ರಾಮನಗರ: ಕೋರ್ಟ್​​ ಆವರಣದಲ್ಲೇ ಶಾಸಕ ಇಕ್ಬಾಲ್ ಹುಸೇನ್ ತರಾಟೆಗೆ ತೆಗೆದುಕೊಂಡ ವಕೀಲರು

Ramanagara MLA Iqbal Hussain: ರಾಮನಗರ ಮರುನಾಮಕರಣ ಹಾಗೂ ಆರೋಗ್ಯ ವಿವಿ ಸ್ಥಳಾಂತರ ವಿಚಾರವಾಗಿ ಶಾಸಕ ಇಕ್ಬಾಲ್ ಹುಸೇನ್ ಅವರನ್ನು ಕೋರ್ಟ್​ ಆವರಣದಲ್ಲೇ ತರಾಟೆಗೆ ತೆಗೆದುಕೊಂಡ ಘಟನೆ ಗುರುವಾರ ನಡೆದಿದೆ. ಶಾಸಕರ ವಿರುದ್ಧ ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮನಗರ: ಕೋರ್ಟ್​​ ಆವರಣದಲ್ಲೇ ಶಾಸಕ ಇಕ್ಬಾಲ್ ಹುಸೇನ್ ತರಾಟೆಗೆ ತೆಗೆದುಕೊಂಡ ವಕೀಲರು
ಇಕ್ಬಾಲ್ ಹುಸೇನ್
Edited By:

Updated on: Nov 23, 2023 | 5:51 PM

ರಾಮನಗರ, ನವೆಂಬರ್ 23: ರಾಮನಗರ ಜಿಲ್ಲೆಗೆ (Ramanagara) ಬೆಂಗಳೂರು ದಕ್ಷಿಣ ಎಂದು ಹೆಸರಿಡುವ ಮತ್ತು ಆರೋಗ್ಯ ವಿವಿ ಕನಕಪುರಕ್ಕೆ ಸ್ಥಳಾಂತರಿಸುವ ವಿಚಾರವಾಗಿ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಅವರನ್ನು ರಾಮನಗರ ವಕೀಲರು ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ. ನ್ಯಾಯಾಲಯದ ಆವರಣದಲ್ಲೇ ಶಾಸಕರನ್ನು ಪ್ರಶ್ನಿಸಿದ ವಕೀಲರು, ನೀವು ಪ್ರತಿನಿಧಿಸುತ್ತಾ ಇರುವುದು ರಾಮನಗರ. ಅದನ್ನು ನೆನಪಲ್ಲಿಟ್ಟುಕೊಳ್ಳಿ ಎಂದು ತಾಕೀತು ಮಾಡಿದರು.

ಯಾವನೋ ಹೇಳಿದ ಹಾಗೆ ಕೇಳಲು ಹೋಗಬೇಡಿ. ನಿಮ್ಮನ್ನು ಅವರು ಆಯ್ಕೆ ಮಾಡಿಲ್ಲ. ಜಿಲ್ಲೆಯ ಮರುನಾಮಕರಣ ಮತ್ತು ಆರೋಗ್ಯ ವಿವಿ ಸ್ಥಳಾಂತರ ವಿಚಾರದಲ್ಲಿ ನೀವು ಪ್ರತಿಭಟಿಸುತ್ತಾ ಇಲ್ಲ. ನಮ್ಮ ಪರವಾಗಿ ನಿಲ್ಲುತ್ತಾ ಇಲ್ಲ. ಕನಕಪುರವನ್ನು ರಿಪಬ್ಲಿಕ್ ಮಾಡ್ತಾ ಇದ್ದೀರಾ? ಕರ್ನಾಟಕ ರಾಜ್ಯ ತೆಗೆದು ಕನಕಪುರ ರಾಜ್ಯ ಮಾಡ್ತಾ ಇದ್ದೀರಾ? ಏನ್ ಮಾಡೋಕೆ ಹೊರಟಿದ್ದಿರಾ ನೀವು ಎಂದು ಶಾಸಕರನ್ನು ವಕೀಲರು ಪ್ರಶ್ನಿಸಿದ್ದಾರೆ.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುತ್ತೇವೆ ಎನ್ನುತ್ತೀರಿ. ಆರೋಗ್ಯ ವಿವಿ ಸ್ಥಳಾಂತರ ಮಾಡುತ್ತೇವೆ ಎನ್ನುತ್ತೀರಿ. ಈ ಮೂಲಕ ಏನು ಸಂದೇಶ ಕೊಡುವುದಕ್ಕೆ ಹೊರಟ್ಟೀದ್ದೀರಿ ಎಂದು ಶಾಸಕರ ಬಳಿ ವಕೀಲರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮತ್ತೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿಖಿಲ್​​ಗೆ ಆಹ್ವಾನ, ಹಳೇ ಸೇಡು ತೀರಿಸಿಕೊಳ್ಳಲು ಪ್ಲ್ಯಾನ್

ಆರೋಗ್ಯ ವಿವಿಯನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವ ವಿಚಾರ ಬಹಳ ಚರ್ಚೆಯಲ್ಲಿದೆ. ಈ ಮಧ್ಯೆ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಇತ್ತೀಚೆಗೆ ಬಹಿರಂಗವಾಗಿ ಹೇಳಿದ್ದರು. ಇದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ನಡುವಣ ತೀವ್ರ ವಾಕ್ಸಮರಕ್ಕೆ ಕಾರಣವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us