AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಹೆಚ್​ಡಿಕೆ ಹೇಳಿಕೆಗೆ ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಮುಸ್ಲಿಂ ಮುಖಂಡರಿಂದ ತೀವ್ರ ಅಸಮಾಧಾನ

Channapatna JDS Muslim leaders reaction to HD Kumaraswamy's statement on minorities; ಇನ್ನಾರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ. ಮೊದಲು ನಿಮ್ಮ ಆರೋಗ್ಯ ಸರಿಯಿಲ್ಲ, ನೋಡಿಕೊಳ್ಳಿ ಎಂದು ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಮುಕ್ರಂ ಹೇಳಿದ್ದಾರೆ.

ರಾಮನಗರ: ಹೆಚ್​ಡಿಕೆ ಹೇಳಿಕೆಗೆ ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಮುಸ್ಲಿಂ ಮುಖಂಡರಿಂದ ತೀವ್ರ ಅಸಮಾಧಾನ
ಹೆಚ್​ಡಿ ಕುಮಾರಸ್ವಾಮಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Sep 30, 2023 | 6:05 PM

Share

ರಾಮನಗರ, ಸೆಪ್ಟೆಂಬರ್ 23: ಮುಸ್ಲಿಂ ಸಮಾಜ ಒಂದನ್ನೇ ನಂಬಿಕೊಂಡು ಕುಳಿತಿಲ್ಲ, ಮುಸ್ಲಿಂ ನಾಯಕರು ಪಕ್ಷ ಬಿಟ್ಟರೆ ಬಿಡಲಿ ಎಂಬ ಜೆಡಿಎಸ್ (JDS) ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ಹೇಳಿಕೆಗೆ ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಮುಸ್ಲಿಂ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಹೇಳಿಕೆಯಿಂದ ಮುಸ್ಲಿಂ ಸಮುದಾಯಕ್ಕೆ ಬೇಸರವಾಗಿದೆ. ಇಂತಹ ಹೇಳಿಕೆಯೇ ಕಾಂಗ್ರೆಸ್ 135 ಸ್ಥಾನ ಗೆಲ್ಲಲು ಕಾರಣವಾಯ್ತು ಎಂದು ಜೆಡಿಎಸ್ ಮುಖಂಡ ಮುಕ್ರಂ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇನ್ನಾರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ. ಮೊದಲು ನಿಮ್ಮ ಆರೋಗ್ಯ ಸರಿಯಿಲ್ಲ, ನೋಡಿಕೊಳ್ಳಿ ಎಂದು ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಮುಕ್ರಂ ಹೇಳಿದ್ದಾರೆ.

ತಮ್ಮ ಅಕ್ಕಪಕ್ಕದ ಮನೆಯವರಿಗೇ ಕುಮಾರಸ್ವಾಮಿ ಏನೂ ಮಾಡಿಲ್ಲ. ಇನ್ನು ನಮ್ಮ ಸಮುದಾಯಕ್ಕೆ ಏನ್ ಮಾಡ್ತಾರೆ ಎಂದು ಮುಕ್ರಂ ಪ್ರಶ್ನೆ ಮಾಡಿದರು. ಚುನಾವಣಾ ಫಲಿತಾಂಶ ಬಂದಿರಲಿಲ್ಲ, 150 ಸ್ಥಾನ ಗೆಲ್ತೀವಿ ಅಂದಿದ್ದಿರಿ. ಬಿಜೆಪಿ ಜೊತೆ ನೀವು ಮೈತ್ರಿ ಮಾಡಿಕೊಂಡಿದ್ದಕ್ಕೆ ನಮಗೆ ಬೇಸರವಿಲ್ಲ. ನಿಮ್ಮ ಮಾತಿನಿಂದ ನಮ್ಮ ಇಡೀ ಸಮುದಾಯಕ್ಕೆ ಬೇಸರವಾಗಿದೆ. ಹೆಚ್​ಡಿಕೆ ಮುಸ್ಲಿಂ ಮತಗಳಿಂದಲೇ ಗೆದ್ದು, ಈಗ ವಿರುದ್ಧ ನಿಂತಿದ್ದಾರೆ‌. ಮತ್ತೊಮ್ಮೆ ಮುಸ್ಲಿಂ ಸಮುದಾಯ ಬಗ್ಗೆ ಹೇಳಿಕೆ ನೀಡಿದ್ರೆ ಸುಮ್ಮನಿರಲ್ಲ ಎಂದು ಮುಕ್ರಂ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಜನತೆ ಚುನಾವಣೆಯಲ್ಲಿ ತೀರ್ಪು ಕೊಟ್ಟಿದ್ದಾರೆ; ಡಿಕೆ ಸುರೇಶ್

ಅಲ್ಪಸಂಖ್ಯಾತರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯಿಸಿದ್ದು, ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ತೀರ್ಪು ನೀಡಿದ್ದಾರೆ ಎಂದು ಹೇಳಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಮೈತ್ರಿ ಪವಿತ್ರವೋ ಅಪವಿತ್ರವೋ ಎಂದು ಜನ ತೀರ್ಮಾನಿಸುತ್ತಾರೆ. ಚನ್ನಪಟ್ಟಣದಲ್ಲಿ ಯೋಗೇಶ್ವರ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅವರ ಮೇಲಿನ ಕೇಸ್​ಗಳ ಬಗ್ಗೆ ಮಾಧ್ಯಮದಲ್ಲಿ ಪ್ರಸಾರವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಸಮಾಜ ಒಂದನ್ನೇ ನಂಬಿಕೊಂಡು ಕುಳಿತಿಲ್ಲ; ಹೆಚ್​ಡಿ ಕುಮಾರಸ್ವಾಮಿ ತಿರುಗೇಟು

ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್​​ನಿಂದ ಮುಸ್ಲಿಂ ಮುಖಂಡರು ದೂರ ಸರಿಯುತ್ತಿರುವ ಬಗ್ಗೆ ‘ಟಿವಿ9’ ಕನ್ನಡ ವಾಹಿನಿಗೆ ನೀಡಿದ ಎಕ್ಸ್​ಕ್ಲೂಸಿವ್ ಸಂದರ್ಶನದಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, ಮುಸ್ಲಿಂ ಸಮಾಜ ಒಂದನ್ನೇ ನಂಬಿಕೊಂಡು ಕೂತಿಲ್ಲ. ಅದೊಂದು ಸಮುದಾಯವನ್ನು ನೆಚ್ಚಿಕೊಂಡು ರಾಜಕೀಯ ಮಾಡುತ್ತಿಲ್ಲ. ಕರ್ನಾಟಕದ ಆರೂವರೆ ಕೋಟಿ ಜನತೆಯ ಪ್ರತಿನಿಧಿಯಾಗಿ ನಮ್ಮ ಪಕ್ಷವಿದೆ ಎಂದು ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ