Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಅಂತರ್ ಜಿಲ್ಲಾ ಮನೆ, ಸರಗಳ್ಳರ ಬಂಧನ; 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

ಅದೊಂದು ಖತರ್ನಾಕ್ ಗ್ಯಾಂಗ್. ಹಳ್ಳಿಗಳಲ್ಲಿ ರಂಗೋಲಿ ಹಾಗೂ ಫಿನಾಯಲ್ ಮಾರುವ ನೆಪದಲ್ಲಿ ಬೀಗ ಹಾಕಿರೋ ಮನೆಗಳನ್ನ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದರು, ಮತ್ತೊಂದೆಡೆ ಎದುರಿಗೆ ಸಿಗುವ ಮಹಿಳೆಯರ ಮಾಂಗಲ್ಯ ಸರಗಳನ್ನ ಕ್ಷಣಾರ್ಧದಲ್ಲಿ ಎಗರಿಸಿ ಎಸ್ಕೇಪ್ ಆಗುತ್ತಿದ್ರು, ಇದೀಗ ಕೊನೆಗೂ ಪೊಲೀಸರ ಕೈಗೆ ಸಿಕ್ಕಿದ್ದಾರೆ.

ರಾಮನಗರ: ಅಂತರ್ ಜಿಲ್ಲಾ ಮನೆ, ಸರಗಳ್ಳರ ಬಂಧನ; 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ
ರಾಮನಗರ ಮನೆ, ಸರಗಳ್ಳರ ಬಂಧನ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 09, 2023 | 2:14 PM

ರಾಮನಗರ: ಜಿಲ್ಲೆಯ ಜನರ ಹಾಗೂ ಪೊಲೀಸರ ನಿದ್ದೆಗೆಡಿಸಿದ್ದ ಖತರ್ನಾಕ್​ಗಳು ಕೊನೆಗೂ ಪೊಲೀಸರ ಖೆಡ್ಡಾಗೆ ಬಿದ್ದಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಅಂತರ್ ಜಿಲ್ಲಾ ಮನೆ ಹಾಗೂ ಸರಗಳ್ಳರನ್ನ ಬಂಧಿಸಿ, ಬಂಧಿತರಿಂದ ಸುಮಾರು 20 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನ ವಶಕ್ಕೆ ಪಡೆದಿದ್ದಾರೆ. ಅಂದಹಾಗೆ ಜನವರಿ 20ರಂದು ರಾಮನಗರ ತಾಲೂಕಿನ ಸೀಬಕಟ್ಟೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯ ಬೀಗ ಹೊಡೆದು ಮನೆಯಲ್ಲಿ ಇದ್ದ 190 ಗ್ರಾಂ ಚಿನ್ನಾಭರಣಗಳನ್ನ ದೋಚಿದ್ರು. ಅಲ್ಲದೆ ರಾಮನಗರ ತಾಲೂಕಿನ ಪಾಲಭೋವಿದೊಡ್ಡಿ ಗ್ರಾಮದ ಬಳಿ ಹೋಗುತ್ತಿದ್ದ ಐವರು ಮಹಿಳೆಯರಲ್ಲಿ ಪ್ರೇಮಾ ಹಾಗೂ ಚನ್ನಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಬೈಕ್​ನಲ್ಲಿ ಪರಾರಿಯಾಗಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕೊನೆಗೂ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಬೆಂಗಳೂರಿನ ಅಂದರಹಳ್ಳಿ ನಿವಾಸಿ ಸುದೀಪ್, ಮೈಸೂರು ಜಿಲ್ಲೆ ಟೀ ನರಸಿಪುರ ತಾಲೂಕಿನ ಚಾಮೇನಹಳ್ಳಿ ಗ್ರಾಮದ ಮಂಜುನಾಥ್ ಹಾಗೂ ಆತನ ತಂದೆ ನಂಜುಂಡ, ತಾಯಿ ರಾಜೇಶ್ವರಿ ಎಂಬುವವರನ್ನ ಬಂಧಿಸಿ, ಒಟ್ಟು 11 ಪ್ರಕರಣಗಳನ್ನ ಭೇದಿಸಿ ಸುಮಾರು 20 ಲಕ್ಷ ರೂ ಮೌಲ್ಯದ 358 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ, ಸೋನಿ ಕ್ಯಾಮರಾ ಹಾಗೂ ಒಂದು ಬೈಕ್ ಅನ್ನ ವಶಕ್ಕೆ ಪಡೆದಿದ್ದಾರೆ. ಇನ್ನು ಪ್ರಕರಣ ಸಂಬಂಧ ಗಣೇಶ್ ಎಂಬ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಆತನ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ.

ಈ ಖತರ್ನಾಕ್ ಕಳ್ಳರು ಕಳ್ಳತನ ಮಾಡಲು ಹೊಸ ಮಾರ್ಗ ಅಯ್ದುಕೊಂಡಿದ್ರು. ಪರಾರಿಯಾಗಿರೋ ಆರೋಪಿ ಗಣೇಶ್ ಎಂಬಾತ ಗ್ರಾಮೀಣ ಭಾಗದಲ್ಲಿ ರಂಗೋಲಿಪುಡಿ ಹಾಗೂ ಫಿನಾಯಲ್ ಮಾರುವ ನೆಪದಲ್ಲಿ ಹಳ್ಳಿಗಳಲ್ಲಿ ಸಂಚರಿಸುತ್ತಿದ್ದ. ಈ ವೇಳೆ ಹಳ್ಳಿಗಳಲ್ಲಿ ಬೀಗ ಹಾಕಿರೋ ಮನೆಗಳನ್ನ ಗುರುತಿಸಿ, ಸುದೀಪ್ ಹಾಗೂ ಮಂಜುನಾಥ್​ಗೆ ತಿಳಿಸುತ್ತಿದ್ದ. ಇಬ್ಬರು ಸಹ ಪಲ್ಸರ್ ಬೈಕ್​ನಲ್ಲಿ ಬಂದು ಮನೆಯ ಬೀಗ ಹೊಡೆದು ಮನೆಯಲ್ಲಿ ಇದ್ದ ಚಿನ್ನಾಭರಣಗಳನ್ನ ದೋಚುತ್ತಿದ್ದರು. ಇನ್ನು ಗ್ರಾಮೀಣ ಭಾಗದಲ್ಲಿ ಮಹಿಳೆಯರು ಬರುವ ವೇಳೆ ಅವರ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದರು.

ಇದನ್ನೂ ಓದಿ:Crime News: ಜೈಲಿನಲ್ಲಿದ್ದ ಸ್ನೇಹಿತನ ಬಿಡಿಸಿಕೊಳ್ಳಲು ಮನೆಗೆ ಕನ್ನ ಹಾಕಿದ್ದ ಕುಖ್ಯಾತ ಮನೆಗಳ್ಳರ ಬಂಧನ

ಇನ್ನು ಕದ್ದ ಚಿನ್ನಾಭರಣಗಳನ್ನ ಮಂಜುನಾಥ್​ನ ತಂದೆ ನಂಜುಂಡ ಹಾಗೂ ತಾಯಿ ರಾಜೇಶ್ವರಿ ಕೈಗೆ ಕೊಟ್ಟು ಅದನ್ನ ಚಿನ್ನಾಭರಣ ಅಂಗಡಿಗಳಲ್ಲಿ ಮಾರಾಟ ಮಾಡಿಸುತ್ತಿದ್ದರು. ಇದೇ ರೀತಿ ಬೆಂಗಳೂರು, ರಾಮನಗರ ಹಾಗೂ ಮಂಡ್ಯದಲ್ಲಿ ಕಳ್ಳತನ ಮಾಡಿದ್ದಾರೆ. ಪ್ರಕರಣದ ಆರೋಪಿ ಸುದೀಪ್ ಪೊಲೀಸರಿಗೆ ಗುರುತು ಸಿಗಬಾರದು ಎಂದು ಕಳ್ಳತನ ಮಾಡಿದ ನಂತರ ತಲೆ ಬೋಡು ಹೊಡಿಸಿಕೊಳ್ಳುತ್ತಿದ್ದ. ಆದರೆ ಕೊನೆಗೂ ಆರೋಪಿಗಳು ಅಂದರ್ ಆಗಿದ್ದಾರೆ. ಒಟ್ಟಾರೆ ಗ್ರಾಮೀಣ ಭಾಗದಲ್ಲಿ ಮನೆ ಹಾಗೂ ಸರಗಳ್ಳತನ ಮಾಡುತ್ತಿದ್ದ ಟೀಂ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ವರದಿ: ಪ್ರಶಾಂತ್ ಹುಲಿಕೆರೆ ಟಿವಿ9 ರಾಮನಗರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್