AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ತಿರುವು ಪಡೆದುಕೊಂಡ ರಾಮನಗರ ವಕೀಲರ ಪ್ರತಿಭಟನೆ: ಕುಮಾರಸ್ವಾಮಿ, ಅಶೋಕ ಸಾಥ್

ರಾಮನಗರದಲ್ಲಿ 40 ವಕೀಲರ ವಿರುದ್ಧ ದಾಖಲಾಗಿರುವ ಎಫ್​ಐಆರ್ ವಿರುದ್ಧ ವಕೀಲರು ನಡೆಸುತ್ತಿರುವ ಪ್ರತಿಭಟನೆ ಈಗ ರಾಜಕೀಯ ಆಯಾಮೆ ಪಡೆದುಕೊಂಡಿದೆ. ಐಜೂರು ಸರ್ಕಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ವಕೀಲರಿಗೆ ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ, ಆರ್ ಅಶೋಕ ಸೋಮವಾರ ರಾತ್ರಿ ಸಾಥ್ ನೀಡಿದ್ದಾರೆ. ನಂತರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜಕೀಯ ತಿರುವು ಪಡೆದುಕೊಂಡ ರಾಮನಗರ ವಕೀಲರ ಪ್ರತಿಭಟನೆ: ಕುಮಾರಸ್ವಾಮಿ, ಅಶೋಕ ಸಾಥ್
ಪ್ರತಿಭಟನಾ ನಿರತ ವಕೀಲರಿಗೆ ಕುಮಾರಸ್ವಾಮಿ, ಅಶೋಕ ಸಾಥ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Feb 20, 2024 | 10:47 AM

Share

ರಾಮನಗರ, ಫೆಬ್ರವರಿ 20: ವಕೀಲರ ವಿರುದ್ಧ ದೂರು ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ಪಿಎಸ್​ಐ ತನ್ವೀರ್ ಅಮಾನತಿಗೆ ಆಗ್ರಹಿಸಿ ರಾಮನಗರದ (Ramanagara) ಐಜೂರು ಸರ್ಕಲ್ ಬಳಿ ವಕೀಲರು ಸೋಮವಾರ ನಡೆಸಿದ ಪ್ರತಿಭಟನೆ (Lawyers Protest) ಈಗ ರಾಜಕೀಯ ಆಯಾಮ ಪಡೆದುಕೊಂಡಿದೆ. ಪ್ರತಿಭಟನಾ ನಿರತ ವಕೀಲರಿಗೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy), ಪ್ರತಿಪಕ್ಷ ನಾಯಕ ಆರ್ ಅಶೋಕ (R Ashoka) ಸೋಮವಾರ ರಾತ್ರಿ ಸಾಥ್ ನೀಡಿದರು. ಇದೇ ವೇಳೆ, ಉಭಯ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪೊಲೀಸರ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

ವಕೀಲರ ಧರಣಿಗೆ ಮಧ್ಯರಾತ್ರಿವರೆಗೂ ಧರಣಿಗೆ ಸಾಥ್​ ನೀಡಿದ ಕುಮಾರಸ್ವಾಮಿ, ಆರ್ ಅಶೋಕ ಸರ್ಕಾರದ ವಿರುದ್ಧ ಕಿಡಿಕಾರಿದರು. ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಆಡಳಿತ ನೀವು ನಡೆಸ್ತಿದ್ದೀರೋ ಅಥವಾ ಯಾರು ನಡೆಸುತ್ತಿದ್ದಾರೆ? ಯಾವನೋ ಶಾಸಕ ಅಥವಾ ಜಿಲ್ಲಾ‌ ಮಂತ್ರಿ‌ ನಡೆಸ್ತಿದ್ದಾನಾ? ನೀವು ಅವರ ಕೈಕೆಳಗೆ ಕೆಲಸ ಮಾಡ್ತೀರೋ ಅಥವಾ ಜನರ‌ನ್ನ ರಕ್ಷಿಸ್ತೀರೋ? ಇಂಥ ಕಟ್ಟಡ ಕಟ್ಟಿಸಿದ್ದು ರೌಡಿಗಳ ಜತೆ ಕೆಲಸ ಮಾಡೋಕಲ್ಲ ಎಂದರು.

ಇಂತಹ ಕೆಲಸ ಮಾಡೋಕೆ ನಾನು ಜಿಲ್ಲಾ ಕೇಂದ್ರ ಮಾಡಿದ್ನಾ? ಜಿಲ್ಲಾ ಕೇಂದ್ರ ಬೆಂಗಳೂರಿಗೆ ತಗೊಂಡ್ ಹೋಗಿಬಿಡ್ತಾನಂತೆ. ಅದೇನೋ ಬ್ರ್ಯಾಂಡ್ ಬೆಂಗಳೂರು ಮಾಡ್ತಾನಂತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಉಲ್ಲೇಖಿಸದೆ ಲೇವಡಿ ಮಾಡಿದರು.

ಸಣ್ಣ ಮಟ್ಟದಲ್ಲೇ ಚಿವುಟಿ ಹಾಕಬಹುದಾಗಿದ್ದ ಪ್ರತಿಭಟನೆ: ಕುಮಾರಸ್ವಾಮಿ

ಮೊದಲು ಹಿರಿಯ ವಕೀಲರ ಬಳಿ ಘಟನೆಯ ಮಾಹಿತಿ ಪಡೆದ ಹೆಚ್​ಡಿಕೆ, ಪ್ರಕರಣದ ಒಟ್ಟು ಸಾರಾಂಶ ಏನು? ಯಾಕೆ‌ ವಿಚಾರ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಿತು ಎಂದು ತಿಳಿದುಕೊಂಡರು. ಬಳಿಕ ಮಾತನಾಡಿ, ರಾಮನಗರದಲ್ಲಿ ನಡೆದಿರುವ ಘಟನೆ ಚಿಕ್ಕದು. ಆದರೆ, ವಕೀಲರೊಬ್ಬರು ಸಾಮಾಜಿಕ ಜಾಲಾತಾಣದಲ್ಲಿ ಹಾಕಿದ್ದು ಬಹಳ ಗಂಭೀರವಾದ ವಿಚಾರ. ಇದನ್ನು ಸಣ್ಣ ಮಟ್ಟದಲ್ಲೇ ಚಿವುಟಿ ಹಾಕಬಹುದಿತ್ತು. ರಾಜ್ಯದಲ್ಲಿ ಯಾವ ರೀತಿ ಆಡಳಿತ‌ ಇದೆ? ನಾನು ಪಕ್ಷದ ಬಗ್ಗೆ ಹೇಳಲ್ಲ, ಜನರಿಗೆ ರಕ್ಷಣೆ ಕೊಡುವಂತಹದ್ದು ಆಡಳಿತಾಧಿಕಾರಿಗಳ ಕರ್ತವ್ಯ. ಮಾಧ್ಯಮಗಳಲ್ಲಿ ನೋಡಿ ನಾನು ಅಧಿಕಾರಿಗಳಿಗೆ ಕೇಳಿದೆ. ಅದೇನಿಲ್ಲ, ಅಂಥಾ ಪ್ರಕರಣ‌ ಏನಿಲ್ಲ ಅದನ್ನು ಸರಿ ಪಡಸ್ತೀವಿ ಅಂದಿದ್ರು. ಎಸ್​ಪಿಗೂ ಈ ಬಗ್ಗೆ ಗಮನಕ್ಕೆ ತರಲಾಗಿತ್ತು. ಈ ವಿಚಾರ ಅಧಿವೇಶನದಲ್ಲಿ ಮಾತಾಡ್ತಾರೆ. ಇಂಥಾ ವಿಚಾರಗಳನ್ನು ನನ್ನ ಸ್ವಂತಕ್ಕೆ ಬಳಸಿಕೊಂಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ರೈತರ ಮೇಲೆ ಗೋಲಿಬಾರ್ ಆದ ಮೇಲೆ ದೇವೇಗೌಡರು ಪಾದಯಾತ್ರೆ ಮಾಡಿದ ಇತಿಹಾಸ ಇದೆ. ಮಂಡ್ಯದಲ್ಲೂ ಒಂದು ಘಟನೆ ನಡೆದಿತ್ತು. ಅವತ್ತೂ ಜಿಲ್ಲಾಧಿಕಾರಿಗಳಿಗೆ ಹೇಳಿದ್ದೆ, ಯಾಕಿಷ್ಟು ಪೊಲೀಸರನ್ನು ಕರೆಸಿದ್ದರು ಎಂಬುದಾಗಿ. ಪಾಪ ಆ ಕಾನಸ್ಟೇಬಲ್​​ಗಳಿಗೆ ಊಟ ಇರಲ್ಲ, ಮತ್ತೊಂದಿಲ್ಲ. ಅವರ ಕಷ್ಟನೂ ಇವರಿಗೆ ಗೊತ್ತಾಗಲ್ಲ. ಇಷ್ಟು ಜನ ಪೊಲೀಸರನ್ನು ನೋಡಿ ಆಶ್ಚರ್ಯ ಆಯ್ತು. ನಾನು ರಾಮನಗರಲ್ಲಿದ್ದಾಗ ಇಂಥಾ ಪರಿಸ್ಥಿತಿ ಇರಲಿಲ್ಲ. ಅವನ್ಯಾರೋ ರಫಿಕ್ ಅನ್ನೋನು ದೂರು ಕೊಟ್ಟಿದ್ದಾನೆ. ದೂರು ದಾಖಲಾಗಿದೆ, ಯಾರೋ ರಾಮನಗರ ಉಳಿಸೋಕೆ ಪ್ರಗತಿಪರರು ಪ್ರತಿಭಟನೆ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ನಾನು ಎಂದೂ ಜಾತಿ ನೋಡಿರಲಿಲ್ಲ. ಫೇಸ್ಬುಕ್​​ನಲ್ಲಿ ಕವನ ಬರೆದೋನು ಮುಸ್ಲಿಂ, ದೂರು ಕೊಟ್ಟವನೂ ಮುಸ್ಲಿಂ, ಶಾಸಕನೂ ಮುಸ್ಲಿಂ. ಇವತ್ತು ನಡೀತಾ ಇರೋದು ರಾಮನಗರ ಜನ‌‌ ನೋಡಿಲ್ಲ ಎಂದು ಹೆಚ್​ಡಿಕೆ ಕಿಡಿ ಕಾರಿದರು.

ಗೂಂಡಾ ರಾಜ್ಯ: ಆರ್ ಅಶೋ ಕಿಡಿ

ಕಾಂಗ್ರೆಸ್ ಪಕ್ಷದ​ ಶಾಸಕರೇ ಸರ್ಕಲ್​ ಇನ್ಸ್​ಪೆಕ್ಟರ್​ ಆಗಿದ್ದಾರೆ. ಮೊನ್ನೆ ಹಾವೇರಿಗೆ ಹೋಗಿದ್ದಾಗ ಸಿಎಂ ಸಿದ್ದರಾಮಯ್ಯ ಹೇಳಿದ್ದರಂತೆ, ‘ನಿಂದೇ ಈ ಸ್ಟೇಷನ್​​ ಅಂತ ಅಲ್ಲಿನ ಶಾಸಕನಿಗೆ.’ ಇದೊಂದು‌ ಗುಂಡಾ ರಾಜ್ಯ ಎಂದು ಅಶೋಕ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಗಲಾಟೆ ಪ್ರಕರಣವೊಂದರಲ್ಲಿ ವಕೀಲರ ಮೇಲೆ ಸುಳ್ಳು ಎಫ್ಐಆರ್ ಆರೋಪ: ಊಟ ಬಿಟ್ಟು ಬಂದು ಮನವಿ ಸ್ವೀಕರಿಸಿದ ಡಿಸಿ

ಆರ್ ಅಶೋಕ ಟ್ವೀಟ್

ಏನಿದು ಪ್ರಕರಣ?

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ತೀರ್ಪು ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್​ ಹಾಕಿದ್ದ ಎಸ್​ಡಿಪಿಐ ಕಾರ್ಯಕರ್ತ ಚಾಂದ್ ಪಾಷಾ ಎಂಬಾತನನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಇದಕ್ಕೆ ಪ್ರತಿಯಾಗಿ ಚಾಂದ್ ಪಾಷಾರ ಕಡೆಯೊಬ್ಬರು ನೀಡಿದ್ದ ಸುಳ್ಳು ದೂರಿನ ಆಧಾರದ ಮೇಲೆ ಐಜೂರು ಪೊಲೀಸರು ವಕೀಲರ ಸಂಘದ 40 ವಕೀಲರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ ಎಂದು ವಕೀಲರು ಆರೋಪಿಸಿದ್ದರು. ಎಫ್​​ಐಆರ್ ರದ್ದುಗೊಳಿಸುವಂತೆ ಆಗ್ರಹಿಸಿ ಸೋಮವಾರ ಪ್ರತಿಭಟನೆ ಹಮ್ಮಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:04 am, Tue, 20 February 24

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?