AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ರಾಮನಗರದಲ್ಲಿ ಮತ್ತೆ ವಂದೇ ಭಾರತ್ ರೈಲಿನ ಮೇಲೆ ಕಲ್ಲೆಸೆತ! ಗಾಜು ಪುಡಿ ಪುಡಿ

ರಾಮನಗರ ಪಟ್ಟಣದ ಹೊರವಲಯದಲ್ಲಿ ವಂದೇ ಭಾರತ್ ಮೇಲೆ ಮತ್ತೆ ಕೀಡಿಗೇಡಿಗಳು ಕಲ್ಲೆಸೆದಿದ್ದಾರೆ. ಈ ಹಿಂದೆ ಕೂಡ ಇಂತಹುದೇ ಘಟನೆ ನಡೆದಿತ್ತು. ಮತ್ತೆ ಇದೀಗ ಇಂತಹ ಘಟನೆ ಬೆಳಕಿಗೆ ಬಂದಿದ್ದು, ಕಲ್ಲು ಹೊಡೆದ ಕಿಡಗೇಡಿಗಳ ಪತ್ತೆ ಕಾರ್ಯ ಶುರುವಾಗಿದೆ.

Vande Bharat Express: ರಾಮನಗರದಲ್ಲಿ ಮತ್ತೆ ವಂದೇ ಭಾರತ್ ರೈಲಿನ ಮೇಲೆ ಕಲ್ಲೆಸೆತ! ಗಾಜು ಪುಡಿ ಪುಡಿ
ವಂದೇ ಭಾರತ್​ ರೈಲು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jul 28, 2023 | 12:36 PM

Share

ರಾಮನಗರ, ಜು.28: ಪಟ್ಟಣದ ಹೊರವಲಯದಲ್ಲಿ ವಂದೇ ಭಾರತ್ ರೈಲಿನ(Vande Bharat Train) ಮೇಲೆ ಮತ್ತೆ ಕೀಡಿಗೇಡಿಗಳು ಕಲ್ಲೆಸೆದಿದ್ದಾರೆ. ಈ ಹಿಂದೆ ಕೂಡ ಇಂತಹುದೇ ಘಟನೆ ನಡೆದಿತ್ತು. ಮತ್ತೆ ಇದೀಗ ಇಂತಹ ಘಟನೆ ಬೆಳಕಿಗೆ ಬಂದಿದೆ. ಈ ರೈಲು ಮೈಸೂರಿನಿಂದ ಚೆನೈಗೆ ತೆರಳುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ. ಕಲ್ಲು ಎಸೆದ ರಭಸಕ್ಕೆ ಕಿಟಕಿ ಗಾಜು ಪುಡಿಯಾಗಿ ಸೀಟಿನ ಮೇಲೆ ಬಿದ್ದಿದ್ದು, ಆತಂಕದಲ್ಲಿ ಪ್ರಯಾಣಿಕರು ಪ್ರಯಾಣ ಮಾಡುವಂತಾಗಿದೆ. ಇದೀಗ ಕಲ್ಲು ಹೊಡೆದ ಕಿಡಗೇಡಿಗಳ ಪತ್ತೆ ಕಾರ್ಯ ಶುರುವಾಗಿದೆ.

ಧಾರವಾಡ-ಬೆಂಗಳೂರು ವಂದೇ ಭಾರತ್​ ಆರಂಭವಾದ ನಾಲ್ಕೇ ದಿನಕ್ಕೆ ಕಲ್ಲೆಸೆತ

ಕೇಂದ್ರದ ಮಹತ್ತರ ಸೇವೆಗಳಲ್ಲಿ ಒಂದಾಗ ವಂದೇ ಭಾರತ್ ಎಕ್ಸಪ್ರೆಸ್ ರೈಲುಗಳ ಮೇಲೆ ಕಲ್ಲೆಸೆತ ನಡೆಯುತ್ತಲೇ ಇದೆ. ಹೌದು ಇದೆ ಮೊದಲಲ್ಲ ಧಾರವಾಡ ಬೆಂಗಳೂರು ವಂದೇ ಭಾರತ್​ ರೈಲು ಆರಂಭವಾದ ನಾಲ್ಕೇ ದಿನಕ್ಕೆ ದಾವಣಗೆರೆಯ ಹೊರವಲಯದಲ್ಲಿ ಕಲ್ಲೆಸೆತವಾಗಿತ್ತು. ಧಾರವಾಡದಿಂದ ಜುಲೈ 1 ರಂದು ಬೆಂಗಳೂರಿಗೆ ತೆರೆಳುತ್ತಿದ್ದಾಗ ಈ ಘಟನೆ ಸಂಭವಿಸಿತ್ತು. ಅದೃಷ್ಟವಶಾತ್ ​ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲವಾಗಿತ್ತು.

ಇದನ್ನೂ ಓದಿ:ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀಡಲಾದ ಆಹಾರದಲ್ಲಿ ಜಿರಳೆ ಪತ್ತೆ, ಕ್ಷಮೆಯಾಚಿಸಿದ ಐಆರ್​ಸಿಟಿಸಿ

ರಾಜ್ಯದ ಮೊದಲ ಮೈಸೂರು-ಚನ್ನೈ  ವಂದೇ ಭಾರತ್​ ಎಕ್ಸಪ್ರೆಸ್​ ರೈಲಿಗೂ ಕಲ್ಲೆಸೆತ

ಕರ್ನಾಟಕದ ಮೊದಲ ಮೈಸೂರು-ಚನ್ನೈ  ವಂದೇ ಭಾರತ್​ ಎಕ್ಸಪ್ರೆಸ್​ ರೈಲಿಗೂ ಕೆ ಆರ್​ ಪುರಂ ಮತ್ತು ಬೆಂಗಳೂರು ಕಂಟೋನ್​​ಮೆಂಟ್​​ ರೇಲ್ವೆ ನಿಲ್ದಾಣದ ಮಧ್ಯೆ ಕೀಡಿಗೇಡಿಗಳು ಕಲ್ಲೆಸೆತ ಮಾಡಿದ ಘಟನೆ ನಡೆದಿತ್ತು. ಈ ವೇಳೆ ಕಿಟಕಿಯ ಗಾಜು ತಾಕಿ ಪ್ರಯಾಣಿಕರಿಗೆ ಗಾಯಗಳಾಗಿತ್ತು ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿತ್ತು. ಈ ಘಟನೆ ಹಿನ್ನಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ರಾಮನಗರದಲ್ಲಿ ಮತ್ತೆ ಇಂತಹ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Fri, 28 July 23

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ