
ರಾಮನಗರ, ಜೂನ್ 21: ಕರ್ನಾಟಕದಲ್ಲಿ (Karnataka) ಜಾನುವಾರುಗಳ ಮೇಲಿನ ಕ್ರೌರ್ಯ ಮತ್ತೆ ಮುಂದುವರಿದಿದೆ. ರಾಜ್ಯದಲ್ಲಿ ಇತ್ತೀಚೆಗೆ ಕೆಲ ಕಿಡಿಗೇಡಿಗಳು ಹಸುವಿನ (cow) ಕೆಚ್ಚಲು ಕೊಯ್ದು ಕ್ರೌರ್ಯ ಮೆರೆಯುತ್ತಿರುವಂತಹ ಘಟನೆಗಳು ಹೆಚ್ಚಾಗುತ್ತಿವೆ. ಚಾಮರಾಜಪೇಟೆ, ಬಾಗಲಕೋಟೆ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಸೇರಿದಂತೆ ಕೆಲವೆಡೆ ಮೂಕ ಪ್ರಾಣಿಯ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಕೌರ್ಯ ಎಸಗುತ್ತಿದ್ದಾರೆ. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಗರದಲ್ಲಿ ನಡೆದಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರ ಗ್ರಾಮದಲ್ಲಿ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಕ್ರೌರ್ಯ ಮೆರೆದಿರುವಂತಹ ಘಟನೆ ನಡೆದಿದೆ. ಹಾಲಿನ ಡೇರಿ ಅಧ್ಯಕ್ಷ ಮರಿಬಸವಯ್ಯ ಎಂಬುವರಿಗೆ ಹಸು ಸೇರಿತ್ತು.
ಇದನ್ನೂ ಓದಿ: ಚಾಮರಾಜಪೇಟೆ ಬೆನ್ನಲ್ಲೇ ಮೈಸೂರಿನಲ್ಲಿ ಕರುವಿನ ಮೇಲೆ ದಾಳಿ: ಮಾರಕಾಸ್ತ್ರದಿಂದ ಬಾಲ ತುಂಡರಿಸಿ ದುಷ್ಕರ್ಮಿಗಳು ಪರಾರಿ
ಗುರುಸಿದ್ದಪ್ಪ ಎಂಬುವರರ ಜಮೀನಿನಲ್ಲಿ ಹಸುವಿನ ಮೇಲೆ ಕೌರ್ಯ ಎಸಗಲಾಗಿದ್ದು, ಅವರ ವಿರುದ್ಧ ಹಸುವಿನ ಮಾಲೀಕ ಮರಿಬಸವಯ್ಯ ಆರೋಪ ಮಾಡಿದ್ದಾರೆ. ಈ ಹಿಂದೆ ಡೇರಿ ಅಧ್ಯಕ್ಷ ಚುನಾವಣೆ ವೇಳೆ ಮರಿಬಸವಯ್ಯ ಮತ್ತು ಗುರುಸಿದ್ದಪ್ಪ ನಡುವೆ ವೈಮನಸ್ಸು ಏರ್ಪಟ್ಟಿತು. ಹೀಗಾಗಿ ಗುರುಸಿದ್ದಪ್ಪ ವಿರುದ್ಧ ಹಸುವಿನ ಕೆಚ್ಚಲು ಕೊಯ್ದಿರುವ ಆರೋಪ ಮಾಡಲಾಗಿದೆ. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಘಟನೆ ನಡೆದಿದೆ.
ಇದನ್ನೂ ಓದಿ: ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.