AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಆಳ, ಆಗಲ ಮತ್ತು ಉದ್ದವನ್ನು ನೋಡಿಕೊಳ್ಳಬೇಕು: ಅಶ್ವತ್ಥನಾರಾಯಣ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಅವರು ಮಾತನಾಡಬೇಕು. ಆರೋಪಿ ಶಾಂತಕುಮಾರ್ ಮೊದಲು ಕಾಂಗ್ರೆಸ್​ನಲ್ಲಿಯೇ ಇದ್ದರು ಎಂದು ಅಶ್ವತ್ಥ ನಾರಾಯಣ ಹೇಳಿದರು.

ಸಿದ್ದರಾಮಯ್ಯ ಆಳ, ಆಗಲ ಮತ್ತು ಉದ್ದವನ್ನು ನೋಡಿಕೊಳ್ಳಬೇಕು: ಅಶ್ವತ್ಥನಾರಾಯಣ ವಾಗ್ದಾಳಿ
ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
TV9 Web
| Edited By: |

Updated on:Jul 14, 2022 | 2:23 PM

Share

ರಾಮನಗರ: ಕರ್ನಾಟಕದಲ್ಲಿ 545 ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ (PSI Recruitment Scam) ಕುರಿತು ಪ್ರತಿಕ್ರಿಯಿಸಿರುವ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಮೊದಲು ಸಿದ್ದರಾಮಯ್ಯ ಅವರು ಆಳ, ಆಗಲ ಮತ್ತು ಉದ್ದವನ್ನು ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಅವರು ಮಾತನಾಡಬೇಕು. ಆರೋಪಿ ಶಾಂತಕುಮಾರ್ ಮೊದಲು ಕಾಂಗ್ರೆಸ್​ನಲ್ಲಿಯೇ ಇದ್ದರು. ಈ ವಿಚಾರದ ಬಗ್ಗೆಯೂ ಸಿದ್ದರಾಮಯ್ಯ ಮುಕ್ತವಾಗಿ ಮಾತನಾಡಬೇಕು ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದಾಗ ಯಾವೆಲ್ಲಾ ರೀತಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಬಗ್ಗೆಯೂ ಅವರು ಮಾತನಾಡಬೇಕಿದೆ. ಅವರ ಕಾಲದ ಹಗರಣಗಳನ್ನು ಮುಚ್ಚಿ ಹಾಕಿಕೊಂಡರು. ಇಡೀ ಲೋಕಕ್ಕೆ ಗೊತ್ತಿರುವ ಸತ್ಯವನ್ನ ನಾನು ಹೇಳುತ್ತಿದ್ದೇನೆ. ಈ ಹಿಂದೆ ಆಗಿರುವ ಅಕ್ರಮದ ಬಗ್ಗೆಯೂ ತನಿಖೆ ಆಗಬೇಕು. ‘ಹ್ಯೂಬ್ಲೆಟ್’ ಸಿದ್ದರಾಮಯ್ಯನವರು ಎಂದಿಗೂ ಬಡವರ ಪರ ಇರಲಿಲ್ಲ. ಅವರು ಹೇಳುವುದು ಬಡವರ ಪರ, ಮಾಡುವುದೆಲ್ಲ ಮೋಜು ಮಸ್ತಿ ಎಂದು ವಿವರಿಸಿದರು.

ಸಿದ್ದರಾಮಯ್ಯ ಕಾಲದಲ್ಲಿ ಯಾವೆಲ್ಲ ರೀತಿಯಲ್ಲಿ ರೀತಿಯಲ್ಲಿ ಅವ್ಯವಹಾರ ಆಗಿದೆ ಎನ್ನುವ ಬಗ್ಗೆಯೂ ಅವರು ಮಾತನಾಡಬೇಕು. ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದಿದ್ದರು. ಮುಖ್ಯಮಂತ್ರಿ ಆಗಿ ನಿವೃತ್ತಿ ಆಗುತ್ತೇನೆ ಎಂದಿದ್ದರು. ಸಿದ್ದರಾಮಯ್ಯ ಕಾಲದಲ್ಲಿ ಹಗರಣವನ್ನು ಮುಚ್ಚಿ ಹಾಕಿಕೊಂಡರು. ಲೋಕಕ್ಕೆ ಗೊತ್ತಿರುವ ಸತ್ಯವನ್ನು ಹೇಳುತ್ತಿದ್ದೇನೆ. ಅವರು ಮಾಡಿರುವ ಆಕ್ರಮ ಲೋಕಕ್ಕೆ ಗೊತ್ತಿದೆ. ಹಿಂದೆ ಆಗಿರುವ ಆಕ್ರಮದ ಬಗ್ಗೆ ತನಿಖೆ ಆಗಬೇಕು. ನಾನು ಕೂಡ ಒತ್ತಾಯ ಮಾಡುತ್ತೇನೆ. ಸಿದ್ದರಾಮಯ್ಯ ಕಾಲದಲ್ಲಿ ಆಗಿರುವ ಪಿಎಸ್​ಐ ಹಗರಣದ ತನಿಖೆ ನಡೆಯಬೇಕು ಎಂದು ದೂರಿದರು.

ದಾವಣಗೆರೆಯಲ್ಲಿ ಕಾಂಗ್ರೆಸ್​​ನಿಂದ ಸಿದ್ದರಾಮೋತ್ಸವ ಆಯೋಜಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅಂಥ ಕಾರ್ಯಕ್ರಮಗಳಿಂದ ನಮಗೆ ಆತಂಕ ಇಲ್ಲ. ಆದರೆ ಕಾಂಗ್ರೆಸ್ ಪಕ್ಷದೊಳಗೆ ಆತಂಕ ಇದೆ. ಕಾಂಗ್ರೆಸ್ ಪಕ್ಷದ ನಾಯಕರಲ್ಲೇ ಪೈಪೋಟಿ ಶುರುವಾಗಿದೆ. ವ್ಯಕ್ತಿಯ ಕಾರ್ಯಕ್ರಮ ಮಾಡಬೇಕೇ, ಬೇಡವೇ ಎನ್ನುವ ಗೊಂದಲ ಆರಂಭವಾಗಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ನೆಲೆ‌ ಕಳೆದುಕೊಂಡಿದೆ. ಯಾರು ಯಾವ ಉತ್ಸವ ಬೇಕಾದರೂ ಮಾಡಿಕೊಳ್ಳಲಿ. ರಾಜ್ಯದಲ್ಲಿ ಕಾಂಗ್ರೆಸ್​ಗೆ ನೆಲೆ ಸಿಗುವುದಿಲ್ಲ ಎಂದು ವ್ಯಂಗ್ಯವಾಡಿದರು.

ಇಡೀ ದೇಶದಲ್ಲಿ ಕಾಂಗ್ರೆಸ್ ನೆಲೆ‌ ಕಳೆದುಕೊಂಡಿದೆ. ಭವಿಷ್ಯವಿಲ್ಲದ ಕಾಂಗ್ರೆಸ್ ಪಕ್ಷವು ಮುಳುಗುವ ಹಡಗಿನಂತೆ ಆಗಿದೆ. ಯಾರು ಯಾವ ಉತ್ಸವ ಬೇಕಾದರೂ ಮಾಡಿಕೊಳ್ಳಲಿ ಎಂದು ಸವಾಲು ಹಾಕಿದರು.

Published On - 2:23 pm, Thu, 14 July 22

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು