Ramanagara News: ಧ್ವಜಸಂಹಿತೆ ಉಲ್ಲಂಘನೆ: ರಾಮನಗರ ಡಿಸಿ ಕಚೇರಿ ಮೇಲೆ ಹಾರಾಡುತ್ತಿದೆ ಹರಿದ ತ್ರಿವರ್ಣ ಧ್ವಜ

ರಾಮನಗರ ಜಿಲ್ಲಾಧಿಕಾರಿ ಕಚೇರಿ ಮೇಲೆ ಹರಿದಿರುವ ರಾಷ್ಟ್ರಧ್ವಜ ಹಾರುತ್ತಿದೆ. ಆ ಮೂಲಕ ಜಿಲ್ಲಾಧಿಕಾರಿ ಕಚೇರಿಯಿಂದಲೇ ಧ್ವಜಸಂಹಿತೆ ಉಲ್ಲಂಘನೆ ಮಾಡಿರುವಂತಹ ಘಟನೆ ಒಂದು ಜಿಲ್ಲೆಯಲ್ಲಿ ಕಂಡುಬಂದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Ramanagara News: ಧ್ವಜಸಂಹಿತೆ ಉಲ್ಲಂಘನೆ: ರಾಮನಗರ ಡಿಸಿ ಕಚೇರಿ ಮೇಲೆ ಹಾರಾಡುತ್ತಿದೆ ಹರಿದ ತ್ರಿವರ್ಣ ಧ್ವಜ
ಹರಿದ ತ್ರಿವರ್ಣ ಧ್ವಜ
Edited By:

Updated on: Jul 20, 2023 | 9:18 PM

ರಾಮನಗರ, ಜುಲೈ 20: ಹರಿದ ಧ್ವಜ (national flag) ವನ್ನು ಹಾರಾಟ ಮಾಡುವುದು ಧ್ವಜಸಂಹಿತೆಯ ಪ್ರಕಾರ ನಿಷೇಧ. ಆದರೆ ಜಿಲ್ಲಾಧಿಕಾರಿ ಕಚೇರಿಯಿಂದಲೇ ಧ್ವಜಸಂಹಿತೆ ಉಲ್ಲಂಘನೆ ಮಾಡಿರುವಂತಹ ಘಟನೆ ಒಂದು ಜಿಲ್ಲೆಯಲ್ಲಿ ಕಂಡುಬಂದಿದೆ. ರಾಮನಗರ ಜಿಲ್ಲಾಧಿಕಾರಿ ಕಚೇರಿ ಮೇಲೆ ಹರಿದಿರುವ ರಾಷ್ಟ್ರಧ್ವಜ ಹಾರುತ್ತಿದೆ. ಜಿಲ್ಲಾ ಆಡಳಿತದ ಶಕ್ತಿ ಕೇಂದ್ರವಾಗಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹತ್ತಾರು ಇಲಾಖೆಗಳಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರತಿದಿನ ಧ್ವಜಾರೋಹಣ ಮತ್ತು ಅವರೋಹಣ ಮಾಡುವಾಗಲೂ ಧ್ವಜ ಹರಿದಿರುವುದನ್ನು ಜಿಲ್ಲಾಡಳಿತ ಗಮನಿಸದೆ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದು, ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಹರಿದಿರುವ ಧ್ವಜ ಹಾರಿಸಬಾರದು‌‌ ಎಂದು ನಿಯಮಾವಳಿ ಇದೆ. ಒಂದು ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ‌ ಮಾಡಿದರೆ ಶಿಕ್ಷೆಗೂ ಗುರಿ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: Mysuru News: ಮೈಸೂರಿನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ; ವಿವಿಧ ರಸ್ತೆಗಳಲ್ಲಿ ಪುಂಡು ಪೋಕರಿಗಳಿಂದ ಬೈಕ್ ವ್ಹೀಲಿಂಗ್​

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಮುಂದುವರಿದ ಪೊಲೀಸ್ “ದಂಡಯಾತ್ರೆ”

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಪೊಲೀಸ್​ ದಂಡಯಾತ್ರೆ ಮುಂದುವರೆದಿದ್ದು, 15 ದಿನದಲ್ಲಿ 16‌2400 ದಂಡ ವಸೂಲಿ ಮಾಡಲಾಗಿದೆ. 2340‌ಸಂಚಾರಿ ಉಲ್ಲಂಘನೆ ಕೇಸ್ ದಾಖಲಾಗಿದೆ. 887‌ ಓವರ್ ಸ್ಪೀಡ್, 580‌ಲೇನ್ ಡಿಸಿಪ್ಲೇನ್, 189‌ ಸೀಟ್ ಬೆಲ್ಟ್ ಧರಿಸದೇ‌ ಇರುವುದು, 224‌ ಹೆಲ್ಮೆಟ್ ರಹಿತ ಕೇಸ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Bengaluru-Mysore Expressway Accident: ಮೊದಲ ಹಂತದ ಸಮೀಕ್ಷೆ ಪೂರ್ಣಗೊಳಿಸಿದ ಎನ್​ಹೆಚ್ಎ​ಐನ ವಿಶೇಷ ಸಮಿತಿ

ವೇಗಕ್ಕೆ ಬ್ರೇಕ್ ಬಿದ್ದ ನಂತರ ಅಪಘಾತಗಳ ಸಂಖ್ಯೆ ತುಸು ಇಳಿಮುಖವಾಗಿದ್ದು, ಕಳೆದ 20‌ ದಿನಗಳಿಂದ  ರಾಮನಗರ ಪೊಲೀಸರ ಕಾರ್ಯಾಚರಣೆ ನಡೆಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:11 pm, Thu, 20 July 23

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us