AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ 7 ವರ್ಷದಲ್ಲಿ ಕಾಡಾನೆ ದಾಳಿಗೆ 38ಕ್ಕೂ ಹೆಚ್ಚು ಜನರು ಬಲಿ: ಸದನದಲ್ಲಿ ಪ್ರಸ್ತಾಪಿಸಿದ ರವಿ

ವಿಧಾನ ಪರಿಷತ್​ನಲ್ಲಿ ಗಮನ ಸೆಳೆಯುವ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯ ಎಸ್.ರವಿ(S Ravi) ‘ ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ವರ್ಷಗಳಿಂದ ಇದುವರೆಗೂ  ಕಾಡಾನೆ ಹಾವಳಿಯಿಂದ(Wild elephant) 38ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ ಎಂದು  ಹೇಳಿದರು. ಇದಕ್ಕೆ ಉತ್ತರಿಸಿದ ಅರಣ್ಯ ಸಚಿವ ಈಶ್ವರ್​ ಖಂಡ್ರೆ, ‘ ಈ ವರ್ಷ ಪ್ರಾಣಿ ದಾಳಿಯಿಂದ 55 ಮಂದಿ ಸಾವನ್ನಪ್ಪಿದ್ದಾರೆ. ಆನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬರದಂತೆ ಏನು ಕ್ರಮ ಕೈಗೊಳ್ಳಬೇಕೆಂದು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದರು.

ರಾಮನಗರದಲ್ಲಿ 7 ವರ್ಷದಲ್ಲಿ ಕಾಡಾನೆ ದಾಳಿಗೆ 38ಕ್ಕೂ ಹೆಚ್ಚು ಜನರು ಬಲಿ: ಸದನದಲ್ಲಿ ಪ್ರಸ್ತಾಪಿಸಿದ ರವಿ
ಎಸ್​ ರವಿ
TV9 Web
| Edited By: |

Updated on: Feb 13, 2024 | 7:46 PM

Share

ರಾಮನಗರ, ಫೆ.13: ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ವರ್ಷಗಳಿಂದ ಇದುವರೆಗೂ  ಕಾಡಾನೆ ಹಾವಳಿಯಿಂದ(Wild elephant) 38ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ ಎಂದು ಕಾಂಗ್ರೆಸ್ ಸದಸ್ಯ ಎಸ್.ರವಿ(S Ravi) ಹೇಳಿದರು. ವಿಧಾನ ಪರಿಷತ್​ನಲ್ಲಿ ಮಾತನಾಡಿದ ಅವರು, ‘ಇದುವರೆಗೆ ಕಾಡಾನೆ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕೃಷಿ ಕೆಲಸಕ್ಕೆ ಹೋದ ರೈತರು ಮನೆಗೆ ಹಿಂದಿರುಗುವ ನಂಬಿಕೆಯಿಲ್ಲ. ಪ್ರತಿನಿತ್ಯ ಕಾಡಾನೆ ಸಮಸ್ಯೆ ಹೆಚ್ಚಳವಾಗುತ್ತಿದೆ. ಭೀತಿಯಿಂದ ಅದೆಷ್ಟೋ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಈ ಹಿನ್ನಲೆ ಕಾಡಾನೆ ನಿಯಂತ್ರಿಸುವಂತೆ ಜನರು ನಮಗೆ ಒತ್ತಾಯ ಮಾಡುತ್ತಿದ್ದಾರೆ ಎಂದರು.

ಈ ವರ್ಷ ಪ್ರಾಣಿ ದಾಳಿಯಿಂದ 55 ಮಂದಿ ಸಾವು-ಈಶ್ವರ್​ ಖಂಡ್ರೆ

ಇದಕ್ಕೆ ಉತ್ತರಿಸಿದ ಅರಣ್ಯ ಸಚಿವ ಈಶ್ವರ್​ ಖಂಡ್ರೆ, ‘ ಈ ವರ್ಷ ಪ್ರಾಣಿ ದಾಳಿಯಿಂದ 55 ಮಂದಿ ಸಾವನ್ನಪ್ಪಿದ್ದಾರೆ. ಬನ್ನೇರುಘಟ್ಟ ಅರಣ್ಯ ವ್ಯಾಪ್ತಿಯಿಂದ ಆನೆಗಳು ರಾಮನಗರ, ಕನಕಪುರ ಭಾಗಕ್ಕೆ ಬರುತ್ತಿದ್ದಾವೆ. ಆನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬರದಂತೆ ಏನು ಕ್ರಮ ಕೈಗೊಳ್ಳಬೇಕೆಂದು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದರು.

ರಾಮನಗರ ಹಾಗೂ ಬನ್ನೇರುಘಟ್ಟದಲ್ಲಿ ಎರಡು ಆನೆ ಕಾರ್ಯಪಡೆ

ಇದನ್ನೂ ಓದಿ:ಕನಕಪುರ: ತೋಟಕ್ಕೆ ಹೋಗುತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ

‘ಕಂದಕ ನಿರ್ಮಾಣ, ವಿದ್ಯುತ್ ತಂತಿ ಬೇಲಿ, ರೈಲ್ವೆ ಬ್ಯಾರಿಕೇಡ್ ಮಾಡುವ ಕೆಲಸ ಮಾಡುತ್ತಿದ್ದೇವೆ. ಜೊತೆಗೆ ಆನೆ ಕ್ಯಾಂಪ್ ಮಾಡುವ ಪ್ರಸ್ತಾವನೆ ಮಾಡಿದ್ದಾರೆ. ಅದನ್ನ ಪರಿಶೀಲನೆ ಮಾಡುತ್ತೇವೆ. ಮಾನವ – ಪ್ರಾಣಿ ಸಂಘರ್ಷ ತಡೆಯಲು ನಾವು ಎಲ್ಲ ರೀತಿಯ ಕ್ರಮ ಕೈಗೊಂಡಿದ್ದು, ರಾಮನಗರ ಹಾಗೂ ಬನ್ನೇರುಘಟ್ಟದಲ್ಲಿ ಎರಡು ಆನೆ ಕಾರ್ಯಪಡೆ ಮಾಡಿದ್ದೇವೆ ಎಂದು ಉತ್ತರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್