AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಪೊಲೀಸರ ನಡೆಗೆ ಸಿಟ್ಟು: ಕೊಲೆ ಆರೋಪಿಗಳನ್ನು ಬಿಟ್ಟು ಕಳುಹಿಸಿದ ನ್ಯಾಯಾಧೀಶರು

ರಾಮನಗರದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ, ನ್ಯಾಯಾಧೀಶರು ಮೂವರು ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದಾರೆ. ಪೊಲೀಸರ ನಿರ್ಲಕ್ಷ್ಯದಿಂದಾಗಿ ಆರೋಪಿಗಳು ಜೈಲಿನಿಂದ ಹೊರಗೆ ಬರುವಂತಾಗಿದೆ. ಈ ಘಟನೆ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಪೊಲೀಸರ ಮುಂದಿನ ನಡೆ ಏನು ಎಂಬುವುದು ಕಾದು ನೋಡಬೇಕಿದೆ.

ರಾಮನಗರ ಪೊಲೀಸರ ನಡೆಗೆ ಸಿಟ್ಟು: ಕೊಲೆ ಆರೋಪಿಗಳನ್ನು ಬಿಟ್ಟು ಕಳುಹಿಸಿದ ನ್ಯಾಯಾಧೀಶರು
ಕೊಲೆ ಆರೋಪಿಗಳು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Dec 14, 2024 | 12:54 PM

Share

ರಾಮನಗರ, ಡಿಸೆಂಬರ್​ 14: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಾಯ್ಯಾಲಯದ (Court) ವಿಚಾರಣೆಗೆ ಹಾಜರಾಗದ ಪೊಲೀಸರ ವಿರುದ್ಧ ಆಕ್ರೋಶಗೊಂಡ ನ್ಯಾಯಾಧೀಶರು (Judge) ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದಾರೆ. ಚಂದು, ಮುರುಳಿ, ನಾಗೇಶ್ ಜೈಲಿನಿಂದ ಹೊರ ಬಂದ ಆರೋಪಿಗಳು. ರಾಮನಗರ ಹೊರವಲಯದಲ್ಲಿ 21 ವರ್ಷದ ಬಿಕಾಂ ವಿದ್ಯಾರ್ಥಿ ಪುನಿತ್ ಕೊಲೆ ಆಗಿತ್ತು.

ನವೆಂಬರ್​ 26 ರಂದು ಕೆಲ ವಿದ್ಯಾರ್ಥಿಗಳು ಬ್ಯಾಚುಲರ್ ಪಾರ್ಟಿಗಾಗಿ ರಾಮನಗರ ಹೊರವಲಯದಲ್ಲಿನ ರೆಸಾರ್ಟ್​ಗೆ‌ ಬಂದಿದ್ದರು. ಈ ವೇಳೆ ರೆಸಾರ್ಟ್​ ಒಳಗೆ ಮೂವರು ಆರೋಪಿಗಳು ನುಗ್ಗಿದ್ದರು. ಎ1 ಚಂದು ಎಂಬುವನು ಪುನೀತ್ ಮೇಲೆ ಹಲ್ಲೆ‌ ಮಾಡಿದ್ದನು. ಬಳಿಕ ಮೂವರು ಸೇರಿಕೊಂಡು ಪುನಿತ್​​ ಮೇಲೆ ಹಲ್ಲೆ‌ ಮಾಡಿ ಕೊಲೆ ಮಾಡಿದ್ದರು. ಹಲ್ಲೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು.

ಹಲ್ಲೆ ಆರೋಪದಲ್ಲಿ ಚಂದ್ರು, ಮುರುಳಿ ಮತ್ತು ನಾಗೇಶ್​ನನ್ನು ರಾಮನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಪೊಲೀಸರು ರಿಮ್ಯಾಂಡ್ (ಪೊಲೀಸ್​ ಬಂಧನ ವಿಸ್ತರಣಾ) ಅರ್ಜಿಯನ್ನು ರಾಮನಗರದ ಸೀನಿಯರ್ ಸಿವಿಲ್ ನ್ಯಾಯಾಲಯಕ್ಕೆ ಸಲ್ಲಿಸಬೇಕಿತ್ತು.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಕೋರ್ಟ್​​ಗೆ ತನಿಖಾ ವರದಿ ಸಲ್ಲಿಸಿದ ಇಡಿ

ಆದರೆ, ರಿಮ್ಯಾಂಡ್​ ಅರ್ಜಿಯನ್ನು ಸಲ್ಲಿಸಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಮತ್ತು ನ್ಯಾಯಾಲಯದ ಕಲಾಪ‌ ಪ್ರಾರಂಭವಾದರೂ ಪಬ್ಲಿಕ್ ಪ್ರಾಸಿಕ್ಯೂಟರ್ ಹಾಗೂ ಪೊಲೀಸರು ಹಾಜರಾಗಲಿಲ್ಲ. ಇದರಿಂದ ಕೋಪಗೊಂಡು  ತನಿಖೆ ಯಾಕೆ ಬೇಕು ಅಂತ‌ ಕೊಲೆ ಆರೋಪ ಎದುರಿಸುತ್ತಿದ್ದ ಮೂವರನ್ನೂ ಬಿಟ್ಟು ಕಳಿಸುವಂತೆ ನ್ಯಾಯಾಧೀಶ ಗುಲ್ಜಾರ್ ಲಾಲ್ ಡಿ ಮಹಾವರ್ಕರ್ ಅವರು ಡಿಸೆಂಬರ್​ 6 ರಂದು ಆದೇಶ ಹೊರಡಿಸಿದರು.

ಇದೆ ವೇಳೆ, ಪೊಲೀಸರು ಅರ್ಜಿಸಲ್ಲಿಸಿದರೆ ಆಗ ಬಂಧಿಸುವಂತೆ ಆದೇಶಿಸಿದರು. ನ್ಯಾಯಾಲಯದ ಆದೇಶ ಸಿಕ್ಕ ಬೆನ್ನಲ್ಲೆ ಮೂವರು ಕೊಲೆ ಆರೋಪಿಗಳನ್ನು ರಾಮನಗರ ಜೈಲು ಅಧಿಕಾರಿಗಳು ಬಿಟ್ಟು ಕಳುಹಿಸಿದ್ದಾರೆ. ಜಾಮೀನಿಗೆ ಅರ್ಜಿ ಸಲ್ಲಿಸದೆಯೇ ಮೂವರು ಆರೋಪಿಗಳು ಜೈಲಿನಿಂದ ಹೊರ ಬಂದಿದ್ದಾರೆ. ನ್ಯಾಯಾದೀಶರ ಈ ಆದೇಶ ದೇಶದಲ್ಲೇ ಅತಿ ಅಪರೂಪ ಆದೇಶವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:52 pm, Sat, 14 December 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್