AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟಲ್​​​ನಲ್ಲಿ ಮಲಗಿದ್ದಲ್ಲೇ ಹೆಣವಾದ ಯುವಕ: ಸಾವಿನ ಹಿಂದೆ ಮಹಿಳೆಯ ಕರಿನೆರಳು?

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ಬಳಿಯ ಕದಂಬ ಹೋಟೆಲ್​​ನಲ್ಲೇ ನೆತ್ತರು ಹರಿದಿದೆ. ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಸದ್ಯ ಈ ಪ್ರಕರಣ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಹೋಟಲ್​​​ನಲ್ಲಿ ಮಲಗಿದ್ದಲ್ಲೇ ಹೆಣವಾದ ಯುವಕ: ಸಾವಿನ ಹಿಂದೆ ಮಹಿಳೆಯ ಕರಿನೆರಳು?
ಕೊಲೆಯಾದ ನಿಶಾಂತ್
ಪ್ರಶಾಂತ್​ ಬಿ.
| Edited By: |

Updated on:Nov 14, 2025 | 4:03 PM

Share

ರಾಮನಗರ, ನವೆಂಬರ್​ 14: ಆತ ಖಾಸಗಿ ಹೋಟೆಲ್​​​ವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ (Security guard) ಆಗಿ ಕೆಲಸ ಮಾಡುತ್ತಿದ್ದ. ಎಂದಿನಂತೆ ಗುರುವಾರ ರಾತ್ರಿ ಕೂಡ ಕೆಲಸಕ್ಕೆ ಬಂದವನು ಹೋಟೆಲ್​ನಲ್ಲಿ ಮಲಗಿದ್ದ. ಆದರೆ ತಡರಾತ್ರಿ ದುಷ್ಕರ್ಮಿಗಳು ಆತನನ್ನು ಭೀಕರವಾಗಿ ಕೊಲೆ (kill) ಮಾಡಿದ್ದಾರೆ. ನಿಶಾಂತ್ (25) ಕೊಲೆಯಾದ ಯುವಕ. ಹತ್ಯೆ ನಂತರ ಸಿಸಿ ಕ್ಯಾಮೆರಾದ ಡಿವಿಆರ್​​ ಅನ್ನು ಸಹ ತೆಗೆದುಕೊಂಡು ಹೋಗಿದ್ದಾರೆ. ಸದ್ಯ ಯುವಕನ ಹತ್ಯೆ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ನಡೆದದ್ದೇನು?

ರಾಮನಗರ ತಾಲೂಕಿನ ಬಿಡದಿ ಸಮೀಪದ ಲಕ್ಷ್ಮಿಸಾಗರ ಗ್ರಾಮದ ಬಳಿಯ ಬೆಂಗಳೂರು-ಮೈಸೂರು ‌ಹೆದ್ದಾರಿ ಪಕ್ಕದಲ್ಲಿರುವ ಕದಂಬ ಹೋಟೆಲ್​​ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ನಿಶಾಂತ್​​​ನನ್ನು ದುಷ್ಕರ್ಮಿಗಳು ಹೋಟೆಲ್​ನಲ್ಲಿಯೇ ಮಾರಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಒಂದೇ ಹುಡುಗಿ ಮೇಲೆ ಇಬ್ಬರಿಗೆ ಲವ್​: ಹುಬ್ಬಳ್ಳಿಯಲ್ಲಿ ಹರಿದಿದ್ದು ನೆತ್ತರ ಕೋಡಿ

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕೊಂಡಾಪುರ ಗ್ರಾಮದ ನಿಶಾಂತ್, ಕಳೆದ ಎರಡುವರೆ ತಿಂಗಳಿಂದ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ರಾತ್ರಿ ವೇಳೆ ಹೋಟಲ್ ಕಾವಲು ಕಾಯುತ್ತಿದ್ದ ನಿಶಾಂತ್, ನಿನ್ನೆ ರಾತ್ರಿ ಕೂಡ ಕೆಲಸಕ್ಕೆ ಬಂದಿದ್ದ. 12 ಗಂಟೆ ವೇಳೆ ಹೋಟೆಲ್​ಗೆ ಹಾಲು ಸಹ ಇಳಿಸಿಕೊಂಡಿದ್ದ. ಆದರೆ ಆನಂತರ ಎಂಟ್ರಿ ಕೊಟ್ಟ ದುಷ್ಕರ್ಮಿಗಳು ಆತನನ್ನು ಕೊಲೆ ಮಾಡಿದ್ದಾರೆ.

ಮಹಿಳೆಗೆ ಮೆಸೇಜ್ ಮಾಡಿದ್ದ ನಿಶಾಂತ್ 

ಅಂದಹಾಗೆ ಸೆಕ್ಯೂರಿಟಿ ಗಾರ್ಡ್ ‌ನಿಶಾಂತ್ ಕೊಲೆ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ರಾತ್ರಿ ವೇಳೆ ಕದಂಬ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ನಿಶಾಂತ್, ಬೆಳಗಿನ ಸಮಯದಲ್ಲಿ ಬೆಂಗಳೂರಿನ ಕೋಣನಕುಂಟೆಯಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚಿಗೆ ಓರ್ವ ಮಹಿಳೆಗೆ ವಾಟ್ಸಪ್ ಮೂಲಕ ಮೆಸೇಜ್ ಮಾಡಿದ್ದ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಪೊಲೀಸರು ನಿಶಾಂತ್​​ನನ್ನ ಕರೆಸಿ ಎಚ್ಚರಿಕೆ ನೀಡಿ‌ ಕಳುಹಿಸಿದ್ದರು.

ಇನ್ನು ಗ್ರಾಮದಲ್ಲಿ ಯಾರೊಂದಿಗೂ ವೈಷಮ್ಯ ಮಾಡಿಕೊಳ್ಳದ ನಿಶಾಂತ್​ಗೆ ಯಾರು ಶತ್ರುಗಳಿರಲಿಲ್ಲ. ಹೀಗಿರುವಾಗ ಕೊಲೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಈ ನಿಟ್ಟಿನಲ್ಲಿ ಕೂಡ ಬಿಡದಿ ಪೊಲೀಸರು ‌ತನಿಖೆ ನಡೆಸುತ್ತಿದ್ದಾರೆ. ಎಸ್​ಪಿ ಶ್ರೀನಿವಾಸ್ ಗೌಡ ಸಹ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಆಸ್ತಿ ಆಸೆ, ಹಣದ ಮೇಲೆ ಮೋಹ: ಸ್ಕೆಚ್​ ಹಾಕಿ ಸಾಕು ತಾಯಿಯನ್ನೇ ಮುಗಿಸಿದ ಮಗಳು

ಒಟ್ಟಾರೆ ತಡರಾತ್ರಿ ‌ಹೋಟೆಲ್​ನಲ್ಲಿ ನಡೆದಿರುವ ಯುವಕನ ಭೀಕರ ಹತ್ಯೆ ಬಿಡದಿ ಭಾಗದ ಜನರನ್ನ ಬೆಚ್ಚಿ ಬೀಳುವಂತೆ ಮಾಡಿದೆ. ಈ ನಿಟ್ಟಿನಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಠಾಣೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:57 pm, Fri, 14 November 25

ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!
ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ: ಡಿಕೆ ಶಿವಕುಮಾರ್
ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ: ಡಿಕೆ ಶಿವಕುಮಾರ್
ಎರಡಂಕಿ ಮೊತ್ತಕ್ಕೆ ನಮೀಬಿಯ ಆಲೌಟ್: ಭಾರತಕ್ಕೆ ಭರ್ಜರಿ ಜಯ
ಎರಡಂಕಿ ಮೊತ್ತಕ್ಕೆ ನಮೀಬಿಯ ಆಲೌಟ್: ಭಾರತಕ್ಕೆ ಭರ್ಜರಿ ಜಯ