AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಜಮೀನು ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕೇಸ್​, 12 ಮಂದಿಗೆ ಜೀವಾವಧಿ ಶಿಕ್ಷೆ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹುಣಸನಹಳ್ಳಿಯಲ್ಲಿ 2021ರ ಆಗಸ್ಟ್ 8 ರಂದು ನಡೆದ ಬಾರ್ ಮುಂದಿನ ಕೊಲೆ ಪ್ರಕರಣದಲ್ಲಿ 12 ಮಂದಿ ಆರೋಪಿಗಳಿಗೆ ಕನಕಪುರದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 1 ಲಕ್ಷ ರೂಪಾಯಿ ದಂಡ ವಿಧಿಸಿದೆ.

ರಾಮನಗರ: ಜಮೀನು ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕೇಸ್​, 12 ಮಂದಿಗೆ ಜೀವಾವಧಿ ಶಿಕ್ಷೆ
ಜಮೀನು ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ​: 12 ಮಂದಿಗೆ ಜೀವಾವಧಿ ಶಿಕ್ಷೆ
Follow us
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ

Updated on:Apr 10, 2025 | 3:07 PM

ರಾಮನಗರ, ಏಪ್ರಿಲ್​ 10: ಹಾಡಹಗಲೇ ಬಾರ್ ಮುಂದೆ ಅಟ್ಟಾಡಿಸಿ ಕೊಲೆಗೈದಿದ್ದ (kill) 12 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ (Life Sentences) ಕನಕಪುರ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಕುಮಾರ ಎಚ್​ಎನ್​ ಅವರಿಂದ ಗುರುವಾರ ಆದೇಶ ಹೊರಡಿಸಲಾಗಿದೆ. ಮಾದೇಶ್, ಶಿವಕುಮಾರ್, ಲೋಕೇಶ್, ಕಾರ್ತಿಕ್, ವೇಣುಗೋಪಾಲ್, ದಿಲೀಪ್‌ ರಾಜ್, ರಾಮಚಂದ್ರ, ಗುರಪ್ಪ, ರಘು, ದಶರಥ, ಹರೀಶ್ ಮತ್ತು ಸುರೇಶ್ ಜೀವಾವಧಿ ಶಿಕ್ಷೆಗೆ ಗುರಿಯಾದವರು.

ನಡೆದದ್ದೇನು?

2021ರ ಆಗಸ್ಟ್ 8 ರಂದು ಜಿಲ್ಲೆಯ ಕನಕಪುರ ತಾಲೂಕಿನ ಹುಣಸನಹಳ್ಳಿ ಬಾರ್ ಬಳಿ‌ ಭೀಕರ ಕೊಲೆ ನಡೆದಿತ್ತು. ತಮಿಳುನಾಡು ಮೂಲದ ಶಂಕರ ಎಂಬಾತನನ್ನ ಬಾರ್ ಮುಂದೆ ಅಟ್ಟಾಡಿಸಿ ಕೊಲೆ ಮಾಡಲಾಗಿತ್ತು. ಜಮೀನು ವಿಚಾರವಾಗಿ ದಾಯಾದಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು.

ಇದನ್ನೂ ಓದಿ: ಪ್ರೇಮ ವಿವಾಹಕ್ಕೆ ಐವರ ಕೊಲೆ ಕೇಸ್​: ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ

ಇದನ್ನೂ ಓದಿ
Image
ರಾಯಚೂರು ಪೊಲೀಸರು ಥಳಿಸಿದ್ದಕ್ಕೆ ವ್ಯಕ್ತಿ ಸಾವು ಕೇಸ್​ಗೆ ಟ್ವಿಸ್ಟ್
Image
ಹೆಂಡ್ತಿ ಜೀವನಾಂಶ ಕೇಳಿದ್ದಕ್ಕೆ ಯುಗಾದಿಯಂದೇ ಗಂಡ ರಾಕ್ಷಸ ಅವತಾರ!
Image
ಬೆಚ್ಚಿಬೀಳಿಸಿದ್ದ ಭೀಕರ ಕೊಲೆ: 31 ಬಾರಿ ಇರಿದು ಕೊಂದವರು ಸಿಕ್ಕಿಬಿದ್ದರು
Image
ಅಪಘಾತ: ಮಂತ್ರಾಲಯ ಸಂಸ್ಕೃತ ಶಾಲೆಯ 3 ವಿದ್ಯಾರ್ಥಿಗಳು ಸೇರಿ ನಾಲ್ವರ ಸಾವು

ಪ್ರಕರಣ ಸಂಬಂಧ ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ 17 ಜನರ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಅಂದಿನ ಸರ್ಕಲ್ ಇನ್ಸ್​ಪೆಕ್ಟರ್ ಟಿಟಿ ಕೃಷ್ಣ ಅವರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 5 ಜನ ಆರೋಪಿಗಳು ಪರಾರಿಯಾಗಿದ್ದು, ಉಳಿದ 12 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಲೆ ಆರೋಪ ಸಾಬೀತಾದ ಹಿನ್ನೆಲೆ 12 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 1 ಲಕ್ಷ ರೂ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

ಜಮೀನು ವಿವಾದ

ಕೊಲೆಯಾಗಿರುವ ಶಂಕರ್​ನ ತಂದೆ ಓಬೇಗೌಡ ಹಾಗೂ ಓಬೇಗೌಡನ ತಂಗಿ ಮಗ ಚನ್ನಕೃಷ್ಣ ಎಂಬುವವರ ನಡುವೆ ಹುಲಿಬಂಡೆ ಗ್ರಾಮದಲ್ಲಿ ಕಳೆದ ಹತ್ತು ವರ್ಷದಿಂದ ಜಮೀನು ವಿವಾದ ನಡೆಯುತ್ತಿತ್ತು. ಓಬೇಗೌಡ ಎಂಬಾತನಿಗೆ ತಂಗಿ ಮಗನಾಗಿದ್ದ ಚನ್ನಕೃಷ್ಣ ಸಾಕಷ್ಟು ಕಿರುಕುಳ ನೀಡುತ್ತಿದ್ದ. ಹೀಗಾಗಿ 2015ರಲ್ಲಿ ಓಬೇಗೌಡ, ಹುಲಿಬಂಡೆ ಗ್ರಾಮದಲ್ಲಿಯೇ ಚನ್ನಕೃಷ್ಣನ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ್ದ. ಆನಂತರ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದು ಬಂದ ಚನ್ನಕೃಷ್ಣ 2016ರಲ್ಲಿ ಮಾವನಾದ ಓಬೇಗೌಡನನ್ನ ಗ್ರಾಮದಲ್ಲಿಯೇ ಕೊಲೆ ಮಾಡಿ ಜೈಲು ಸೇರಿದ್ದ.

ಇದನ್ನೂ ಓದಿ: ಬೀದರ್​ ಬೆನ್ನಲ್ಲೇ ಕಲಬುರಗಿಯಲ್ಲಿ ATM ಕಳ್ಳತನ, ಕರ್ನಾಟಕದಲ್ಲಿ ಸಾಲು ಸಾಲು ದರೋಡೆ

ಆನಂತರ ಕೆಲ ವರ್ಷಗಳ ಕೆಳಗೆ ಚನ್ನಕೃಷ್ಣ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದು, ಹುಲಿಬಂಡೆ ಗ್ರಾಮದಲ್ಲಿ ವಾಸವಿದ್ದ. ಅಲ್ಲದೇ ಮದುವೆ ಕೂಡ ಆಗಿದ್ದ. ಆನಂತರ ಬೆಂಗಳೂರು ಸೇರಿದ್ದ ಚನ್ನಕೃಷ್ಣ, ಆಗಾಗ ಹುಲಿಬಂಡೆ ಗ್ರಾಮಕ್ಕೆ ಬಂದು ಹೋಗುತ್ತಿದ್ದ. ಆದರೆ ತಂದೆಯನ್ನ ಕೊಲೆ ಮಾಡಿದ ದ್ವೇಷದ ಹಿನ್ನೆಲೆಯಲ್ಲಿ ಓಬೇಗೌಡನ ಮಕ್ಕಳಾದ ಶಂಕರ್, ಗಣೇಶ್, ಮುರಗೇಶ್ ಸೇರಿಕೊಂಡು 2021ರ ಫೆಬ್ರವರಿಯಲ್ಲಿ ಚನ್ನಕೃಷ್ಣನನ್ನ ಹುಲಿಬಂಡೆ ಗ್ರಾಮದಲ್ಲಿಯೇ ಹತ್ಯೆ ಮಾಡಿದ್ದರು.

ಬಳಿಕ ಮೂವರು ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ಚನ್ನಕೃಷ್ಣ ಹೆಂಡತಿಗೆ ಮಗುವಾಗಿತ್ತು.  ಬಂಧನವಾಗಿದ್ದ ಆರೋಪಿಗಳ ಮುಂದೆ ಚನ್ನಕೃಷ್ಣನ ಹೆಂಡತಿ ನೋವು ತೋಡಿಕೊಂಡಿದ್ದಳು. ಚನ್ನಕೃಷ್ಣನ ಜೊತೆ ಆನೇಕಲ್ ಭಾಗದಲ್ಲಿ ರಿಯಲ್​ ಎಸ್ಟೇಟ್ ವ್ಯವಹಾರ ಮಾಡಿಕೊಂಡು, ಶಿಷ್ಯರಾಗಿದ್ದ ಈ ಆರೋಪಿಗಳು, ಸೇಡು ತೀರಿಸಿಕೊಳ್ಳಲು ಶಂಕರ್​​ ನನ್ನ ಪ್ಲ್ಯಾನ್​ ಮಾಡಿ ಹತ್ಯೆ ಮಾಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:12 am, Thu, 10 April 25

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ