AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ತನಿಖೆ ವೇಳೆ ಬಯಲಿಗೆ ಬಂತು ಕ್ಲಬ್​ ಹೌಸ್​ ಮರ್ಮ

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಪೊಲೀಸರು ನಾಲ್ವರನ್ನು ವಿಚಾರಣೆಗೆ ಒಳಪಡಿಸಿದ್ದು, ಪ್ರದೀಪ್​ಗೆ ಎಲ್ಲೂ ವಂಚನೆ ಮಾಡಿರುವುದು ಕಂಡುಬಂದಿಲ್ಲ ಎಂದು ರಾಮನಗರ ಎಸ್​ಪಿ ಹೇಳಿದ್ದಾರೆ.

ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ತನಿಖೆ ವೇಳೆ ಬಯಲಿಗೆ ಬಂತು ಕ್ಲಬ್​ ಹೌಸ್​ ಮರ್ಮ
ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಪ್ರದೀಪ್ ಮತ್ತು ಶಾಸಕ ಅರವಿಂದ ಲಿಂಬಾವಳಿ
TV9 Web
| Updated By: Rakesh Nayak Manchi|

Updated on:Jan 12, 2023 | 9:58 AM

Share

ರಾಮನಗರ: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ (Pradeep Suicide Case) ಸಂಬಂಧ ಕಗ್ಗಲಿಪುರ ಠಾಣಾ ಪೊಲೀಸರು ಐವರಿಗೆ ನೋಟಿಸ್ ಜಾರಿ ಮಾಡಿ ನಾಲ್ವರನ್ನು ವಿಚಾರಣೆಗೊಳಪಡಿಸಿದ್ದಾರೆ. ನಾಲ್ವರನ್ನು ವಿಚಾರಣೆ ನಡೆಸಿದಾಗ ಪ್ರದೀಪ್​ಗೆ ಎಲ್ಲೂ ವಂಚನೆ ಮಾಡಿರುವುದು ಕಂಡುಬಂದಿಲ್ಲ ಎಂದು ರಾಮಗನರ ಎಸ್​ಪಿ (Ramanagara SP) ಸಂತೋಷ್ ಬಾಬು ಹೇಳಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಅವರು, ಆತ್ಮಹತ್ಯೆಗೆ ಪ್ರಚೋದನೆ ನೀಡುವ ಅಂಶ ಕೂಡ ತನಿಖೆಯಿಂದ ಕಂಡುಬಂದಿಲ್ಲ. ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಹಿನ್ನಲೆ ಶಾಸಕ ಅರವಿಂದ ಲಿಂಬಾವಳಿ (MLA Aravind Limbavali) ಅವರಿಂದ ಹೇಳಿಕೆ ಪಡೆಯಲಾಗುವುದು ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ಈಗಾಗಲೇ ನಾಲ್ವರು ಆರೋಪಿಗಳ ವಿಚಾರಣೆ ‌ಮಾಡಲಾಗಿದೆ. ಗೋಪಿ ಎಂಬ ಆರೋಪಿಯ ವಿಚಾರಣೆ ಬಾಕಿ ಇದೆ. ಪ್ರಾಥಮಿಕ ತನಿಖೆಯಿಂದ ಇದು ಸಿವಿಲ್ ವ್ಯಾಜ್ಯ (ಆಸ್ತಿಗೆ ಸಂಬಂಧಿಸಿದ ವ್ಯಾಜ್ಯ) ಎಂಬುದು ಗೊತ್ತಾಗಿದೆ. ಕೊವಿಡ್ ಸಂದರ್ಭದಲ್ಲಿ ‌ಕ್ಲಬ್​ನಲ್ಲಿ ಲಾಸ್ ಆಗಿ ಹಣ ಹಿಂತಿರುಗಿಸುವುದು ಕಷ್ಟವಾಗಿರುವುದು ಕಂಡು ಬಂದಿದೆ. ಗೋಪಿ ಎಂಬಾತನೇ ಪ್ರದೀಪ್​ಗೆ ಮೈನ್ ಪಾಟ್ನರ್ ಆಗಿದ್ದ ಎಂದರು.

ತಲೆಮರೆಸಿಕೊಂಡಿರುವ ಆರೋಪಿ ಗೋಪಿ ವಿಚಾರಣೆ ನಂತರ ಮತ್ತಷ್ಟು ಸತ್ಯಾಂಶ ತಿಳಿದುಬರಲಿದೆ. ಗೋಪಿ, ಸೋಮಯ್ಯ, ಪ್ರದೀಪ್ ಮಾತ್ರ ಕ್ಲಬ್​ನ ಪಾರ್ಟ್ನರ್​ಗಳಾಗಿದ್ದರು. ಗೋಪಿ ಯಾಕೆ ತಲೆ ಮರೆಸಿಕೊಂಡಿದ್ದಾನೆ ಗೊತ್ತಿಲ್ಲ. ಗೋಪಿ ವಿಚಾರಣೆ ನಂತರ ಶಾಸಕ ಅರವಿಂದ್ ಲಿಂಬಾವಳಿ ಹೇಳಿಕೆ ಪಡೆಯುತ್ತೇನೆ ಎಂದು ಎಸ್​ಪಿ ಹೇಳಿದರು.

ಇದನ್ನೂ ಓದಿ: ಪ್ರದೀಪ್ ಆತ್ಮಹತ್ಯೆ ಪ್ರಕರಣ | ಅರವಿಂದ ಲಿಂಬಾವಳಿಯನ್ನು ಬಂಧಿಸಿ ವಿಚಾರಣೆ ನಡೆಸಬೇಕು: ಸಿದ್ದರಾಮಯ್ಯ

ಆತ್ಮಹತ್ಯೆ ಪ್ರಕರಣ ಸಂಬಂಧ ಎ2 ಆರೋಪಿ ಸೋಮಯ್ಯ, ಎ4 ರಮೇಶ್ ರೆಡ್ಡಿ, ಎ5 ಜಯರಾಮ್ ರೆಡ್ಡಿ, ಎ6 ರಾಘವ್ ಭಟ್ ವಿಚಾರಣೆಯನ್ನು ಮುಗಿಸಿದ ಕಗ್ಗಲಿಪುರ ಪೊಲೀಸರು, ಪ್ರತಿಯೊಬ್ಬರ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಪ್ರಮುಖ ಆರೋಪಿ ಗೋಪಿಯ ಬಂಧನಕ್ಕೆ ಶೋಧ ಮುಂದುವರಿಸಿದ್ದಾರೆ.

ಆರೋಪಿಗಳ ಹೇಳಿಕೆ ಜೊತೆಗೆ ಹಲವು ಮಾಹಿತಿ ಕಲೆ ಹಾಕಿರುವ ಪೊಲೀಸರು, ಉದ್ಯಮಿ ಪ್ರದೀಪ್​ಗೆ ಸೇರಿದ ಬ್ಯಾಂಕ್ ವಹಿವಾಟು ವಿವರಗಳನ್ನು ಕೂಡ ಸಂಗ್ರಹ ಮಾಡಿದ್ದಾರೆ. ಪ್ರದೀಪ್ ಆತ್ಮಹತ್ಯೆ ಬಳಿಕ ಪೊಲೀಸರು ಬ್ಯಾಂಕ್​ಗೆ ಪತ್ರ ಬರೆದು ಹಣಕಾಸಿನ ವರ್ಗಾವಣೆ ವಿವರ ಕೇಳಿದ್ದರು. ಇದೀಗ ಪ್ರದೀಪ್ ಬ್ಯಾಂಕ್ ಖಾತೆ ಟ್ರಾನ್ಸಕ್ಷನ್​ಗೆ ಸೇರಿದ ಸಂಪೂರ್ಣ ವಿವರ ಪೊಲೀಸರ ಕೈ ಸೇರಿದ್ದು, ಕಳೆದ ಕೆಲ ವರ್ಷಗಳಿಂದ ಪ್ರದೀಪ್ ಬ್ಯಾಂಕ್ ಖಾತೆಗೆ ಯಾವ ಯಾವ ಮೂಲಗಳಿಂದ ಹಣ ಜಮೆಯಾಗಿದೆ, ಪ್ರದೀಪ್ ಖಾತೆಗೆ ಹಣ ಬಂದಿರುವ ಮತ್ತು ಹೋಗಿರುವ ವಿವರಗಳ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Thu, 12 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ