AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲಾಟೆ ಪ್ರಕರಣವೊಂದರಲ್ಲಿ ವಕೀಲರ ಮೇಲೆ ಸುಳ್ಳು ಎಫ್ಐಆರ್ ಆರೋಪ: ಊಟ ಬಿಟ್ಟು ಬಂದು ಮನವಿ ಸ್ವೀಕರಿಸಿದ ಡಿಸಿ

40 ವಕೀಲರ ವಿರುದ್ಧ ದೂರು ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ಪಿಎಸ್​ಐ ತನ್ವೀರ್ ಅಮಾನತಿಗೆ ಆಗ್ರಹಿಸಿ ರಾಮನಗರದ ಐಜೂರು ಸರ್ಕಲ್ ಬಳಿ ಸುಮಾರು 300ಕ್ಕೂ ಹೆಚ್ಚು ವಕೀಲರಿಂದ ಪ್ರತಿಭಟನಾ ರ‍್ಯಾಲಿ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ವಕೀಲರ ಪ್ರತಿಭಟನೆ ಮಾಡಿದ್ದು, ಈ ವೇಳೆ ಡಿಸಿ ಮತ್ತು ಎಸ್​ಪಿ ಊಟ ಬಿಟ್ಟು ವಕೀಲರ ಮನವಿ ಸ್ವಿಕರಿಸಿದ್ದಾರೆ.

ಗಲಾಟೆ ಪ್ರಕರಣವೊಂದರಲ್ಲಿ ವಕೀಲರ ಮೇಲೆ ಸುಳ್ಳು ಎಫ್ಐಆರ್ ಆರೋಪ: ಊಟ ಬಿಟ್ಟು ಬಂದು ಮನವಿ ಸ್ವೀಕರಿಸಿದ ಡಿಸಿ
ವಕೀಲರ ಪ್ರತಿಭಟನೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Feb 19, 2024 | 4:47 PM

Share

ರಾಮನಗರ, ಫೆಬ್ರವರಿ 19: 40 ವಕೀಲರ (lawyers) ವಿರುದ್ಧ ದೂರು ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ರಾಮನಗರದ ಐಜೂರು ಸರ್ಕಲ್ ಬಳಿ ಸುಮಾರು 300ಕ್ಕೂ ಹೆಚ್ಚು ವಕೀಲರಿಂದ ಪ್ರತಿಭಟನಾ ರ‍್ಯಾಲಿ ಮಾಡಲಾಗಿದೆ. ಪಿಎಸ್​ಐ ತನ್ವೀರ್ ಅಮಾನತಿಗೆ ಆಗ್ರಹಿಸಿ ರಾಮನಗರ ಜಿಲ್ಲಾಧಿಕಾರಿ ಕಚೇರಿವರೆಗೆ ವಕೀಲರ ಮೆರವಣಿಗೆ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ವಕೀಲರ ಪ್ರತಿಭಟನೆ ಮಾಡಿದ್ದು, ಡಿಸಿ ಊಟಕ್ಕೆ ಹೋಗಿದ್ದಾರೆ ಎಂದು ಸಿಬ್ಬಂದಿ ಹೇಳಿದ್ದಾರೆ. ನಾವು ಹಸಿದುಕೊಂಡು ಪ್ರತಿಭಟನೆ ಮಾಡುತ್ತಿದ್ದೇವೆ. ಅದ್ಹೇಗೆ ಅವರು ಊಟ ಮಾಡುತ್ತಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಡಿಸಿ ಮತ್ತು ಎಸ್​ಪಿ ಊಟ ಬಿಟ್ಟು ಹೊರ ಬಂದಿದ್ದಾರೆ. ವಕೀಲರ ಮನವಿ ಸ್ವಿಕರಿಸಲು ಡಿಸಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್​ ಮತ್ತು ಎಸ್​ಪಿ ಕಾರ್ತಿಕ್ ರೆಡ್ಡಿ ಊಟ ಬಿಟ್ಟು ಬಂದಿದ್ದಾರೆ.

ಜಿಲ್ಲಾಧಿಕಾರಿಗೆ 2 ಗಂಟೆಗಳ ಡೆಡ್​​ಲೈನ್​ ನೀಡಿದ ವಕೀಲರು

ಈ ವೇಳೆ ಮಾತನಾಡಿದ ಡಿಸಿ‌ಜಿಲ್ಲಾಧಿಕಾರಿ ಡಾ.ಅವಿನಾಶ್​ ತಪ್ಪು ಮಾಡಿದರೆ ತನಿಖೆ ಮಾಡಿ‌ ಕ್ರಮ ತಗೊಳ್ಳುತ್ತೇವೆ. ಅವರಿಗೆ ಒಂದು ಅವಕಾಶ ಮಾಡಿಕೊಡಿ ಎಂದಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿಗೆ 2 ಗಂಟೆಗಳ ಡೆಡ್​​ಲೈನ್​ ನೀಡಿದ ವಕೀಲರು, 2 ಗಂಟೆಯೊಳಗೆ ಒಂದು ನಿರ್ಧಾರಕ್ಕೆ ಬಂದು ಪಿಎಸ್​ಐ ಸಸ್ಪೆಂಡ್​ ಮಾಡುವಂತೆ ತಾಕೀತು ಮಾಡಿದ್ದಾರೆ. ಜೊತೆಗೆ ಗೃಹ ಸಚಿವರೂ ಸ್ಥಳಕ್ಕೆ ಬರಬೇಕು ಎಂದು ವಕೀಲರು ಪಟ್ಟುಹಿಡಿದ್ದಾರೆ. 5 ಗಂಟೆಯವರೆಗೆ ಇನ್ವೆಸ್ಟಿಗೇಷನ್ ಮಾಹಿತಿ ಪಡೆದುಕೊಳ್ಳುತ್ತೇನೆ. ಬಳಿಕ ನಿರ್ಧಾರವನ್ನು ತಿಳಿಸುತ್ತೇನೆ‌ ಎಂದು ಡಿಸಿ ಡಾ.ಅವಿನಾಶ್ ಹೇಳಿದ್ದಾರೆ.

ಎಸ್​ಪಿ ಕಾರ್ತಿಕ್ ರೆಡ್ಡಿ ಹೇಳಿದ್ದಿಷ್ಟು 

ಎಸ್​ಪಿ ಕಾರ್ತಿಕ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಕಳೆದ ವಾರ ಬಾರ್ ಕೌನ್ಸಿಲ್ ಹಾಗೂ ಪದಾಧಿಕಾರಿ ಅರ್ಜಿ ಕೊಟ್ಟಿದ್ದಾರೆ. ಅದನ್ನು ನಾವು ತನಿಖೆ ಮಾಡುತ್ತಿದ್ದೇವೆ. ವಕೀಲರು ಕೊಟ್ಟ ಅರ್ಜಿಯನ್ನು ತನಿಖೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸಿದಿ ತೀರ್ಪು: ವಾರಾಣಸಿ ಜಿಲ್ಲಾ ಕೋರ್ಟ್​ನ ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಪೋಸ್ಟ್​​, ವಕೀಲ ಅರೆಸ್ಟ್​​

ವಕೀಲರ ಮೇಲೆ ದೂರು ವಿಚಾರವಾಗಿ 100% ವಾಸ್ತವಾಂಶವಾಗಿ ನಾವು ರಿಪೋರ್ಟ್ ಕೊಡುತ್ತೇವೆ ಎಂದಿದ್ದು, ಈ ವೇಳೆ ಕಾರ್ತಿಕ್ ರೆಡ್ಡಿ ಮಾತನ್ನು ವಕೀಲರು ಅಲ್ಲಗೆಳೆದಿದ್ದಾರೆ. ಕೂಡಲೇ ಸಸ್ಪೆಂಡ್ ಆಗಲೇಬೇಕು ಅಂತ ಪಟ್ಟ ಹಿಡಿದಿದ್ದಾರೆ.

ಇದನ್ನೂ ಓದಿ: ಮಂಡ್ಯ ಲೋಕಸಭಾ ಕಣದಿಂದ ಹಿಂದೆ ಸರಿದಿದ್ದ ನಿಖಿಲ್ ಕುಮಾರಸ್ವಾಮಿ ಯೂಟರ್ನ್

ಮಂಡ್ಯ, ಮೈಸೂರು, ಆನೇಕಲ್, ಭದ್ರಾವತಿ ಸೇರಿದಂತೆ ಅನೇಕ ಕಡೆಯಿಂದ ವಕೀಲರು, ಮಹಿಳಾ ವಕೀಲರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಘಟನೆ ಹಿನ್ನೆಲೆ 

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ತೀರ್ಪು ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಸಾಮಾಜಿ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್​ ಹಾಕಿದ್ದ ಎಸ್​ಡಿಪಿಐ ಕಾರ್ಯಕರ್ತ ಚಾಂದ್ ಪಾಷಾರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಇದಕ್ಕೆ ಪ್ರತಿಯಾಗಿ ಎಸ್​ಡಿಪಿಐ ಕಾರ್ಯಕರ್ತ ಚಾಂದ್ ಪಾಷಾರ ಕಡೆಯೊಬ್ಬರು ನೀಡಿದ್ದ ಸುಳ್ಳು ದೂರಿನ ಆಧಾರದ ಮೇಲೆ ಐಜೂರು ಪೊಲೀಸರು ವಕೀಲರ ಸಂಘದ 40 ವಕೀಲರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿತ್ತು. ಸದ್ಯ ಇದನ್ನು ಖಂಡಿಸಿ ವಕೀಲರಿಂದ ಪ್ರತಿಭಟನಾ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:58 pm, Mon, 19 February 24

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?