AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ಸಾವು

ರಾಮನಗರ ತಾಲೂಕಿನ‌ ಸಂಗಬಸವನದೊಡ್ಡಿ ಬಳಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಮಂಗಳವಾರ ರಾತ್ರಿ 9.30ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರದ ಮೂವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ಗೆ ಗುದ್ದಿ ಎದುರು ಬದಿಯಿಂ ಬರುತ್ತಿದ್ದ ಕೆಎಸ್​​ಆರ್​ಟಿಸಿ ಬಸ್​ಗೆ ಡಿಕ್ಕಿಯಾಗಿ ಘಟನೆ ಸಂಭವಿಸಿದೆ.

ರಾಮನಗರ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ಸಾವು
ಸಾಂದರ್ಭಿಕ ಚಿತ್ರ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: Ganapathi Sharma

Updated on:Nov 27, 2024 | 7:03 AM

ರಾಮನಗರ, ನವೆಂಬರ್ 27: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ತಡೆಗೆ ಎಷ್ಟೇ ಕ್ರಮ ಕೈಗೊಂಡರೂ ಅವಘಡಗಳು ನಿಲ್ಲುತ್ತಿಲ್ಲ. ಈಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಗುದ್ದಿದ ಕಾರು ಎದುರು ಬದಿಯಿಂದ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿಗೆ ಗುದ್ದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಇಬ್ಬರು ಪುರುಷರು, ಹಾಗೂ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ‌ ಸಂಗಬಸವನದೊಡ್ಡಿ ಬಳಿ ಮಂಗಳವಾರ ರಾತ್ರಿ 9.30ರ ಸುಮಾರಿಗೆ ಘಟನೆ ಸಂಭವಿಸಿದೆ.

ಮೃತರು ಬೆಂಗಳೂರಿನ ಶಿವಾಜಿನಗರದವರು

ಡೆಲ್ಲಿ ಪಾಸಿಂಗ್ ನಂಬರ್ ಹೊಂದಿರುವ ಹ್ಯೂಂಡಯ್ ಐ ಟೆನ್ ಕಾರು ಹಳೆಯ ಮಾಡೆಲ್ ಆಗಿದ್ದು, ಬೆಂಗಳೂರಿನ ಶಿವಾಜಿನಗರದ ನಿವಾಸಿಗಳಾದ ಲಿಯಾಕತ್ (50), ಅಸ್ಮಾ (38), ನೂರ್ (40) ‌ಮೃತ ಪಟ್ಟ ದುರ್ದೈವಿಗಳಾಗಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಕುಟುಂಬ, ಸಂಬಂಧಿಕರ ಕಾರ್ಯಕ್ರಮವೊಂದಕ್ಕೆ ತೆರಳುತ್ತಿತ್ತು. ಕಾರು ಡಿವೈಡರ್​ಗೆ ಕಾರು ಗುದ್ದಿದ ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರನ್ನು ಹೊರ ತೆಗೆಯಲು ಹರಸಾಹಸಪಡಬೇಕಾಯಿತು.

Ramanagara: Terrible accident on Bangalore-Mysore Expressway in Sangabasavanadoddi, three died in spot

ಅಪಘಾತದ ತೀವ್ರತೆಗೆ ನುಜ್ಜುಗುಜ್ಜಾಗಿರುವ ಕಾರು

ಅಪಘಾತ ಕಾರಣ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಕೂಡ ಆಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ರಾಮನಗರ ಟ್ರಾಫಿಕ್ ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ಹೊರ ತೆಗೆದು ರಾಮನಗರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇಯಲ್ಲಿ ಮತ್ತೊಂದು ಕಂಟಕ: ಪ್ರಯಾಣಿಕರಿಗೆ ಪ್ರಾಣ ಭಯ

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಷ್ಟೇ ಮುತುವರ್ಜಿ ವಹಿಸಿದರೂ ಅಪಘಾತಗಳು ನಿಲ್ಲುತ್ತಿಲ್ಲ. ಇರಲಿಲ್ಲ, ಹೀಗಾಗಿ ರಾಜ್ಯದ ಪೊಲೀಸ್ ಇಲಾಖೆಯೇ ಜೀವ ಉಳಿಸುವಂತಹ ನಿಟ್ಟಿನಲ್ಲಿ ಸ್ಪೀಡ್ ಡಿಟೆಕ್ಟರ್​ಗಳನ್ನು ಅಳವಿಡಿಸಿ ಗಂಟೆಗೆ 100 ಕಿಲೋಮೀಟರ್​​ಗಿಂತ ಹೆಚ್ಚು ವೇಗವಾಗಿ ಹೋದರೆ ದಂಡ ವಿಧಿಸುವಂತೆ ಮಾಡಿದ್ದಾರೆ. ಆದರೆ ಈ ಅಪಘಾತದ ಸಂದರ್ಭದಲ್ಲಿ ಕಾರಿನ ವೇಗದ ಮಿತಿ ಗಂಟೆಗೆ 70 ಕಿಲೋಮೀಟರ್ ಕೂಡ ದಾಟಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಅಪಘಾತಕ್ಕೆ ನಿಖರ ಕಾರಣವೇನೆಂಬುದರ ಬಗ್ಗೆ ರಾಮನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:51 am, Wed, 27 November 24

Video: ಪ್ರಧಾನಿ ನರೇಂದ್ರ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
Video: ಪ್ರಧಾನಿ ನರೇಂದ್ರ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
Daily Devotional: ತೀರ್ಥ ತೆಗೆದುಕೊಳ್ಳುವ ವಿಧಾನ ಹೇಗೆ ತಿಳಿಯಿರಿ
Daily Devotional: ತೀರ್ಥ ತೆಗೆದುಕೊಳ್ಳುವ ವಿಧಾನ ಹೇಗೆ ತಿಳಿಯಿರಿ
Daily Horoscope: ಕನ್ಯಾ ರಾಶಿಯ ಆರನೇ ಮನೆಯಲ್ಲಿ ಚಂದ್ರ ಸಂಚಾರ
Daily Horoscope: ಕನ್ಯಾ ರಾಶಿಯ ಆರನೇ ಮನೆಯಲ್ಲಿ ಚಂದ್ರ ಸಂಚಾರ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ