AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗ್ನಲ್ ಜಂಪ್: ಕ್ಷಮೆಯಾಚಿಸಿದ ಮಾಲೀಕ,ಕೋಟ್ಯಾಧೀಶ್ವರನ ಸೌಮ್ಯತೆ ಕಂಡು ಬಿಟ್ಟು ಕಳುಹಿಸಿದ ಪೊಲೀಸ್

ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಕೆಲವರು ಬೇಕಂತಲೇ ರಸ್ತೆ ಸಂಚಾರ ನಿಯಮ ಉಲ್ಲಂಘಿಸುತ್ತಾರೆ. ಇನ್ನು ಬಗ್ಗೆ ಪೊಲೀಸರು ಪ್ರಶ್ನಿಸಿದರೆ ಅವರಿಗೆ ಅವಾಜ್ ಹಾಕಿ ಓಡಿ ಹೋಗಿರುವ ಉದಾಹರಣೆಗಳು ಇವೆ. ಇದರ ಮಧ್ಯೆ ಕೋಟ್ಯಾಧೀಶರೊಬ್ಬರು ಜಸ್ಟ್ ಜೀಬ್ರಾ ಲೈನ್ ಕ್ರಾಸ್ ಆಗಿದ್ದಕ್ಕೆ ಕಾರಿನಿಂದ ಇಳಿದುಬಂದು ಪೊಲೀಸ್​ ಬಳಿ ಕ್ಷಮೆಯಾಚಿಸಿದ್ದಾರೆ. ಏನಿದು ಘಟನೆ? ಎಲ್ಲಿ ನಡೆದಿದ್ದು ಎನ್ನುವ ವಿವರ ಇಲ್ಲಿದೆ.

ಸಿಗ್ನಲ್ ಜಂಪ್: ಕ್ಷಮೆಯಾಚಿಸಿದ ಮಾಲೀಕ,ಕೋಟ್ಯಾಧೀಶ್ವರನ ಸೌಮ್ಯತೆ ಕಂಡು ಬಿಟ್ಟು ಕಳುಹಿಸಿದ ಪೊಲೀಸ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Jan 10, 2024 | 10:09 PM

Share

ರಾಮನಗರ, (ಜನವರಿ 10): ಕೆಲವರಿಗೆ ಶ್ರೀಮಂತಿಕೆಯ ಅಹಂಕಾರ, ದಿಮಾಕು ಇರುತ್ತೆ. ಕೋಟ್ಯಾಧೀಶರ ಜೀವನ ಸ್ಟೈಲೇ ಹಾಗೇ. ಕೆಲವರಿಗೆ ಮುಂದಿರುವ ದಾರಿಯೇ ಕಾಣುವುದಿಲ್ಲ. ಆ ರೀತಿಯ ಶ್ರೀಮಂತಿಕೆಯ ಅಹಂ ಅವರಲ್ಲಿರುತ್ತೆ. ಇದರ ಮಧ್ಯೆ ಇಲ್ಲೋರ್ವ ಕೋಟ್ಯಾಧೀಶ ವ್ಯಕ್ತಿ, ಜಸ್ಟ್ ಜೀಬ್ರಾ ಲೈನ್ ಕ್ರಾಸ್  (Traffic Rules) ಮಾಡಿದ್ದಕ್ಕೆ ಕಾರಿನಿಂದ ಇಳಿದುಬಂದು ಟ್ರಾಫಿಕ್​ ಪೊಲೀಸ್ (Traffic Police) ಬಳಿ ಕ್ಷಮೆಯಾಗಿಸಿದ್ದಾರೆ. ಕೋಟ್ಯಾಧೀಶ್ವರನ ಈ ಸೌಮ್ಯತೆ ಟ್ರಾಫಿಕ್​ ಪೊಲೀಸ್​ ಮನಸೋತು ಬಿಟ್ಟು ಕಳುಹಿಸಿದ್ದಾರೆ. ಈ ಒಂದು ಅಪರೂಪದ ಘಟನೆ ರಾಮನಗರದಲ್ಲಿ(Ramanagara)) ನಡೆದಿದೆ.

ಹೌದು… ವೇಗವಾಗಿ ಹೋಗುತ್ತಿದ್ದಾಗ ದಿಢೀರ್ ಸಿಗ್ನಲ್ ಬಿದ್ದಿದೆ. ಕೂಡಲೇ ಫೇರಾರಿ ಕಾರು ಚಾಲನ ಬ್ರೇಕ್ ಹಾಕಿದ್ದಾನೆ. ಆದರೂ ಸಹ ಸಹ ಕಾರು ಜೀಬ್ರಾ ಲೈನ್​ ಕ್ರಾಸ್​ ಆಗಿದೆ. ಇದರಿಂದ ಎಚ್ಚೆತ್ತ ಚಾಲಕ, ಕಾರಿನಿಂದ ಇಳಿದು ಸ್ಥಳದಲ್ಲಿದ್ದ ಟ್ರಾಫಿಕ್​ ಪೊಲೀಸ್ ಬಳಿ ಹೋಗಿ ಕ್ಷಮೆ ಕೋರಿದ್ದಾರೆ. ಕೋಟ್ಯಾಧೀಶ್ವರನ ಸೌಮ್ಯತೆ ಕಂಡು ಟ್ರಾಫಿಕ್ ಪೊಲೀಸ್, ಕಾರಿಗೆ ಯಾವುದೇ ದಂಡ ಹಾಕದೇ ಬಿಟ್ಟು ಕಳುಹಿಸಿದ್ದಾರೆ.

ವೇಗದಲ್ಲಿದ್ದ ಕಾರನ್ನು ಚಾಲಕ ಕಂಟ್ರೋಲ್ ಮಾಡಿದ್ದಾರೆ. ಆದರೂ ಸಹ ಸಿಗ್ನಲ್ ದಿಢೀರ್ ಬಿದ್ದಿದ್ದರಿಂದ ಕಾರು ಜೀಬ್ರಾ ಲೈನ್ ಕ್ರಾಸ್ ಆಗಿದೆ. ಬಳಿಕ ಪೊಲೀಸರು ಸ್ಥಳಕ್ಕೆ ಬರುವ ಮುಂಚೆಯೇ ಕಾರು ಮಾಲೀಕ ಸ್ವತಃ ತಾವೇ ಕಾರನಿಂದ ಕೆಳಗಿಳಿದು ಹೋಗಿ ಕ್ಷಮೆಯಾಚಿಸಿದ್ದಾರೆ.

ಒಮ್ಮೆಲೆ ಸಿಗ್ನಲ್ ಬಿತ್ತು. ಆದರೂ ಲೈನ್ ಕ್ರಾಸ್ ಆಯ್ತು. ಅದಕ್ಕೆ ಕಾರು ನಿಲ್ಲಿಸಿದೆ ಎಂದು ತಪ್ಪೊಪ್ಪೊಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸ್, ದಂಡ ಹಾಕದೇ ಫೇರಾರಿ ಕಾರು ಬಿಟ್ಟು ಕಳುಹಿಸಿದ್ದಾರೆ. ಬೈಕ್​ ಮಾಲೀಕನೇ ಹೇ ಹೋಗಯ್ಯ ಎಂದು ಬೈದು ಹೋಗುವ ಈ ಕಾಲದಲ್ಲಿ ಕೋಟ್ಯಾಧೀಶ ಬಂದು ತಪ್ಪಾಯ್ತು ಎಂದು ಕೇಳಿಕೊಂಡಿರುವುದು ದೊಡ್ಡ ಗುಣ.

ಕಾನೂನು ಎಲ್ಲರಿಗೂ ಒಂದೇ. ಶ್ರೀಮಂತರಿಗೆ, ಬಡವರಿಗೆ ಅಂತ ಬೇರೆ ಬೇರೆ ಇಲ್ಲ ನಿಜ. ಆದ್ರೆ, ಎಲ್ಲಾ ಸಮಯ ಸಂದರ್ಭದಲ್ಲೂ ಸಹ ದಂಡ ವಿಧಿಸುವುದೊಂದೇ ಗುರಿಯಲ್ಲ. ಫೇರಾರಿ ಕಾರಿನ ಚಾಲಕನಿಗೆ ತಪ್ಪಿನ ಅರಿವಾಗಿದೆ. ಹಾಗೇ ಬೇಕಂತಲೇ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿಲ್ಲ. ಎಲ್ಲದಕ್ಕಿಂತ ಮುಖ್ಯವಾಗಿ ತಪ್ಪಾಗಿದೆ ಎಂದು ತಿಳಿದು ಪೊಲೀಸ್​ ಬಳಿ ಬಂದು ಕ್ಷಮೆ ಕೋರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್