ಕನಕಪುರ ಸರ್ಕಾರಿ ಶಾಲೆಯಲ್ಲಿದೆಂತ ಸ್ಥಿತಿ, ಮಕ್ಕಳ ಕೈಯಿಂದಲೇ ಶಾಲೆ ಆವರಣದಲ್ಲಿ ಬಿದ್ದ ಬಿಯರ್ ಬಾಟಲ್, ಮಲ ಸ್ವಚ್ಛ ಕಾರ್ಯ

ಜ್ಞಾನ ದೇಗುಲವೆಂದರೆ ಕೈ ಮುಗಿದು ಒಳಗೆ ಹೋಗುವ ಮನಸ್ಥಿತಿ ಇರಬೇಕು. ಆದರೆ ಮುನೇಶ್ವರ ದೊಡ್ಡಿ ಶಾಲೆ ಕುಡುಕರ ಅಡ್ಡೆಯಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಬಿಯರ್ ಬಾಟಲಿಗಳನ್ನು ಎತ್ತಿ ಶಾಲೆ ಆವರಣವನ್ನು ಸ್ವಚ್ಛಗೊಳಿಸುವ ಸ್ಥಿತಿ ಇದೆ.

ರಾಮನಗರ, ಡಿ.12: ಒಂದು ಕಡೆ ಸರ್ಕಾರಿ ಶಾಲೆ (Government School) ಉಳಿಸಿ ಎಂಬ ಅಭಿಯಾನಗಳು ರಾಜ್ಯದೆಲ್ಲೆಡೆ ನಡೆಯುತ್ತಲೇ ಇವೆ. ಮತ್ತೊಂದೆಡೆ ಖಾಸಗಿ ಶಾಲೆಗಳು ಹೈಟೆಕ್ ಸೌಲಭ್ಯಗಳನ್ನು ನೀಡಿ ಪೋಷಕರನ್ನು ಸೆಳೆದು ಮಕ್ಕಳ ದಾಖಲಾತಿಯನ್ನು ಹೆಚ್ಚಿಸಿಕೊಳ್ಳುತ್ತಿವೆ. ಇಂತದರ ನಡುವೆ ರಾಮನಗರ (Ramanagara) ಜಿಲ್ಲೆ ಕನಕಪುರ ತಾಲೂಕಿನ ಮುನೇಶ್ವರ ದೊಡ್ಡಿ ಶಾಲೆ ಸರಿಯಾದ ಸೌಲಭ್ಯವಿಲ್ಲದೆ ಸೊರಗುತ್ತಿದೆ. ಅದರಲ್ಲೂ ಈ ಶಾಲೆಯಲ್ಲಿ ಮಕ್ಕಳೇ (Students) ಶಾಲೆಯನ್ನು ಸ್ವಚ್ಛಗೊಳಿಸಬೇಕು. ಪಾಠಕ್ಕೂ ಮುನ್ನ ಶಾಲೆ ಆವರಣದಲ್ಲಿ ಬಿದ್ದ ಬಿಯರ್ ಬಾಟಲಿಗಳನ್ನು ಎತ್ತಿ ಸ್ವಚ್ಛಗೊಳಿಸಬೇಕು. ಈ ವಿಚಾರ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಜ್ಞಾನ ದೇಗುಲವೆಂದರೆ ಕೈ ಮುಗಿದು ಒಳಗೆ ಹೋಗುವ ಮನಸ್ಥಿತಿ ಇರಬೇಕು. ಆದರೆ ಮುನೇಶ್ವರ ದೊಡ್ಡಿ ಶಾಲೆ ಕುಡುಕರ ಅಡ್ಡೆಯಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಬಿಯರ್ ಬಾಟಲಿಗಳನ್ನು ಎತ್ತಿ ಶಾಲೆ ಆವರಣವನ್ನು ಸ್ವಚ್ಛಗೊಳಿಸುವ ಸ್ಥಿತಿ ಇದೆ.

ಇದನ್ನೂ ಓದಿ: ಬೀಡಾ ಅಂಗಡಿಯಲ್ಲಿ ಅಂಗನವಾಡಿ! ಇದು ಸೆಷನ್​​ನಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತುರ್ತು ಗಮನಕ್ಕೆ…

ತರಗತಿಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದ ಮದ್ಯದ ಬಾಟಲ್, ಶೌಚ, ಕುಡುಕರು ಮಾಡಿದ ಗಲೀಜನೆಲ್ಲ ಬಾಜಿ ಸ್ವಚ್ಛಗೊಳಿಸಬೇಕು. ಶಾಲೆ ಗೇಟ್ ಹಾಕಿದ ಬಳಿಕ ರಾತ್ರಿ ವೇಳೆ ಶಾಲೆಗೆ ನುಗ್ಗುವ ಕುಡುಕರು ಶಾಲೆ ಆವರಣದಲ್ಲೇ ತಿಂದು, ಕುಡಿದು ಮಜಾ ಮಾಡಿ ಹೋಗುತ್ತಿದ್ದಾರೆ. ಕುಡುಕ ಕಿಡಗೇಡಿಗಳ ಕೃತ್ಯಕ್ಕೆ ಮಕ್ಕಳು ಶಿಕ್ಷೆ ಅನುಭವಿಸುತ್ತಿದ್ದಾರೆ. ಪ್ರತಿ ದಿನ ಶಾಲೆ ಬಂದ ತಕ್ಷಣವೇ ಬರಿಗೈಯಲ್ಲಿ ಆವರಣ ಕ್ಲೀನ್ ಮಾಡ್ತಿದ್ದಾರೆ. ದಿನಕ್ಕೆ ಹತ್ತಾರು ಬಾಟಲಿಗಳು ಪತ್ತೆಯಾಗುತ್ತಿವೆ. ಇದಕ್ಕೆ ಕಡಿವಾಣವೇ ಇಲ್ಲದಂತಾಗಿದೆ.

2009-10‌ರಲ್ಲಿ ನಿರ್ಮಾಣಗೊಂಡಿರುವ ಕಿರಿಯ ಪ್ರಾರ್ಥಮಿಕ ಶಾಲೆಯಲ್ಲೀಗ ವಿದ್ಯಾರ್ಥಿಗಳ ಕೊರತೆ ಉಂಟಾಗಿದೆ. ಪೆನ್ನು, ಪೆನ್ಸಿಲ್ ಹಿಡಿದು ಓದಾಬೇಕಾದ ವಿದ್ಯಾರ್ಥಿಗಳು ಶಾಲೆಗೆ ಬಂದ ತಕ್ಷಣವೇ ಮದ್ಯದ ಬಾಟಲಿ ಹಿಡಿದು ಶಾಲೆ ಸ್ವಚ್ಛಗೊಳಿಸುತ್ತಿದ್ದಾರೆ. ಇದೇ ಕಾರಣಕ್ಕೆ ಶಾಲೆಯ ಮಕ್ಕಳ ಸಂಖ್ಯೆಯೂ ಕುಸಿಯುತ್ತಿದೆ. 50‌ ಇದ್ದ ವಿದ್ಯಾರ್ಥಿಗಳ ಸಂಖ್ಯೆ ಈಗ 25ಕ್ಕೆ ಇಳಿದಿದೆ. ಸ್ವಚ್ಛ ವಾತಾವರಣ ನಿರ್ಮಾಣ ಮಾಡುವಂತೆ ವಿದ್ಯಾರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಮನಗರ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:57 am, Wed, 13 December 23

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us