AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮಾಜಿ ಸಂಸದ ಡಿಕೆ ಸುರೇಶ್​ ಪತ್ನಿ ಎಂದು ವಿಡಿಯೋ ಹರಿಬಿಟ್ಟಿದ್ದ ಮಹಿಳೆ ಅರೆಸ್ಟ್​!

ನಾನು ಮಾಜಿ ಸಂಸದ ಡಿಕೆ ಸುರೇಶ್​ ಪತ್ನಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಮೈಸೂರಿನ ಸರ್ಕಾರಿ ಶಾಲಾ ಶಿಕ್ಷಕಿ ವಿರುದ್ಧ ಎಫ್​ಐಆರ್​ ದಾಖಲಾದ ಹಿನ್ನಲೆ ರಾಮನಗರದ ಸೆನ್ ಪೊಲೀಸ್​ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಡಿಕೆ ಸುರೇಶ್ ಪರ ವಕೀಲ ಮಹಿಳೆ ವಿರುದ್ಧ ದೂರು ನೀಡಿದ್ದರು.

ನಾನು ಮಾಜಿ ಸಂಸದ ಡಿಕೆ ಸುರೇಶ್​ ಪತ್ನಿ ಎಂದು ವಿಡಿಯೋ ಹರಿಬಿಟ್ಟಿದ್ದ ಮಹಿಳೆ ಅರೆಸ್ಟ್​!
ಪವಿತ್ರ
ಪ್ರಶಾಂತ್​ ಬಿ.
| Edited By: |

Updated on:May 01, 2025 | 1:58 PM

Share

ರಾಮನಗರ, ಮೇ 01: ಮಾಜಿ ಸಂಸದ ಡಿಕೆ ಸುರೇಶ್​ (DK Suresh) ಪತ್ನಿ ಎಂದು ಹೇಳಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆ ವಿರುದ್ಧ ಇದೀಗ ರಾಮನಗರ (Ramanagara) ಸೆನ್ ಠಾಣೆಯಲ್ಲಿ ಎಫ್ಐಆರ್​​ ದಾಖಲಾಗಿದೆ. ​ಡಿ.ಕೆ.ಸುರೇಶ್ ಪರ ವಕೀಲ ಪ್ರದೀಪ್​​ರಿಂದ ದೂರು ಹಿನ್ನೆಲೆ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದ ಮಹಿಳೆ ಪವಿತ್ರ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಡಿಕೆ ಸುರೇಶ್ ಫೋಟೋದೊಂದಿಗೆ ಮಹಿಳೆ ತನ್ನ ಫೋಟೋವನ್ನು ಎಡಿಟ್ ಮಾಡಿ ಏ.8 ರಂದು ಫೇಸ್ ಬುಕ್, ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಹರಿಬಿಟ್ಟಿದ್ದರು. ಈ ಸಂಬಂಧ ಡಿ.ಕೆ.ಸುರೇಶ್ ವಿರುದ್ಧ ದುರುದ್ದೇಶದಿಂದ ಅಪಪ್ರಚಾರ ಮಾಡಲಾಗುತ್ತಿದೆ ಎಂದು ವಕೀಲ ಪ್ರದೀಪ್​​ ದೂರು ನೀಡಿದ್ದರು.

ಡಿಕೆ ಸುರೇಶ್ ಪರ ವಕೀಲ ನೀಡಿದ ದೂರಿನಲ್ಲೇನಿದೆ?

ಮಹಿಳೆ ಡಿಕೆ ಸುರೇಶ್ ರವರ ಪತ್ನಿ ಎಂಬ ಸೋಗಿನಲ್ಲಿ ಅಪಪ್ರಚಾರ ಮಾಡುತ್ತಿದ್ದು, ಇದರಿಂದ ಸಾರ್ವಜನಿಕವಾಗಿ ತಪ್ಪು ಸಂದೇಶವನ್ನು ಹಬ್ಬಿಸುತ್ತಿದ್ದಾರೆ. ಸುಳ್ಳು ಮಾಹಿತಿಯನ್ನು ನಿಜವೆಂದು ಸಾರ್ವಜನಿಕರು ನಂಬುವಂತೆ ಕೇಡುಬಯಸುವ ದುರುದ್ದೇಶದಿಂದ ವಿಡಿಯೋವನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಳ್ಳಲಾಗಿದೆ. ಆದ್ದರಿಂದ ಮಹಿಳೆ ವಿರುದ್ಧ ಕಲಂ 319, 237, 336, 353 ಬಿ.ಎನ್.ಎಸ್ ಹಾಗೂ 66(ಡಿ) ಐ.ಟಿ ಆಕ್ಟ್ ಅಡಿಯಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ವಕೀಲ ಪ್ರದೀಪ್​​ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ
Image
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
Image
ಎತ್ತಿನಹೊಳೆಗೆ ಅರಣ್ಯ ಇಲಾಖೆಯ ತೊಡಕು ನಿವಾರಣೆ: ಕಾಲುವೆಗೆ ಮುಹೂರ್ತ ಫಿಕ್ಸ್
Image
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
Image
ಮಂಗಳೂರು ಗುಂಪು ಹಲ್ಲೆ ಕೇಸ್​: ಇನ್​​ಸ್ಪೆಕ್ಟರ್ ಸೇರಿ ಮೂವರು ಅಮಾನತು

ಇದನ್ನೂ ಓದಿ: ಮೊಬೈಲ್‌ ಬಿಡಿ, ಪುಸ್ತಕ ಹಿಡಿ: ರಾಮನಗರದ ಶಿಕ್ಷಕರೊಬ್ಬರಿಂದ ವಿನೂತನ ಅಭಿಯಾನ

ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದ ಪವಿತ್ರ, ಮೈಸೂರಿನಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಗಂಡನಿಂದ ವಿಚ್ಛೇದನ ಪಡೆದಿದ್ದ ಮಹಿಳೆ ಸದ್ಯ ಮೈಸೂರಿನಲ್ಲಿ ವಾಸವಿದ್ದಾರೆ. ಮೈಸೂರಿನಲ್ಲಿ ಅಕ್ಕ ಪಕ್ಕದ ಮನೆಯವರಿಂದ ಕಿರಿಕಿರಿ ಹಿನ್ನೆಲೆ ಡಿಕೆ ಸುರೇಶ್ ಪತ್ನಿ ಎಂದರೆ ಜನ ಹೆದರುತ್ತಾರೆ ಎಂಬ ಕಾರಣಕ್ಕೆ ನಾನು ಅವರ ಪತ್ನಿ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದರು. ಸದ್ಯ ಮಹಿಳೆಯನ್ನ ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದಾರೆ.

ವಿಡಿಯೋದಲ್ಲಿ ಮಹಿಳೆ ಹೇಳಿರುವುದೇನು?

ತಾನು ಮೊದಲು ಡಿ.ಕೆ.ಸುರೇಶ್ ರವರ ಹೆಂಡತಿಯಾಗಿ ಹೇಳಬೇಕೆಂದರೆ ನಾನು ಪಸ್ಟ್ ಡಿ.ಕೆ ಸುರೇಶ್ ರವರ ಅಭಿಮಾನಿ. ಯಾಕೆಂದರೆ 3 ಸಾರಿ ಎಂಪಿಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಯಾರು ಮಾಡುವುದಕ್ಕೆ ಆಗುವುದಿಲ್ಲ. ಇಂತವರ ನನ್ನ ಗಂಡ ಎಂದು ಹೇಳಿಕೊಳ್ಳಲು ಖುಷಿ ಪಡುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:48 pm, Thu, 1 May 25

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ