AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಕುಸಿತ ಕಂಡ ರೇಷ್ಮೆ ಗೂಡಿನ ಧಾರಣೆ, ಕಂಗಾಲಾದ ರೇಷ್ಮೆ ಬೆಳೆಗಾರರು

ರೇಷ್ಮೇ ಗೂಡಿನ ಧಾರಣೆ ಏಕಾಏಕಿ ಕುಸಿತವಾಗಿದ್ದು ರೇಷ್ಮೆ ವ್ಯವಸಾಯ ನಂಬಿಕೊಂಡಿದ್ದ ರೈತರಿಗೆ ಭಾರೀ ನಷ್ಟವಾಗಿದೆ. ರಾಮನಗರ ಜಿಲ್ಲೆಯಲ್ಲಿ ರೇಷ್ಮೆ ವ್ಯವಸಾಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಜಿಲ್ಲೆಯ 3 ತಾಲ್ಲೂಕುಗಳಲ್ಲಿ ಪ್ರಮುಖ ರೇಷ್ಮೆ ಬೆಳೆಯು ವಾಣಿಜ್ಯ ಬೆಳೆಯಾಗಿದೆ.

ಏಕಾಏಕಿ ಕುಸಿತ ಕಂಡ ರೇಷ್ಮೆ ಗೂಡಿನ ಧಾರಣೆ, ಕಂಗಾಲಾದ ರೇಷ್ಮೆ ಬೆಳೆಗಾರರು
ರೇಷ್ಮೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: May 17, 2023 | 11:19 AM

Share

ರಾಮನಗರ: ಸಿಲಿಕಾನ್ ಸಿಟಿ ಬೆಂಗಳೂರಿನ ಪಕ್ಕದಲ್ಲಿರುವ ರಾಮನಗರ (Ramnagar) ಜಿಲ್ಲೆ ರೇಷ್ಮೆ (Silk) ವ್ಯಾಪರಕ್ಕೆ ಬಹಷ್ಟು ಪ್ರಸಿದ್ಧಿ. ರಾಮನಗರ ಮಾರುಕಟ್ಟೆಗೆ ಜಿಲ್ಲೆಯ ಮತ್ತು ಬೇರೆ ಜಿಲ್ಲೆಯ ರೈತರು (Farmers) ಬಂದು ರೇಷ್ಮೆ ವ್ಯಾಪಾರ ಮಾಡುತ್ತಾರೆ. ಇನ್ನು ಜಿಲ್ಲೆಯ ಬಹುತೇಕ ರೈತರು ರೇಷ್ಮೆ ಕೃಷಿ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಇದೀಗ ರೇಷ್ಮೆ ಗೂಡಿನ ಧಾರಣೆ ಏಕಾಏಕಿ ಕುಸಿತ ಕಂಡಿದ್ದು, ರೇಷ್ಮೆ ಬೆಳೆಗಾರರು ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ರೇಷ್ಮೆ ವ್ಯವಸಾಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಜಿಲ್ಲೆಯಲ್ಲಿ ಕನಕಪುರ, ಚನ್ನಪಟ್ಟಣ, ರಾಮನಗರ, ಮಾಗಡಿ 4 ತಾಲ್ಲೂಕುಗಳಿದ್ದು, ಇದರ ಪೈಕಿ 3 ತಾಲ್ಲೂಕುಗಳಲ್ಲಿ ಪ್ರಮುಖ ರೇಷ್ಮೆ ಬೆಳೆಯು ವಾಣಿಜ್ಯ ಬೆಳೆಯಾಗಿದೆ. ರಾಮನಗರ ಮಾತ್ರವಲ್ಲದೆ ಹಾವೇರಿ ಇನ್ನೀತರ ಜಿಲ್ಲೆಗಳಲ್ಲೂ ರೈತರು ರೇಷ್ಮೆ ವ್ಯವಸಾಯವನ್ನು ನಂಬಿಕೊಂಡಿದ್ದಾರೆ.

ಕಳೆದ ಒಂದು ತಿಂಗಳಿಂದ ರೇಷ್ಮೆಗೂಡಿನ ಧಾರಣೆ ಕಡಿಮೆಯಾಗಿದೆ. ಒಂದು ತಿಂಗಳ ಹಿಂದೆ ಬಿಳಿ ರೇಷ್ಮೆ ಗೂಡು ಪ್ರತಿ ಕೆಜಿಗೆ ಸಾವಿರ ರೂ. ಗಡಿ ದಾಟಿತ್ತು. ಆದರೆ ಇದೀಗ ಬಿಳಿಗೂಡು ಪ್ರತಿ ಕೆಜಿ 500 ರೂ. ರಿಂದ 600 ರೂ. ಬಂದಿದೆ. ಇನ್ನು ಹಳದಿ ರೇಷ್ಮೆಗೂಡು ಪ್ರತಿ ಕೆಜಿಗೆ 400 ರೂ. ವರೆಗೂ ಕಡಿಮೆ ಆಗಿದೆ. ಹೀಗಾಗಿ ರೇಷ್ಮೆ ಗೂಡನ್ನು ನಂಬಿ ಬದುಕು ಕಟ್ಟಿಕೊಂಡಿರುವ ರೈತರಿಗೆ ಸಾಕಷ್ಟು ತೊಂದರೆ ಆಗುತ್ತಿದೆ.

ಇದನ್ನೂ ಓದಿ: ತುಂಗಾ ಮೆಲ್ದಂಡೆ ಯೋಜನೆಯಡಿಯಲ್ಲಿ ಕಾಲುವೆ ನಿರ್ಮಾಣ; ಅಸಮರ್ಪಕ ನಿರ್ವಹಣೆಯಿಂದ ಬರದ ನೀರು, ರೈತರು ಕಂಗಾಲು

ಅಂದಹಾಗೆ ರಾಮನಗರದ ಸರ್ಕಾರಿ ರೇಷ್ಮೆ ಮಾರುಕಟ್ಟೆ, ದೇಶದಲ್ಲಿಯೇ ದೊಡ್ಡದಾದ ಮಾರುಕಟ್ಟೆ. ರಾಮನಗರ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಯ ರೈತರು ಹಾಗೂ ಹೊರ ರಾಜ್ಯದ ರೈತರು ಇಲ್ಲಿಗೆ ರೇಷ್ಮೆ ಗೂಡು ತಂದು ಮಾರುತ್ತಾರೆ. 45 ರಿಂದ 50 ಟನ್ ಗೂಡು ಪ್ರತಿನಿತ್ಯ ವಹಿವಾಟು ನಡೆಯುತ್ತದೆ. ಪ್ರತಿದಿನ ಕೋಟ್ಯಾಂತರ ರೂ. ವಹಿವಾಟು ನಡೆಯುತ್ತದೆ. ಇಲ್ಲಿ ಉತ್ತಮ ಬೆಲೆ ಸಿಗುತ್ತದೆ, ಎಂಬ ಕಾರಣಕ್ಕೆ ದೂರದ ಊರುಗಳಿಂದ ತಂದು ಮಾರಾಟ ಮಾಡುತ್ತಾರೆ.

ಆದರೆ ಕಳೆದ ಒಂದು ತಿಂಗಳಿಂದ ಉತ್ತಮ ಬೆಲೆ ಸಿಗುತ್ತಿಲ್ಲ. ಇನ್ನು ಏಕಾಏಕಿ ಕುಸಿತಕ್ಕೆ ಒಂದೆಡೆ ರಾಜ್ಯ ವಿಧಾನಸಭಾ ಚುನಾವಣೆಯ ಎಫೆಕ್ಟ್ ಕಾರಣವಾದರೇ, ಮತ್ತೊಂದಡೆ ಕೆಎಎಸ್​ಐಸಿ ದ್ವಿತಳಿ ಗೂಡು ವ್ಯಪಾರ ಕೂಡ ನಿಂತಿದೆ. ಜೊತೆಗೆ ರೇಷ್ಮೆ ನೂಲಿನ ಬೆಲೆ ಕೂಡ ಕಡಿಮೆ ಆಗಿದ್ದು, ರೈತರಿಗೆ ಉತ್ತಮ ಬೆಲೆ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಒಟ್ಟಾರೆ ರೇಷ್ಮೆಗೂಡಿನ ಬೆಲೆ ಕಳೆದ ಒಂದು ತಿಂಗಳಿಂದ ಕುಸಿತ ಕಂಡಿರುವುದು ರೇಷ್ಮೆ ಬೆಳೆಗಾರರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ