AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಕುಸಿತ ಕಂಡ ರೇಷ್ಮೆ ಗೂಡಿನ ಧಾರಣೆ, ಕಂಗಾಲಾದ ರೇಷ್ಮೆ ಬೆಳೆಗಾರರು

ರೇಷ್ಮೇ ಗೂಡಿನ ಧಾರಣೆ ಏಕಾಏಕಿ ಕುಸಿತವಾಗಿದ್ದು ರೇಷ್ಮೆ ವ್ಯವಸಾಯ ನಂಬಿಕೊಂಡಿದ್ದ ರೈತರಿಗೆ ಭಾರೀ ನಷ್ಟವಾಗಿದೆ. ರಾಮನಗರ ಜಿಲ್ಲೆಯಲ್ಲಿ ರೇಷ್ಮೆ ವ್ಯವಸಾಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಜಿಲ್ಲೆಯ 3 ತಾಲ್ಲೂಕುಗಳಲ್ಲಿ ಪ್ರಮುಖ ರೇಷ್ಮೆ ಬೆಳೆಯು ವಾಣಿಜ್ಯ ಬೆಳೆಯಾಗಿದೆ.

ಏಕಾಏಕಿ ಕುಸಿತ ಕಂಡ ರೇಷ್ಮೆ ಗೂಡಿನ ಧಾರಣೆ, ಕಂಗಾಲಾದ ರೇಷ್ಮೆ ಬೆಳೆಗಾರರು
ರೇಷ್ಮೆ
ವಿವೇಕ ಬಿರಾದಾರ
|

Updated on: May 17, 2023 | 11:19 AM

Share

ರಾಮನಗರ: ಸಿಲಿಕಾನ್ ಸಿಟಿ ಬೆಂಗಳೂರಿನ ಪಕ್ಕದಲ್ಲಿರುವ ರಾಮನಗರ (Ramnagar) ಜಿಲ್ಲೆ ರೇಷ್ಮೆ (Silk) ವ್ಯಾಪರಕ್ಕೆ ಬಹಷ್ಟು ಪ್ರಸಿದ್ಧಿ. ರಾಮನಗರ ಮಾರುಕಟ್ಟೆಗೆ ಜಿಲ್ಲೆಯ ಮತ್ತು ಬೇರೆ ಜಿಲ್ಲೆಯ ರೈತರು (Farmers) ಬಂದು ರೇಷ್ಮೆ ವ್ಯಾಪಾರ ಮಾಡುತ್ತಾರೆ. ಇನ್ನು ಜಿಲ್ಲೆಯ ಬಹುತೇಕ ರೈತರು ರೇಷ್ಮೆ ಕೃಷಿ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಇದೀಗ ರೇಷ್ಮೆ ಗೂಡಿನ ಧಾರಣೆ ಏಕಾಏಕಿ ಕುಸಿತ ಕಂಡಿದ್ದು, ರೇಷ್ಮೆ ಬೆಳೆಗಾರರು ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ರೇಷ್ಮೆ ವ್ಯವಸಾಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಜಿಲ್ಲೆಯಲ್ಲಿ ಕನಕಪುರ, ಚನ್ನಪಟ್ಟಣ, ರಾಮನಗರ, ಮಾಗಡಿ 4 ತಾಲ್ಲೂಕುಗಳಿದ್ದು, ಇದರ ಪೈಕಿ 3 ತಾಲ್ಲೂಕುಗಳಲ್ಲಿ ಪ್ರಮುಖ ರೇಷ್ಮೆ ಬೆಳೆಯು ವಾಣಿಜ್ಯ ಬೆಳೆಯಾಗಿದೆ. ರಾಮನಗರ ಮಾತ್ರವಲ್ಲದೆ ಹಾವೇರಿ ಇನ್ನೀತರ ಜಿಲ್ಲೆಗಳಲ್ಲೂ ರೈತರು ರೇಷ್ಮೆ ವ್ಯವಸಾಯವನ್ನು ನಂಬಿಕೊಂಡಿದ್ದಾರೆ.

ಕಳೆದ ಒಂದು ತಿಂಗಳಿಂದ ರೇಷ್ಮೆಗೂಡಿನ ಧಾರಣೆ ಕಡಿಮೆಯಾಗಿದೆ. ಒಂದು ತಿಂಗಳ ಹಿಂದೆ ಬಿಳಿ ರೇಷ್ಮೆ ಗೂಡು ಪ್ರತಿ ಕೆಜಿಗೆ ಸಾವಿರ ರೂ. ಗಡಿ ದಾಟಿತ್ತು. ಆದರೆ ಇದೀಗ ಬಿಳಿಗೂಡು ಪ್ರತಿ ಕೆಜಿ 500 ರೂ. ರಿಂದ 600 ರೂ. ಬಂದಿದೆ. ಇನ್ನು ಹಳದಿ ರೇಷ್ಮೆಗೂಡು ಪ್ರತಿ ಕೆಜಿಗೆ 400 ರೂ. ವರೆಗೂ ಕಡಿಮೆ ಆಗಿದೆ. ಹೀಗಾಗಿ ರೇಷ್ಮೆ ಗೂಡನ್ನು ನಂಬಿ ಬದುಕು ಕಟ್ಟಿಕೊಂಡಿರುವ ರೈತರಿಗೆ ಸಾಕಷ್ಟು ತೊಂದರೆ ಆಗುತ್ತಿದೆ.

ಇದನ್ನೂ ಓದಿ: ತುಂಗಾ ಮೆಲ್ದಂಡೆ ಯೋಜನೆಯಡಿಯಲ್ಲಿ ಕಾಲುವೆ ನಿರ್ಮಾಣ; ಅಸಮರ್ಪಕ ನಿರ್ವಹಣೆಯಿಂದ ಬರದ ನೀರು, ರೈತರು ಕಂಗಾಲು

ಅಂದಹಾಗೆ ರಾಮನಗರದ ಸರ್ಕಾರಿ ರೇಷ್ಮೆ ಮಾರುಕಟ್ಟೆ, ದೇಶದಲ್ಲಿಯೇ ದೊಡ್ಡದಾದ ಮಾರುಕಟ್ಟೆ. ರಾಮನಗರ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಯ ರೈತರು ಹಾಗೂ ಹೊರ ರಾಜ್ಯದ ರೈತರು ಇಲ್ಲಿಗೆ ರೇಷ್ಮೆ ಗೂಡು ತಂದು ಮಾರುತ್ತಾರೆ. 45 ರಿಂದ 50 ಟನ್ ಗೂಡು ಪ್ರತಿನಿತ್ಯ ವಹಿವಾಟು ನಡೆಯುತ್ತದೆ. ಪ್ರತಿದಿನ ಕೋಟ್ಯಾಂತರ ರೂ. ವಹಿವಾಟು ನಡೆಯುತ್ತದೆ. ಇಲ್ಲಿ ಉತ್ತಮ ಬೆಲೆ ಸಿಗುತ್ತದೆ, ಎಂಬ ಕಾರಣಕ್ಕೆ ದೂರದ ಊರುಗಳಿಂದ ತಂದು ಮಾರಾಟ ಮಾಡುತ್ತಾರೆ.

ಆದರೆ ಕಳೆದ ಒಂದು ತಿಂಗಳಿಂದ ಉತ್ತಮ ಬೆಲೆ ಸಿಗುತ್ತಿಲ್ಲ. ಇನ್ನು ಏಕಾಏಕಿ ಕುಸಿತಕ್ಕೆ ಒಂದೆಡೆ ರಾಜ್ಯ ವಿಧಾನಸಭಾ ಚುನಾವಣೆಯ ಎಫೆಕ್ಟ್ ಕಾರಣವಾದರೇ, ಮತ್ತೊಂದಡೆ ಕೆಎಎಸ್​ಐಸಿ ದ್ವಿತಳಿ ಗೂಡು ವ್ಯಪಾರ ಕೂಡ ನಿಂತಿದೆ. ಜೊತೆಗೆ ರೇಷ್ಮೆ ನೂಲಿನ ಬೆಲೆ ಕೂಡ ಕಡಿಮೆ ಆಗಿದ್ದು, ರೈತರಿಗೆ ಉತ್ತಮ ಬೆಲೆ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಒಟ್ಟಾರೆ ರೇಷ್ಮೆಗೂಡಿನ ಬೆಲೆ ಕಳೆದ ಒಂದು ತಿಂಗಳಿಂದ ಕುಸಿತ ಕಂಡಿರುವುದು ರೇಷ್ಮೆ ಬೆಳೆಗಾರರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು