AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara: ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಐವರು ವಿದ್ಯಾರ್ಥಿಗಳು ನೀರುಪಾಲು

ರಾಮನಗರ ಜಿಲ್ಲೆ ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಕಾವೇರಿ ನದಿಯಿಂದ ಅಗ್ನಿಶಾಮಕ ದಳ ಶವಗಳನ್ನ ಹೊರತೆಗೆದಿದ್ದಾರೆ. ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡಿದಿದೆ.

Ramanagara: ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಐವರು ವಿದ್ಯಾರ್ಥಿಗಳು ನೀರುಪಾಲು
ಪ್ರಾತಿನಿಧಿಕ ಚಿತ್ರ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on:Apr 29, 2024 | 5:55 PM

ರಾಮನಗರ, ಏಪ್ರಿಲ್​ 29: ಈಜಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು (students) ನೀರುಪಾಲಾಗಿರುವಂತಹ (death) ಘಟನೆ ಜಿಲ್ಲೆ ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಾಗ ದುರಂತ ಸಂಭವಿಸಿದೆ. ಹರ್ಷಿತಾ (18), ತೇಜಸ್ (19), ವರ್ಷಾ (18), ಸ್ನೇಹಾ (19), ಅಭಿಶೇಕ್ (19) ಮೃತರು. ಕಾವೇರಿ ನದಿಯಿಂದ ಅಗ್ನಿಶಾಮಕ ದಳ ಶವಗಳನ್ನ ಹೊರತೆಗೆದಿದ್ದಾರೆ. ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡಿದಿದೆ.

ತೀವ್ರ ಬಿಸಿಲಿನಿಂದಾಗಿ ಕುಸಿದು ಬಿದ್ದು ಮಹಿಳೆ ಸಾವು 

ಯಾದಗಿರಿ: ತೀವ್ರ ಬಿಸಿಲಿನಿಂದಾಗಿ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರವಂತಹ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಕುರಕುಂದಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಹಣಮಂತಿ (60) ಮೃತ ಕಾರ್ಮಿಕ ಮಹಿಳೆ. ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ಹೋಗಿದ್ದರು. ಬಿಸಿಲಿನಲ್ಲೇ ಕೆಲಸ ಮಾಡುತ್ತಿದ್ದರು. ಹೀಗಾಗಿ ಅಧಿಕ ಬಿಸಿಲಿನಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ರಥೋತ್ಸವ ವೇಳೆ ಅವಘಡ: ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ

ಮಹಿಳೆಯ ಮೃತದೇಹ ಯಾದಗಿರಿ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಡಗೇರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಟಿವಿ9 ಜೊತೆ ವಡಗೇರ ತಾಲೂಕು ಪಂಚಾಯತಿ ಇಒ ಪ್ರತಿಕ್ರಿಯಿಸಿದ್ದು, ಮೃತ ಕೂಲಿ ಕಾರ್ಮಿಕ ಮಹಿಳೆ ಅಸ್ತಮಾದಿಂದ ಬಳಲುತ್ತಿದ್ದರೂ ಕೂಡ ಕೆಲಸ ಮಾಡಲು ಬಂದಿದ್ದರು ಎಂದು ಹೇಳಿದ್ದಾರೆ.

ರೈಲಿಗೆ ಸಿಲುಕಿ ಅಪರಿಚಿತ ಯುವಕ ಸಾವು

ಚಿಕ್ಕಮಗಳೂರು: ರೈಲಿಗೆ ಸಿಲುಕಿ ಅಪರಿಚಿತ ಯುವಕ ಸಾವನ್ನಪ್ಪಿರುವಂತಹ ಘಟನೆ ತರೀಕೆರೆ ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ರೈಲ್ವೆ ಪೊಲೀಸರಿಂದ ಸ್ಥಳ ಪರಿಶೀಲನೆ ಮಾಡಿದ್ದು, ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಯುವಕನ ಗುರುತು ಪತ್ತೆಗಾಗಿ ರೈಲ್ವೆ ಪೊಲೀಸರಿಂದ ಹರಸಾಹಸ ಪಟ್ಟಿದ್ದಾರೆ.

ಸಿಡಿಲು ಬಡಿದು ಹದಿನಾರು ವರ್ಷದ ಬಾಲಕ ಸಾವು

ಕೊಪ್ಪಳ: ಸಿಡಿಲು ಬಡಿದ ಪರಿಣಾಮ ಹದಿನಾರು ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿ ಕುರಿ ಮೇಯಿಸುತ್ತಿದ್ದ ಶ್ರೀನಿವಾಸ್ ಗೊಲ್ಲರ್​ಗೆ ಸಿಡಿಲು ಬಡಿದಿದ್ದು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಲಬುರ್ಗಾ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:44 pm, Mon, 29 April 24

Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ