ರಾಮನಗರ: ಒನ್ ವೇನಲ್ಲಿ ಶಾಲಾವಾಹನ ಚಲಾಯಿಸಿದ್ದ ಚಾಲಕನ ಬಂಧನ

ಬೆಂಗಳೂರು- ಮೈಸೂರು ಎಕ್ಸಪ್ರೇಸ್ ವೇನಲ್ಲಿ ನಿನ್ನೆ(ಸೆ. 13) ಒನ್ ವೇಯಲ್ಲಿ ಶಾಲಾವಾಹನ ಚಲಾಯಿಸಿ ದುಸ್ಸಾಹಸ ಮೆರೆದಿದ್ದ ಚಾಲಕನನ್ನು ಗುರುವಾರ ಬಂಧಿಸಲಾಗಿದೆ. ಎಡಿಜಿಪಿ ಅಲೋಕ್ ಕುಮಾರ್​ ಆದೇಶ ಬೆನ್ನೆಲೆ ಕುಂಬಳಗೋಡು ಪೊಲೀಸರು ಹುಡುಕಾಟ ನಡೆಸಿ, ಕೊನೆಗೂ ಶಾಲಾವಾಹನ‌ ಚಾಲಕ ಮತ್ತು ಬಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ರಾಮನಗರ: ಒನ್ ವೇನಲ್ಲಿ ಶಾಲಾವಾಹನ ಚಲಾಯಿಸಿದ್ದ ಚಾಲಕನ ಬಂಧನ
ಬಂಧಿತ ಚಾಲಕ
Edited By:

Updated on: Sep 14, 2023 | 9:50 PM

ರಾಮನಗರ, ಸೆಪ್ಟೆಂಬರ್​ 14: ಬೆಂಗಳೂರು- ಮೈಸೂರು ಎಕ್ಸಪ್ರೇಸ್ ವೇನಲ್ಲಿ ನಿನ್ನೆ(ಸೆ. 13) ಒನ್ ವೇಯಲ್ಲಿ ಶಾಲಾವಾಹನ ಚಲಾಯಿಸಿ ದುಸ್ಸಾಹಸ ಮೆರೆದಿದ್ದ ಚಾಲಕ (driver) ನನ್ನು ಗುರುವಾರ ಬಂಧಿಸಲಾಗಿದೆ. ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ನಿನ್ನೆ ಬೆಳಗ್ಗೆ ಎಡಿಜಿಪಿ ಅಲೋಕ್ ಕುಮಾರ್​ರಿಂದ ಆದೇಶ ನೀಡಲಾಗಿತ್ತು. ಆದೇಶ ಬೆನ್ನೆಲೆ ಕುಂಬಳಗೋಡು ಪೊಲೀಸರು ಹುಡುಕಾಟ ನಡೆಸಿ, ಕೊನೆಗೂ ಶಾಲಾವಾಹನ‌ ಚಾಲಕ ಮತ್ತು ಬಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹನ್ನೆರಕ್ಕೂ ಹೆಚ್ಚು ಮಕ್ಕಳ‌ ಪ್ರಾಣದ ಜತೆ ಚೆಲ್ಲಾಟವಾಡಿದ ಚಾಲಕನ ದುಸ್ಸಾಹಸ ಇತರೆ ಕಾರಿನ ಮುಂಭಾಗದ ಕ್ಯಾಮೆರಾದಲ್ಲಿ ವಿಡಿಯೋ ಸೆರೆ ಆಗಿತ್ತು. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕೂಡ ಡೇಂಜರ್ ಡ್ರೈವ್ ವಿಡಿಯೋ ವೈರಲ್​ ಆಗಿತ್ತು.

ಇದನ್ನೂ ಓದಿ: Video: ಒನ್ ವೇಯಲ್ಲಿ ನುಗ್ಗಿದ ಶಾಲಾವಾಹನ: 12 ಮಕ್ಕಳ‌ ಪ್ರಾಣದ ಜತೆ ಚಾಲಕ ಚೆಲ್ಲಾಟ

ಘಟನೆ ನಡೆದ ತಕ್ಷಣ ಶಾಲಾ ಮಂಡಳಿ ಕ್ರಮ ಕೈಗೊಂಡಿದ್ದು, ಎರಡು ತಿಂಗಳ ಹಿಂದೆಯೇ ಚಾಲಕನನ್ನು ಕೆಲಸದಿಂದ ತೆಗೆಯಲಾಗಿತ್ತು. ಆದರೆ ವಿಡಿಯೋ ವೈರಲ್ ಆದ ಬಳಿಕ ಚಾಲಕ ಮತ್ತು ವಾಹನವನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ. ಕುಂಬಳಗೋಡು ಪೊಲೀಸರ ಕಾರ್ಯಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಡಿಜಿಪಿ ಅಲೋಕ್ ಕುಮಾರ್​ ಟ್ವೀಟ್ ಹೀಗಿದೆ

ಘಟನೆ ಕುರಿತಾಗಿ ಎಡಿಜಿಪಿ ಅಲೋಕ್ ಕುಮಾರ್​ ಟ್ವೀಟ್​ ಮಾಡಿದ್ದು, ವೈರಲ್​ ಆದ ವಿಡಿಯೋ ಹಳೆಯದು. ಘಟನೆ ನಡೆದ ತಕ್ಷಣ ಶಾಲಾ ಮಂಡಳಿ ಚಾಲಕನ ವಿರುದ್ದ ಕ್ರಮಕೈಗೊಂಡಿದ್ದು, ಎರಡು ತಿಂಗಳ ಹಿಂದೆಯೇ ಕೆಲಸದಿಂದ ತೆಗೆದು ಹಾಕಲಾಗಿದೆ. ಆದರೂ ನಿನ್ನೆ ಎಫ್ಐಆರ್ ದಾಖಲಾಗಿದ್ದು, ಇಂದು ಬಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಚಾಲಕನನ್ನು ಬಂಧಿಸಲಾಗಿದೆ. ಎಸ್ಪಿ ನೇತೃತ್ವದಲ್ಲಿ ರಾಮನಗರ ಪೊಲೀಸರು ಅತ್ಯಂತ ಕ್ಷಿಪ್ರವಾಗಿ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us