ರಾಮನಗರ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ಸಾವು

ರಾಮನಗರ ತಾಲೂಕಿನ‌ ಸಂಗಬಸವನದೊಡ್ಡಿ ಬಳಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಮಂಗಳವಾರ ರಾತ್ರಿ 9.30ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರದ ಮೂವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ಗೆ ಗುದ್ದಿ ಎದುರು ಬದಿಯಿಂ ಬರುತ್ತಿದ್ದ ಕೆಎಸ್​​ಆರ್​ಟಿಸಿ ಬಸ್​ಗೆ ಡಿಕ್ಕಿಯಾಗಿ ಘಟನೆ ಸಂಭವಿಸಿದೆ.

ರಾಮನಗರ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ಸಾವು
ಸಾಂದರ್ಭಿಕ ಚಿತ್ರ
Edited By:

Updated on: Nov 27, 2024 | 7:03 AM

ರಾಮನಗರ, ನವೆಂಬರ್ 27: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ತಡೆಗೆ ಎಷ್ಟೇ ಕ್ರಮ ಕೈಗೊಂಡರೂ ಅವಘಡಗಳು ನಿಲ್ಲುತ್ತಿಲ್ಲ. ಈಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಗುದ್ದಿದ ಕಾರು ಎದುರು ಬದಿಯಿಂದ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿಗೆ ಗುದ್ದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಇಬ್ಬರು ಪುರುಷರು, ಹಾಗೂ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ‌ ಸಂಗಬಸವನದೊಡ್ಡಿ ಬಳಿ ಮಂಗಳವಾರ ರಾತ್ರಿ 9.30ರ ಸುಮಾರಿಗೆ ಘಟನೆ ಸಂಭವಿಸಿದೆ.

ಮೃತರು ಬೆಂಗಳೂರಿನ ಶಿವಾಜಿನಗರದವರು

ಡೆಲ್ಲಿ ಪಾಸಿಂಗ್ ನಂಬರ್ ಹೊಂದಿರುವ ಹ್ಯೂಂಡಯ್ ಐ ಟೆನ್ ಕಾರು ಹಳೆಯ ಮಾಡೆಲ್ ಆಗಿದ್ದು, ಬೆಂಗಳೂರಿನ ಶಿವಾಜಿನಗರದ ನಿವಾಸಿಗಳಾದ ಲಿಯಾಕತ್ (50), ಅಸ್ಮಾ (38), ನೂರ್ (40) ‌ಮೃತ ಪಟ್ಟ ದುರ್ದೈವಿಗಳಾಗಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಕುಟುಂಬ, ಸಂಬಂಧಿಕರ ಕಾರ್ಯಕ್ರಮವೊಂದಕ್ಕೆ ತೆರಳುತ್ತಿತ್ತು. ಕಾರು ಡಿವೈಡರ್​ಗೆ ಕಾರು ಗುದ್ದಿದ ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರನ್ನು ಹೊರ ತೆಗೆಯಲು ಹರಸಾಹಸಪಡಬೇಕಾಯಿತು.

ಅಪಘಾತದ ತೀವ್ರತೆಗೆ ನುಜ್ಜುಗುಜ್ಜಾಗಿರುವ ಕಾರು

ಅಪಘಾತ ಕಾರಣ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಕೂಡ ಆಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ರಾಮನಗರ ಟ್ರಾಫಿಕ್ ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ಹೊರ ತೆಗೆದು ರಾಮನಗರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇಯಲ್ಲಿ ಮತ್ತೊಂದು ಕಂಟಕ: ಪ್ರಯಾಣಿಕರಿಗೆ ಪ್ರಾಣ ಭಯ

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಷ್ಟೇ ಮುತುವರ್ಜಿ ವಹಿಸಿದರೂ ಅಪಘಾತಗಳು ನಿಲ್ಲುತ್ತಿಲ್ಲ. ಇರಲಿಲ್ಲ, ಹೀಗಾಗಿ ರಾಜ್ಯದ ಪೊಲೀಸ್ ಇಲಾಖೆಯೇ ಜೀವ ಉಳಿಸುವಂತಹ ನಿಟ್ಟಿನಲ್ಲಿ ಸ್ಪೀಡ್ ಡಿಟೆಕ್ಟರ್​ಗಳನ್ನು ಅಳವಿಡಿಸಿ ಗಂಟೆಗೆ 100 ಕಿಲೋಮೀಟರ್​​ಗಿಂತ ಹೆಚ್ಚು ವೇಗವಾಗಿ ಹೋದರೆ ದಂಡ ವಿಧಿಸುವಂತೆ ಮಾಡಿದ್ದಾರೆ. ಆದರೆ ಈ ಅಪಘಾತದ ಸಂದರ್ಭದಲ್ಲಿ ಕಾರಿನ ವೇಗದ ಮಿತಿ ಗಂಟೆಗೆ 70 ಕಿಲೋಮೀಟರ್ ಕೂಡ ದಾಟಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಅಪಘಾತಕ್ಕೆ ನಿಖರ ಕಾರಣವೇನೆಂಬುದರ ಬಗ್ಗೆ ರಾಮನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:51 am, Wed, 27 November 24

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us