AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ನಕಲಿ ಖಾಸಗಿ ಶಾಲೆಗಳ ಹಾವಳಿ: ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ, ಪೋಷಕರು ಆಕ್ರೋಶ

ರಾಮನಗರದಲ್ಲಿ ಅನುಮತಿ ಪಡೆಯದ ಖಾಸಗಿ ಶಾಲೆಗಳು ಹೆಚ್ಚುತ್ತಿವೆ. ಅಕ್ರಮವಾಗಿ ಹೆಚ್ಚುವರಿ ತರಗತಿಗಳನ್ನು ನಡೆಸುತ್ತಿವೆ ಮತ್ತು ಸರಿಯಾದ ದಾಖಲೆಗಳನ್ನು ನೀಡುತ್ತಿಲ್ಲ. ಪೋಷಕರು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಒಂದು ಶಾಲೆಯನ್ನು ಮುಚ್ಚಿಸಲಾಗಿದ್ದು, ಇನ್ನೊಂದು ಶಾಲೆಯ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ರಾಮನಗರದಲ್ಲಿ ನಕಲಿ ಖಾಸಗಿ ಶಾಲೆಗಳ ಹಾವಳಿ: ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ, ಪೋಷಕರು ಆಕ್ರೋಶ
ಖಾಸಗಿ ಶಾಲೆ
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 19, 2025 | 11:08 AM

Share

ರಾಮನಗರ, ಜೂನ್​ 19: ಶಾಲೆ ಅಂದರೆ ಮಕ್ಕಳ ಪಾಲಿನ ದೇವಸ್ಥಾನವಿದ್ದಂತೆ. ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಕೇಂದ್ರ. ಆದರೆ ಕೆಲವು ಶಿಕ್ಷಣ ಸಂಸ್ಥೆಗಳು (Educational institutions) ‌ಹಣದಾಸೆಗೆ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿವೆ. ಅದರಲ್ಲೂ ರೇಷ್ಮೆನಗರಿ ರಾಮನಗರದಲ್ಲಿ ಅನುಮತಿ ಪಡೆಯದೇ ನಕಲಿ ಖಾಸಗಿ ಶಾಲೆಗಳನ್ನ (private schools) ನಡೆಸಲಾಗುತ್ತಿದೆ.

ಅನುಮತಿ ಪಡೆಯದೇ ಆರು, ಏಳನೇ ತರಗತಿ ನಡೆಸುತ್ತಿರುವ ಶಾಲೆ

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಅನಧಿಕೃತ ಖಾಸಗಿ ಶಾಲೆಗಳು ತಲೆ ಎತ್ತಿದ್ದು, ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿವೆ. ಕೆಲವು ಶಿಕ್ಷಣ ಸಂಸ್ಥೆಗಳ ಹಣದಾಸೆಗೆ ಸಾಕಷ್ಟು ಅಕ್ರಮ ಎಸಗುತ್ತಿವೆ.‌ ಅದಕ್ಕೆ ಸ್ವಷ್ಟ ನಿದರ್ಶನವೆಂಬಂತೆ ರಾಮನಗರದ ಜಿಯಾವುಲ್ಲಾ ಬ್ಲಾಕ್​ನ ಸುಲೆಮಾನ ಹಾಗೂ ಶಬ್ರಿನ್ ತಾಜ್ ಎಂಬುವವರು ತಮ್ಮ ಮಗಳನ್ನ ತಮ್ಮ ಏರಿಯಾದಲ್ಲೇ ಇದ್ದ ನೊಬೆಲ್ ಇಂಗ್ಲಿಷ್ ಶಾಲೆಗೆ ಸೇರಿಸಿದ್ದರು. ಕೇಲವ ಐದನೇ ತರಗತಿವರೆಗೆ ಮಾತ್ರ ಅನುಮತಿಯನ್ನು ಪಡೆದಿರುವ ಶಾಲೆ ಅಕ್ರಮವಾಗಿ ಆರು ಮತ್ತು ಏಳನೇ ತರಗತಿಗಳನ್ನ ನಡೆಸುತ್ತಿರುವುದಾಗಿ ತಮ್ಮ ಮಗಳು ಆರನೇ ತರಗತಿಗೆ ಬಂದ ನಂತರ ಗೊತ್ತಾಗಿದೆ.

ಇದನ್ನೂ ಓದಿ: ರಾಮನಗರದಲ್ಲಿ ನಕಲಿ ಕ್ಲಿನಿಕ್​ಗಳ ಹಾವಳಿ: ನಕಲಿ ವೈದ್ಯನ ಚಿಕಿತ್ಸೆಯಿಂದ 6 ತಿಂಗಳ ಮಗು ಸಾವು

ಇದನ್ನೂ ಓದಿ
Image
ಜುಲೈ 1 ರಿಂದ ಮನೆ ಬಾಗಿಲಿಗೆ ಬರಲಿದೆ ಕರಡು ಇ ಖಾತಾ: ಬಿಬಿಎಂಪಿ ಮಹತ್ವದ ಕ್ರಮ
Image
ಮರುನಾಮಕರಣಗೊಂಡರೂ ಬದಲಾಗಿಲ್ಲ ರಾಮನಗರದ ಸರ್ಕಾರಿ ಕಚೇರಿಗಳ ನಾಮಫಲಕ
Image
ನಕಲಿ ಕ್ಲಿನಿಕ್​ಗಳ ಹಾವಳಿ: ನಕಲಿ ವೈದ್ಯನ ಚಿಕಿತ್ಸೆಯಿಂದ 6 ತಿಂಗಳ ಮಗು ಸಾವು
Image
ಕಲುಷಿತಗೊಂಡ ಅರ್ಕಾವತಿ ನದಿ ಪುನಶ್ಚೇತನಕ್ಕೆ ಸಾರ್ವಜನಿಕರ ಆಗ್ರಹ

ಹೀಗಾಗಿ ಬೇರೆ ಶಾಲೆಗೆ ಸೇರಿಸಲು ಶಾಲೆಯ ಟಿ.ಸಿಯನ್ನ ಕೇಳಿದರೆ ಬೇರೊಂದು ಸರ್ಕಾರಿ ಉರ್ದು ಶಾಲೆಯ ಟಿಸಿ ಕೊಟ್ಟು ಕಳುಹಿಸಿದ್ದಾರೆ. ನಮ್ಮ ಮಗಳು ಐದನೇ ತರಗತಿವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಓದಿದ್ದು ಅದಕ್ಕೆ ಯಾವುದೇ ದಾಖಲೆಗಳನ್ನ ಕೊಟ್ಟಿಲ್ಲವೆಂದು ಶಬ್ರಿನ್ ತಾಜ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ನಗರದ ಗುಡ್ ಹೋಪ್‌ ಎಂಬ ಖಾಸಗಿ ಶಾಲೆ ಸರ್ಕಾರದಿಂದ ಅನುಮತಿಯನ್ನು ಪಡೆಯದೇ ಕಳೆದ ಹಲವು ವರ್ಷದಿಂದ ಶಾಲೆಯನ್ನ ನಡೆಸುತ್ತಿದೆ. ಈ ಶಾಲೆಗೆ ಸೇರಿದ ಪೋಷಕರು ತಮ್ಮ ಮಕ್ಕಳನ್ನ ಬೇರೊಂದು ಶಾಲೆಗೆ ಸೇರಿಸಲು ಆ ಶಾಲೆಯಿಂದ ಆನ್ ಲೈನ್ ಟಿ.ಸಿ ಯನ್ನು ಸಹ ಕೊಟ್ಟಿಲ್ಲ. ಹಣದಾಸೆಗೆ ಸಂಬಂಧಪಟ್ಟ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯದೇ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಪೋಷಕರಾದ ಸಲಿಂ ಪಾಷ ಆರೋಪಿಸಿದ್ದಾರೆ.

ಇದನ್ನೂ ಓದಿ: ಮರುನಾಮಕರಣಗೊಂಡರೂ ಬದಲಾಗಿಲ್ಲ ರಾಮನಗರದ ಸರ್ಕಾರಿ ಕಚೇರಿಗಳ ನಾಮಫಲಕ

ಇನ್ನು ಈ ಬಗ್ಗೆ ಬಿಇಒ ಸೋಮಲಿಂಗಯ್ಯ ಅವರನ್ನ ಕೇಳಿದರೆ, ಈಗಾಗಲೇ ನೊಬಲ್ ಶಾಲೆಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹುಡ್ ಹೋಪ್ ಶಾಲೆಯನ್ನ ಮುಚ್ಚಿಸಲಾಗಿದೆ ಎಂದು ಹೇಳಿದ್ದಾರೆ. ನಕಲಿ ಖಾಸಗಿ ಶಾಲೆಗಳ ಹಣದಾಹಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ಪರದಾಡುವಂತೆ ಆಗಿದೆ. ಈಗಲಾದರೂ ಶಿಕ್ಷಣ ಇಲಾಖೆ ಹಾಗೂ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮವಹಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!