AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥ್ರಿಲ್​ಗಾಗಿ ಬೆಟ್ಟ ಏರಿದ್ದ ಯುವತಿಯರಿಗೆ ಶಾಕ್: ವಾಪಸ್​ ಹೋಗಲು ದಾರಿ ಕಾಣದೆ ಆತಂಕ, ರಕ್ಷಣೆ

ರಾಮನಗರ ತಾಲೂಕಿನ ಹಂದಿಗುಂದಿ ಬೆಟ್ಟಕ್ಕೆ ಬೆಂಗಳೂರಿನಿಂದ 6 ಯುವತಿಯರ ತಂಡ ನಿನ್ನೆ ‌ಚಾರಣಕ್ಕೆ ಬಂದಿದ್ದಾರೆ. ಈ ವೇಳೆ ದಾರಿ ತಪ್ಪಿ ಬೇರೊಂದು ಬೆಟ್ಟಕ್ಕೆ ತೆರಳಿದ್ದಾರೆ. ಬಂದ ದಾರಿಯಲ್ಲಿ ವಾಪಾಸ್ ಹೋಗಲು ಆಗದೇ ಹಲವು ಗಂಟೆ ಆತಂಕಗೊಂಡಿದ್ದಾರೆ. ಬಳಿಕ ಪ್ರಾಣದ ಹಂಗು ತೊರೆದು ಯುವತಿಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಥ್ರಿಲ್​ಗಾಗಿ ಬೆಟ್ಟ ಏರಿದ್ದ ಯುವತಿಯರಿಗೆ ಶಾಕ್: ವಾಪಸ್​ ಹೋಗಲು ದಾರಿ ಕಾಣದೆ ಆತಂಕ, ರಕ್ಷಣೆ
ರಕ್ಷಣೆಗೊಳಗಾದ ಯುವತಿಯರು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Dec 17, 2023 | 8:03 PM

Share

ರಾಮನಗರ, ಡಿಸೆಂಬರ್​ 17: ಟ್ರಕ್ಕಿಂಗ್ (trekking) ವೇಳೆ ಕಾಡುದಾರಿ ತಪ್ಪಿದ್ದ 6 ಯುವತಿಯರನ್ನು ಪ್ರಾಣದ ಹಂಗು ತೊರೆದು ಪೊಲೀಸರು ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ರಾಮನಗರ ತಾಲೂಕಿನ ಹಂದಿಗುಂದಿ ಬೆಟ್ಟಕ್ಕೆ ಬೆಂಗಳೂರಿನಿಂದ 6 ಯುವತಿಯರ ತಂಡ ನಿನ್ನೆ ‌ಚಾರಣಕ್ಕೆ ಬಂದಿದ್ದಾರೆ. ಈ ವೇಳೆ ದಾರಿ ತಪ್ಪಿ ಬೇರೊಂದು ಬೆಟ್ಟಕ್ಕೆ ತೆರಳಿದ್ದಾರೆ. ಬಂದ ದಾರಿಯಲ್ಲಿ ವಾಪಾಸ್ ಹೋಗಲು ಆಗದೇ ಹಲವು ಗಂಟೆ ಆತಂಕಗೊಂಡಿದ್ದಾರೆ.  ದಿನವೆಲ್ಲ ಸುತ್ತಾಡಿ ಸಂಜೆಯಾಗುತ್ತಿದ್ದಂತೆ ಕೊನೆಗೆ ದಾರಿ ಕಾಣದೆ ಪರದಾಡಿದ್ದಾರೆ.

6 ಯುವತಿಯರು ಬನ್ನೇರುಘಟ್ಟ ರಸ್ತೆ ಹೊರಮಾವು ಬಳಿಯ ನಿವಾಸಿಗಳು ಎನ್ನಲಾಗುತ್ತಿದೆ. ರಾಮನಗರ ಬಸವನಪುರ ಬಳಿ ಕಾರು ನಿಲ್ಲಿಸಿ‌ ನಿನ್ನೆ ಬೆಳಿಗ್ಗೆ 10‌‌ ಗಂಟೆಗೆ ಟ್ರಕ್ಕಿಂಗ್ ತೆರಳಿದ್ದರು. ಮಧ್ಯಾಹ್ನದ ವೇಳೆ ಬೆಟ್ಟ ಇಳಿದು ವಾಪಾಸ್​ ಆಗುತ್ತಿದ್ದು, ಎಷ್ಟೇ ನಡೆದರೂ ಹೆದ್ದಾರಿ ಸಿಗದ ಕಾರಣ ಹೈರಾಣಗಿದ್ದಾರೆ. ರಾತ್ರಿ ಆದರೂ ಕಾಡಿನಲ್ಲೇ ಸುತ್ತಾಡಿದ್ದಾರೆ. ಮತ್ತೆ ವಾಪಾಸ್ ಬೆಟ್ಟ ಹತ್ತಿ 112ಗೆ ಕರೆ ಮಾಡಿದ್ದಾರೆ.

ಇದನ್ನೂ ಓದಿ: ಕನಕಪುರ ಸರ್ಕಾರಿ ಶಾಲೆಯಲ್ಲಿದೆಂತ ಸ್ಥಿತಿ, ಮಕ್ಕಳ ಕೈಯಿಂದಲೇ ಶಾಲೆ ಆವರಣದಲ್ಲಿ ಬಿದ್ದ ಬಿಯರ್ ಬಾಟಲ್, ಮಲ ಸ್ವಚ್ಛ ಕಾರ್ಯ

ಇತ್ತ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಹಾಗೂ ರಮೇಶ್ ಎಂಬುವವರು ಯುವತಿಯರಿಗೆ ಧೈರ್ಯ ತುಂಬಿದ್ದಾರೆ. ಬಳಿಕ ವಾಹನ ತೆರಳಲು ಸಾಧ್ಯವಾಗದೆ ಸ್ಥಳಕ್ಕೆ ಸ್ಥಳಿಯರ ಸಹಾಯದಿಂದ ಕಾಲ್ನಡಿಗೆಯಲ್ಲೇ ಪೊಲೀಸರು ತೆರಳಿದ್ದಾರೆ. ಕಾಡಾನೆ ಪ್ರದೇಶ ಹಿನ್ನೆಲೆ ಯುವತಿಯರು ಬಹಳಷ್ಟು ಭಯ ಪಟ್ಟಿದ್ದರು. ರಾತ್ರಿ 8:3೦ರ ವೇಳೆಗೆ ಬೆಟ್ಟದ ತುದಿಯಲ್ಲಿ ಯುವತಿಯರ ರಕ್ಷಣೆ ಮಾಡಲಾಗಿದೆ. ಪೊಲೀಸರು ಆಗಮನದ ನಂತರ ಯುವತಿಯರು ನಿಟ್ಟುಸಿರು ಬಿಟ್ಟಿದ್ದಾರೆ.

ವನ್ಯ ಮೃಗಗಳ ಭಯದ ನಡುವೆ ರಕ್ಷಣೆಗೆ ನಿಂತ 112 ಸಿಬ್ಬಂದಿ

ಸುಮಾರು 10 ಕಿ.ಮೀ ಕಾಲ್ನಡಿಗೆಯಲ್ಲಿ ಯುವತಿಯರಿಗಾಗಿ ಹುಡುಕಾಟ ನಡೆಸಿದ್ದು, ಮೊಬೈಲ್ ನೆಟ್ ವರ್ಕ್ ಆಧರಿಸಿ, ಟಾರ್ಚ್ ಬೆಳಕಿನೆಡಿಗೆ ಯುವತಿಯರನ್ನು ಹುಡುಕಾಡಲಾಗಿದೆ. ಸತತ ಎರಡು ಗಂಟೆ ಕಾಲ ಯುವತಿಯರ ರಕ್ಷಣೆಗಾಗಿ ಕಾರ್ಯಾಚರಣೆ ಮಾಡಿದ್ದರು, ಬಳಿಕ 6 ಯುವತಿಯರನ್ನು 112 ಪೊಲೀಸರು ರಕ್ಷಿಸಿ ಕರೆತಂದಿದ್ದಾರೆ. ರಾಜೇಶ್ ಹಾಗೂ ರಮೇಶ್​ ಅವರ ಕೆಲಸಕ್ಕೆ‌ ಪ್ರಶಂಸೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?