AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿವೃಷ್ಟಿ, ಥರಗುಟ್ಟುವ ಚಳಿ ಪರಿಣಾಮ ರಾಮನಗರ ರೇಷ್ಮೆಗೂಡಿನಲ್ಲಿ ಬಂಪರ್ ಧಾರಣೆ, ಇ-ಪಾವತಿಯಿಂದ ರೈತರು ಇನ್ನಷ್ಟು ನಿರಾಳ

Cocoon Market Ramanagara: ಇತ್ತೀಚಿಗೆ ಸುರಿದ ಧಾರಕಾರ ಮಳೆಯಿಂದಾಗಿ ರೇಷ್ಮೆ ಕೃಷಿಗೂ ಹೊಡೆತ ಬಿದ್ದಿತ್ತು. ಹಿಪ್ಪುನೇರಳೆ ಗಿಡಗಳಿಗೆ ಹಾನಿಯಾಗಿತ್ತು. ಈ ಮಧ್ಯೆ ಇದೀಗ ಚಳಿ ಕೂಡ ಆರಂಭವಾಗಿದ್ದು, ಸಹಜವಾಗಿಯೇ ಗೂಡು ಉತ್ಪಾದನೆ ಕುಸಿತ ಕಾಣುತ್ತಿದೆ. ಆದರೆ ರೈತರಿಗೆ ಮಾತ್ರ ಉತ್ತಮ ಬೆಲೆ ಸಿಗುತ್ತಿದೆ.

ಅತಿವೃಷ್ಟಿ, ಥರಗುಟ್ಟುವ ಚಳಿ ಪರಿಣಾಮ ರಾಮನಗರ ರೇಷ್ಮೆಗೂಡಿನಲ್ಲಿ ಬಂಪರ್ ಧಾರಣೆ, ಇ-ಪಾವತಿಯಿಂದ ರೈತರು ಇನ್ನಷ್ಟು ನಿರಾಳ
ಅತಿವೃಷ್ಟಿ, ಥರಗುಟ್ಟುವ ಚಳಿ ಪರಿಣಾಮ ರಾಮನಗರ ರೇಷ್ಮೆಗೂಡಿನಲ್ಲಿ ಬಂಪರ್ ಧಾರಣೆ, ಇ-ಪಾವತಿಯಿಂದ ರೈತರು ಇನ್ನಷ್ಟು ನಿರಾಳ
TV9 Web
| Edited By: |

Updated on:Nov 28, 2022 | 5:35 PM

Share

ಆ ಜಿಲ್ಲೆ ಅದೊಂದು ಬೆಳೆಗೆ ಫೇಮಸ್. ಆ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲವೆಂದು ಆ ಜಿಲ್ಲೆಯ ರೈತರು ಪರದಾಡುತ್ತಿದ್ದರು. ಅಷ್ಟೇ ಅಲ್ಲದೆ ಬೆಳೆ ಮಾರಾಟದ ಹಣ ಸಹಾ ಸರಿಯಾಗಿ ಸಿಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಅಲ್ಲದೆ ಮಾರುಕಟ್ಟೆಯನ್ನ ಬಂದ್ ಮಾಡಿ ಪ್ರತಿಭಟನೆ ಕೂಡ ಮಾಡಿದ್ದರು. ಆದರೆ ಇದೀಗ ರೈತರಿಗೆ ಬಂಪರ್ ಬೆಲೆ (bumper income) ಸಿಗುತ್ತಿದ್ದು, ರೈತರು ಫುಲ್ ಖುಷ್ ಆಗಿದ್ದಾರೆ. ಈ ಕುರಿತು ಒಂದು ವರದಿ.

ಹೌದು ಅತಿವೃಷ್ಟಿ ಹಾಗೂ ಚಳಿಯಿಂದಾಗಿ ರೇಷ್ಮೆಗೂಡಿನ ಉತ್ಪಾದನೆ ಕುಂಠಿತವಾಗಿದ್ದು, ಇದರಿಂದಾಗಿ ರೇಷ್ಮೆಗೂಡಿನ ಧಾರಣೆ ಏರುತ್ತಿದೆ. ಏಷ್ಯಾದಲ್ಲಿಯೇ ಅತಿದೊಡ್ಡ ರೇಷ್ಮೆಗೂಡಿನ ಮಾರುಕಟ್ಟೆಯ ಖ್ಯಾತಿಯ ರಾಮನಗರ ಮಾರುಕಟ್ಟೆಗೆ (Government Cocoon Market Ramanagara) 290 ಲಾಟ್ ನಷ್ಟು ದ್ವಿದಳಿ ಗೂಡು ಅವಕವಾಗಿದ್ದು, ಕೆಜಿಗೆ 865 ರೂ ದರದಲ್ಲಿ ಹರಾಜು ನಡೆದಿದೆ. ಅಂತೆಯೇ 124 ಲಾಟ್ ಮಿಶ್ರತಳಿ ಗೂಡು ಬಂದಿದ್ದು, ಸರಾಸರಿ 680 ರಂತೆ ಮಾರಾಟವಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಂದಹಾಗೆ ಕಳೆದ ಎರಡು ವರ್ಷಗಳಿಂದ ರೇಷ್ಮೆಗೂಡಿಗೆ ಉತ್ತಮ ಬೆಲೆ ಸಿಗುತ್ತಿದೆ. ರಾಮನಗರ ಮಾರುಕಟ್ಟೆಯಲ್ಲೆ ಸುಮಾರು 86 ಸಾವಿರ ರೈತರು ನೊಂದಾಯಿಸಿಕೊಂಡಿದ್ದಾರೆ. ಅಲ್ಲದೆ ಬೇರೆ ಜಿಲ್ಲೆಗಳು ಹೊರರಾಜ್ಯಗಳಿಂದಲೂ ಗೂಡು ಬರುತ್ತದೆ. ಇನ್ನು ಇತ್ತೀಚಿಗೆ ಸುರಿದ ಧಾರಕಾರ ಮಳೆಯಿಂದಾಗಿ ರೇಷ್ಮೆ ಕೃಷಿಗೂ ಹೊಡೆತ ಬಿದ್ದಿತ್ತು. ಹಿಪ್ಪುನೇರಳೆ ಗಿಡಗಳಿಗೆ ಹಾನಿಯಾಗಿತ್ತು. ಈ ಮಧ್ಯೆ ಇದೀಗ ಚಳಿ ಕೂಡ ಆರಂಭವಾಗಿದ್ದು, ಸಹಜವಾಗಿಯೇ ಗೂಡು ಉತ್ಪಾದನೆ ಕುಸಿತ ಕಾಣುತ್ತಿದೆ. ಆದರೆ ರೈತರಿಗೆ ಮಾತ್ರ ಉತ್ತಮ ಬೆಲೆ ಸಿಗುತ್ತಿದೆ ಎನ್ನುತ್ತಾರೆ ರೇಷ್ಮೆ ಬೆಳೆಗಾರ ನೀಲಕಂಠ.

ರಾಮನಗರದ ರೇಷ್ಮೆಗೂಡು ಮಾರುಕಟ್ಟೆ -ಸಂಪೂರ್ಣ ನಗದು ರಹಿತ ಮಾರುಕಟ್ಟೆ:

Government Cocoon Market Ramanagara

ಅಂದಹಾಗೆ ರಾಮನಗರದ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ ಏಷ್ಯಾದಲ್ಲಿಯೇ ಅತಿ ದೊಡ್ಡದಾದ ಮಾರುಕಟ್ಟೆ. ರಾಮನಗರ ಜಿಲ್ಲೆಯ ಸ್ಥಳೀಯ ರೈತರು ಜೊತೆಗೆ ಬೇರೆ ಬೇರೆ ಜಿಲ್ಲೆಗಳು ಹಾಗೂ ತಮಿಳುನಾಡು, ಆಂಧ್ರಪ್ರದೇದ, ತೆಲಂಗಾಣದಿಂದಲೂ ರೈತರು ಇಲ್ಲಿಗೆ ಗೂಡು ತಂದು ಮಾರಾಟ ಮಾಡುತ್ತಾರೆ. ಪ್ರತಿನಿತ್ಯ 40ರಿಂದ 45 ಟನ್ ಗೂಡು ಮಾರಾಟವಾಗುತ್ತಿದೆ. ಸರಾಸರಿ ಎರಡದಿಂದ ಎರಡೂವರೆ ಕೋಟಿ ರೂ ವ್ಯವಹಾರ ನಡೆಯುತ್ತಿದೆ.

ಆದರೆ ಇಂತಹ ಮಾರುಕಟ್ಟೆಯಲ್ಲಿ ರೈತರಿಗೆ ಸಾಕಷ್ಟು ಸಮಸ್ಯೆಗಳು ಎದುರಾಗಿತ್ತು. ಮಾರಾಟ ಮಾಡಿದ ಗೂಡಿಗೆ ಹಣವೇ ಸರಿಯಾಗಿ ಸಿಗುತ್ತಿರಿಲ್ಲ. ದಲ್ಲಾಳಿಗಳು ಅಧಿಕಾರಿಗಳು ಸೇರಿ ತಿಂಗಳುಗಟ್ಟಲೆ ಸತಾಯಿಸುತ್ತಿದ್ದರು. ಆದರೆ ಇದೀಗ ಮಾರುಕಟ್ಟೆ ಸಂಪೂರ್ಣ ನಗದು ರಹಿತ ಮಾರುಕಟ್ಟೆಯಾಗಿದ್ದು, ಇಂದು ರೈತರು ಕೂಡ ಮಾರಾಟ ಮಾಡಿದ್ರೆ, ನಾಳೆ ಅವರ ಅಕೌಂಟ್ ಗೆ ಹಣ ಜಮಾವಣೆ ಆಗುತ್ತದೆ. ಮೊದಲೇ ರೈತರ ಅಕೌಂಟ್ ನಂಬರ್ ಪಡೆದು ದಾಖಲು ಮಾಡಿಕೊಂಡಿರೋ ಅಧಿಕಾರಿಗಳು ಅವರ ಖಾತೆಗೆ ಆನ್ ಲೈನ್ ಕೂಡ ಹಣ ಪಾವತಿಯಾಗುತ್ತದೆ. ಇದರಿಂದ ರೈತರು ಕೂಡ ನಿರಾಳರಾಗಿದ್ದಾರೆ ಎಂದು ರೇಷ್ಮೆಉಪನಿರ್ದೇಶಕ ಸಿ ಡಿ ಬಸವರಾಜು ತಿಳಿಸಿದ್ದಾರೆ.

ಒಟ್ಟಾರೆ ರಾಮನಗರ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಇದೀಗ ರೇಷ್ಮೆಗೂಡಿಗೆ ಒಳ್ಳೆಯ ಧಾರಣೆ ಸಿಗುತ್ತಿದೆ. ಇದರಿಂದ ರೈತರು ಕೂಡ ದಿಲ್ ಖುಷ್ ಆಗಿದ್ದಾರೆ. (ವರದಿ: ಪ್ರಶಾಂತ್ ಹುಲಿಕೆರೆ, ಟಿವಿ 9, ರಾಮನಗರ)

Published On - 2:31 pm, Mon, 28 November 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ