AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಕುಸಿತ ಕಂಡ ರೇಷ್ಮೆ ಗೂಡಿನ ಧಾರಣೆ, ಕಂಗಾಲಾದ ರೇಷ್ಮೆ ಬೆಳೆಗಾರರು

ರೇಷ್ಮೇ ಗೂಡಿನ ಧಾರಣೆ ಏಕಾಏಕಿ ಕುಸಿತವಾಗಿದ್ದು ರೇಷ್ಮೆ ವ್ಯವಸಾಯ ನಂಬಿಕೊಂಡಿದ್ದ ರೈತರಿಗೆ ಭಾರೀ ನಷ್ಟವಾಗಿದೆ. ರಾಮನಗರ ಜಿಲ್ಲೆಯಲ್ಲಿ ರೇಷ್ಮೆ ವ್ಯವಸಾಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಜಿಲ್ಲೆಯ 3 ತಾಲ್ಲೂಕುಗಳಲ್ಲಿ ಪ್ರಮುಖ ರೇಷ್ಮೆ ಬೆಳೆಯು ವಾಣಿಜ್ಯ ಬೆಳೆಯಾಗಿದೆ.

ಏಕಾಏಕಿ ಕುಸಿತ ಕಂಡ ರೇಷ್ಮೆ ಗೂಡಿನ ಧಾರಣೆ, ಕಂಗಾಲಾದ ರೇಷ್ಮೆ ಬೆಳೆಗಾರರು
ರೇಷ್ಮೆ
Follow us
ವಿವೇಕ ಬಿರಾದಾರ
|

Updated on: May 17, 2023 | 11:19 AM

ರಾಮನಗರ: ಸಿಲಿಕಾನ್ ಸಿಟಿ ಬೆಂಗಳೂರಿನ ಪಕ್ಕದಲ್ಲಿರುವ ರಾಮನಗರ (Ramnagar) ಜಿಲ್ಲೆ ರೇಷ್ಮೆ (Silk) ವ್ಯಾಪರಕ್ಕೆ ಬಹಷ್ಟು ಪ್ರಸಿದ್ಧಿ. ರಾಮನಗರ ಮಾರುಕಟ್ಟೆಗೆ ಜಿಲ್ಲೆಯ ಮತ್ತು ಬೇರೆ ಜಿಲ್ಲೆಯ ರೈತರು (Farmers) ಬಂದು ರೇಷ್ಮೆ ವ್ಯಾಪಾರ ಮಾಡುತ್ತಾರೆ. ಇನ್ನು ಜಿಲ್ಲೆಯ ಬಹುತೇಕ ರೈತರು ರೇಷ್ಮೆ ಕೃಷಿ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಇದೀಗ ರೇಷ್ಮೆ ಗೂಡಿನ ಧಾರಣೆ ಏಕಾಏಕಿ ಕುಸಿತ ಕಂಡಿದ್ದು, ರೇಷ್ಮೆ ಬೆಳೆಗಾರರು ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ರೇಷ್ಮೆ ವ್ಯವಸಾಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಜಿಲ್ಲೆಯಲ್ಲಿ ಕನಕಪುರ, ಚನ್ನಪಟ್ಟಣ, ರಾಮನಗರ, ಮಾಗಡಿ 4 ತಾಲ್ಲೂಕುಗಳಿದ್ದು, ಇದರ ಪೈಕಿ 3 ತಾಲ್ಲೂಕುಗಳಲ್ಲಿ ಪ್ರಮುಖ ರೇಷ್ಮೆ ಬೆಳೆಯು ವಾಣಿಜ್ಯ ಬೆಳೆಯಾಗಿದೆ. ರಾಮನಗರ ಮಾತ್ರವಲ್ಲದೆ ಹಾವೇರಿ ಇನ್ನೀತರ ಜಿಲ್ಲೆಗಳಲ್ಲೂ ರೈತರು ರೇಷ್ಮೆ ವ್ಯವಸಾಯವನ್ನು ನಂಬಿಕೊಂಡಿದ್ದಾರೆ.

ಕಳೆದ ಒಂದು ತಿಂಗಳಿಂದ ರೇಷ್ಮೆಗೂಡಿನ ಧಾರಣೆ ಕಡಿಮೆಯಾಗಿದೆ. ಒಂದು ತಿಂಗಳ ಹಿಂದೆ ಬಿಳಿ ರೇಷ್ಮೆ ಗೂಡು ಪ್ರತಿ ಕೆಜಿಗೆ ಸಾವಿರ ರೂ. ಗಡಿ ದಾಟಿತ್ತು. ಆದರೆ ಇದೀಗ ಬಿಳಿಗೂಡು ಪ್ರತಿ ಕೆಜಿ 500 ರೂ. ರಿಂದ 600 ರೂ. ಬಂದಿದೆ. ಇನ್ನು ಹಳದಿ ರೇಷ್ಮೆಗೂಡು ಪ್ರತಿ ಕೆಜಿಗೆ 400 ರೂ. ವರೆಗೂ ಕಡಿಮೆ ಆಗಿದೆ. ಹೀಗಾಗಿ ರೇಷ್ಮೆ ಗೂಡನ್ನು ನಂಬಿ ಬದುಕು ಕಟ್ಟಿಕೊಂಡಿರುವ ರೈತರಿಗೆ ಸಾಕಷ್ಟು ತೊಂದರೆ ಆಗುತ್ತಿದೆ.

ಇದನ್ನೂ ಓದಿ: ತುಂಗಾ ಮೆಲ್ದಂಡೆ ಯೋಜನೆಯಡಿಯಲ್ಲಿ ಕಾಲುವೆ ನಿರ್ಮಾಣ; ಅಸಮರ್ಪಕ ನಿರ್ವಹಣೆಯಿಂದ ಬರದ ನೀರು, ರೈತರು ಕಂಗಾಲು

ಅಂದಹಾಗೆ ರಾಮನಗರದ ಸರ್ಕಾರಿ ರೇಷ್ಮೆ ಮಾರುಕಟ್ಟೆ, ದೇಶದಲ್ಲಿಯೇ ದೊಡ್ಡದಾದ ಮಾರುಕಟ್ಟೆ. ರಾಮನಗರ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಯ ರೈತರು ಹಾಗೂ ಹೊರ ರಾಜ್ಯದ ರೈತರು ಇಲ್ಲಿಗೆ ರೇಷ್ಮೆ ಗೂಡು ತಂದು ಮಾರುತ್ತಾರೆ. 45 ರಿಂದ 50 ಟನ್ ಗೂಡು ಪ್ರತಿನಿತ್ಯ ವಹಿವಾಟು ನಡೆಯುತ್ತದೆ. ಪ್ರತಿದಿನ ಕೋಟ್ಯಾಂತರ ರೂ. ವಹಿವಾಟು ನಡೆಯುತ್ತದೆ. ಇಲ್ಲಿ ಉತ್ತಮ ಬೆಲೆ ಸಿಗುತ್ತದೆ, ಎಂಬ ಕಾರಣಕ್ಕೆ ದೂರದ ಊರುಗಳಿಂದ ತಂದು ಮಾರಾಟ ಮಾಡುತ್ತಾರೆ.

ಆದರೆ ಕಳೆದ ಒಂದು ತಿಂಗಳಿಂದ ಉತ್ತಮ ಬೆಲೆ ಸಿಗುತ್ತಿಲ್ಲ. ಇನ್ನು ಏಕಾಏಕಿ ಕುಸಿತಕ್ಕೆ ಒಂದೆಡೆ ರಾಜ್ಯ ವಿಧಾನಸಭಾ ಚುನಾವಣೆಯ ಎಫೆಕ್ಟ್ ಕಾರಣವಾದರೇ, ಮತ್ತೊಂದಡೆ ಕೆಎಎಸ್​ಐಸಿ ದ್ವಿತಳಿ ಗೂಡು ವ್ಯಪಾರ ಕೂಡ ನಿಂತಿದೆ. ಜೊತೆಗೆ ರೇಷ್ಮೆ ನೂಲಿನ ಬೆಲೆ ಕೂಡ ಕಡಿಮೆ ಆಗಿದ್ದು, ರೈತರಿಗೆ ಉತ್ತಮ ಬೆಲೆ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಒಟ್ಟಾರೆ ರೇಷ್ಮೆಗೂಡಿನ ಬೆಲೆ ಕಳೆದ ಒಂದು ತಿಂಗಳಿಂದ ಕುಸಿತ ಕಂಡಿರುವುದು ರೇಷ್ಮೆ ಬೆಳೆಗಾರರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ