ್ಲಿ ನುಗ್ಗಿದ ಶಾಲಾವಾಹನ: 12 ಮಕ್ಕಳ‌ ಪ್ರಾಣದ ಜತೆ ಚಾಲಕ ಚೆಲ್ಲಾಟ

ಘಟನೆ ನಡೆದ ತಕ್ಷಣ ಶಾಲಾ ಮಂಡಳಿ ಕ್ರಮ ಕೈಗೊಂಡಿದ್ದು, ಎರಡು ತಿಂಗಳ ಹಿಂದೆಯೇ ಚಾಲಕನನ್ನು ಕೆಲಸದಿಂದ ತೆಗೆಯಲಾಗಿತ್ತು. ಆದರೆ ವಿಡಿಯೋ ವೈರಲ್ ಆದ ಬಳಿಕ ಚಾಲಕ ಮತ್ತು ವಾಹನವನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ. ಕುಂಬಳಗೋಡು ಪೊಲೀಸರ ಕಾರ್ಯಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಡಿಜಿಪಿ ಅಲೋಕ್ ಕುಮಾರ್​ ಟ್ವೀಟ್ ಹೀಗಿದೆ

ಘಟನೆ ಕುರಿತಾಗಿ ಎಡಿಜಿಪಿ ಅಲೋಕ್ ಕುಮಾರ್​ ಟ್ವೀಟ್​ ಮಾಡಿದ್ದು, ವೈರಲ್​ ಆದ ವಿಡಿಯೋ ಹಳೆಯದು. ಘಟನೆ ನಡೆದ ತಕ್ಷಣ ಶಾಲಾ ಮಂಡಳಿ ಚಾಲಕನ ವಿರುದ್ದ ಕ್ರಮಕೈಗೊಂಡಿದ್ದು, ಎರಡು ತಿಂಗಳ ಹಿಂದೆಯೇ ಕೆಲಸದಿಂದ ತೆಗೆದು ಹಾಕಲಾಗಿದೆ. ಆದರೂ ನಿನ್ನೆ ಎಫ್ಐಆರ್ ದಾಖಲಾಗಿದ್ದು, ಇಂದು ಬಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಚಾಲಕನನ್ನು ಬಂಧಿಸಲಾಗಿದೆ. ಎಸ್ಪಿ ನೇತೃತ್ವದಲ್ಲಿ ರಾಮನಗರ ಪೊಲೀಸರು ಅತ್ಯಂತ ಕ್ಷಿಪ್ರವಾಗಿ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ