AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ರಾಮನಗರದಲ್ಲಿ ಮತ್ತೆ ವಂದೇ ಭಾರತ್ ರೈಲಿನ ಮೇಲೆ ಕಲ್ಲೆಸೆತ! ಗಾಜು ಪುಡಿ ಪುಡಿ

ರಾಮನಗರ ಪಟ್ಟಣದ ಹೊರವಲಯದಲ್ಲಿ ವಂದೇ ಭಾರತ್ ಮೇಲೆ ಮತ್ತೆ ಕೀಡಿಗೇಡಿಗಳು ಕಲ್ಲೆಸೆದಿದ್ದಾರೆ. ಈ ಹಿಂದೆ ಕೂಡ ಇಂತಹುದೇ ಘಟನೆ ನಡೆದಿತ್ತು. ಮತ್ತೆ ಇದೀಗ ಇಂತಹ ಘಟನೆ ಬೆಳಕಿಗೆ ಬಂದಿದ್ದು, ಕಲ್ಲು ಹೊಡೆದ ಕಿಡಗೇಡಿಗಳ ಪತ್ತೆ ಕಾರ್ಯ ಶುರುವಾಗಿದೆ.

Vande Bharat Express: ರಾಮನಗರದಲ್ಲಿ ಮತ್ತೆ ವಂದೇ ಭಾರತ್ ರೈಲಿನ ಮೇಲೆ ಕಲ್ಲೆಸೆತ! ಗಾಜು ಪುಡಿ ಪುಡಿ
ವಂದೇ ಭಾರತ್​ ರೈಲು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 28, 2023 | 12:36 PM

Share

ರಾಮನಗರ, ಜು.28: ಪಟ್ಟಣದ ಹೊರವಲಯದಲ್ಲಿ ವಂದೇ ಭಾರತ್ ರೈಲಿನ(Vande Bharat Train) ಮೇಲೆ ಮತ್ತೆ ಕೀಡಿಗೇಡಿಗಳು ಕಲ್ಲೆಸೆದಿದ್ದಾರೆ. ಈ ಹಿಂದೆ ಕೂಡ ಇಂತಹುದೇ ಘಟನೆ ನಡೆದಿತ್ತು. ಮತ್ತೆ ಇದೀಗ ಇಂತಹ ಘಟನೆ ಬೆಳಕಿಗೆ ಬಂದಿದೆ. ಈ ರೈಲು ಮೈಸೂರಿನಿಂದ ಚೆನೈಗೆ ತೆರಳುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ. ಕಲ್ಲು ಎಸೆದ ರಭಸಕ್ಕೆ ಕಿಟಕಿ ಗಾಜು ಪುಡಿಯಾಗಿ ಸೀಟಿನ ಮೇಲೆ ಬಿದ್ದಿದ್ದು, ಆತಂಕದಲ್ಲಿ ಪ್ರಯಾಣಿಕರು ಪ್ರಯಾಣ ಮಾಡುವಂತಾಗಿದೆ. ಇದೀಗ ಕಲ್ಲು ಹೊಡೆದ ಕಿಡಗೇಡಿಗಳ ಪತ್ತೆ ಕಾರ್ಯ ಶುರುವಾಗಿದೆ.

ಧಾರವಾಡ-ಬೆಂಗಳೂರು ವಂದೇ ಭಾರತ್​ ಆರಂಭವಾದ ನಾಲ್ಕೇ ದಿನಕ್ಕೆ ಕಲ್ಲೆಸೆತ

ಕೇಂದ್ರದ ಮಹತ್ತರ ಸೇವೆಗಳಲ್ಲಿ ಒಂದಾಗ ವಂದೇ ಭಾರತ್ ಎಕ್ಸಪ್ರೆಸ್ ರೈಲುಗಳ ಮೇಲೆ ಕಲ್ಲೆಸೆತ ನಡೆಯುತ್ತಲೇ ಇದೆ. ಹೌದು ಇದೆ ಮೊದಲಲ್ಲ ಧಾರವಾಡ ಬೆಂಗಳೂರು ವಂದೇ ಭಾರತ್​ ರೈಲು ಆರಂಭವಾದ ನಾಲ್ಕೇ ದಿನಕ್ಕೆ ದಾವಣಗೆರೆಯ ಹೊರವಲಯದಲ್ಲಿ ಕಲ್ಲೆಸೆತವಾಗಿತ್ತು. ಧಾರವಾಡದಿಂದ ಜುಲೈ 1 ರಂದು ಬೆಂಗಳೂರಿಗೆ ತೆರೆಳುತ್ತಿದ್ದಾಗ ಈ ಘಟನೆ ಸಂಭವಿಸಿತ್ತು. ಅದೃಷ್ಟವಶಾತ್ ​ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲವಾಗಿತ್ತು.

ಇದನ್ನೂ ಓದಿ:ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀಡಲಾದ ಆಹಾರದಲ್ಲಿ ಜಿರಳೆ ಪತ್ತೆ, ಕ್ಷಮೆಯಾಚಿಸಿದ ಐಆರ್​ಸಿಟಿಸಿ

ರಾಜ್ಯದ ಮೊದಲ ಮೈಸೂರು-ಚನ್ನೈ  ವಂದೇ ಭಾರತ್​ ಎಕ್ಸಪ್ರೆಸ್​ ರೈಲಿಗೂ ಕಲ್ಲೆಸೆತ

ಕರ್ನಾಟಕದ ಮೊದಲ ಮೈಸೂರು-ಚನ್ನೈ  ವಂದೇ ಭಾರತ್​ ಎಕ್ಸಪ್ರೆಸ್​ ರೈಲಿಗೂ ಕೆ ಆರ್​ ಪುರಂ ಮತ್ತು ಬೆಂಗಳೂರು ಕಂಟೋನ್​​ಮೆಂಟ್​​ ರೇಲ್ವೆ ನಿಲ್ದಾಣದ ಮಧ್ಯೆ ಕೀಡಿಗೇಡಿಗಳು ಕಲ್ಲೆಸೆತ ಮಾಡಿದ ಘಟನೆ ನಡೆದಿತ್ತು. ಈ ವೇಳೆ ಕಿಟಕಿಯ ಗಾಜು ತಾಕಿ ಪ್ರಯಾಣಿಕರಿಗೆ ಗಾಯಗಳಾಗಿತ್ತು ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿತ್ತು. ಈ ಘಟನೆ ಹಿನ್ನಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ರಾಮನಗರದಲ್ಲಿ ಮತ್ತೆ ಇಂತಹ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Fri, 28 July 23

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು