Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ರಾಮನಗರದಲ್ಲಿ ಮತ್ತೆ ವಂದೇ ಭಾರತ್ ರೈಲಿನ ಮೇಲೆ ಕಲ್ಲೆಸೆತ! ಗಾಜು ಪುಡಿ ಪುಡಿ

ರಾಮನಗರ ಪಟ್ಟಣದ ಹೊರವಲಯದಲ್ಲಿ ವಂದೇ ಭಾರತ್ ಮೇಲೆ ಮತ್ತೆ ಕೀಡಿಗೇಡಿಗಳು ಕಲ್ಲೆಸೆದಿದ್ದಾರೆ. ಈ ಹಿಂದೆ ಕೂಡ ಇಂತಹುದೇ ಘಟನೆ ನಡೆದಿತ್ತು. ಮತ್ತೆ ಇದೀಗ ಇಂತಹ ಘಟನೆ ಬೆಳಕಿಗೆ ಬಂದಿದ್ದು, ಕಲ್ಲು ಹೊಡೆದ ಕಿಡಗೇಡಿಗಳ ಪತ್ತೆ ಕಾರ್ಯ ಶುರುವಾಗಿದೆ.

Vande Bharat Express: ರಾಮನಗರದಲ್ಲಿ ಮತ್ತೆ ವಂದೇ ಭಾರತ್ ರೈಲಿನ ಮೇಲೆ ಕಲ್ಲೆಸೆತ! ಗಾಜು ಪುಡಿ ಪುಡಿ
ವಂದೇ ಭಾರತ್​ ರೈಲು
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 28, 2023 | 12:36 PM

ರಾಮನಗರ, ಜು.28: ಪಟ್ಟಣದ ಹೊರವಲಯದಲ್ಲಿ ವಂದೇ ಭಾರತ್ ರೈಲಿನ(Vande Bharat Train) ಮೇಲೆ ಮತ್ತೆ ಕೀಡಿಗೇಡಿಗಳು ಕಲ್ಲೆಸೆದಿದ್ದಾರೆ. ಈ ಹಿಂದೆ ಕೂಡ ಇಂತಹುದೇ ಘಟನೆ ನಡೆದಿತ್ತು. ಮತ್ತೆ ಇದೀಗ ಇಂತಹ ಘಟನೆ ಬೆಳಕಿಗೆ ಬಂದಿದೆ. ಈ ರೈಲು ಮೈಸೂರಿನಿಂದ ಚೆನೈಗೆ ತೆರಳುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ. ಕಲ್ಲು ಎಸೆದ ರಭಸಕ್ಕೆ ಕಿಟಕಿ ಗಾಜು ಪುಡಿಯಾಗಿ ಸೀಟಿನ ಮೇಲೆ ಬಿದ್ದಿದ್ದು, ಆತಂಕದಲ್ಲಿ ಪ್ರಯಾಣಿಕರು ಪ್ರಯಾಣ ಮಾಡುವಂತಾಗಿದೆ. ಇದೀಗ ಕಲ್ಲು ಹೊಡೆದ ಕಿಡಗೇಡಿಗಳ ಪತ್ತೆ ಕಾರ್ಯ ಶುರುವಾಗಿದೆ.

ಧಾರವಾಡ-ಬೆಂಗಳೂರು ವಂದೇ ಭಾರತ್​ ಆರಂಭವಾದ ನಾಲ್ಕೇ ದಿನಕ್ಕೆ ಕಲ್ಲೆಸೆತ

ಕೇಂದ್ರದ ಮಹತ್ತರ ಸೇವೆಗಳಲ್ಲಿ ಒಂದಾಗ ವಂದೇ ಭಾರತ್ ಎಕ್ಸಪ್ರೆಸ್ ರೈಲುಗಳ ಮೇಲೆ ಕಲ್ಲೆಸೆತ ನಡೆಯುತ್ತಲೇ ಇದೆ. ಹೌದು ಇದೆ ಮೊದಲಲ್ಲ ಧಾರವಾಡ ಬೆಂಗಳೂರು ವಂದೇ ಭಾರತ್​ ರೈಲು ಆರಂಭವಾದ ನಾಲ್ಕೇ ದಿನಕ್ಕೆ ದಾವಣಗೆರೆಯ ಹೊರವಲಯದಲ್ಲಿ ಕಲ್ಲೆಸೆತವಾಗಿತ್ತು. ಧಾರವಾಡದಿಂದ ಜುಲೈ 1 ರಂದು ಬೆಂಗಳೂರಿಗೆ ತೆರೆಳುತ್ತಿದ್ದಾಗ ಈ ಘಟನೆ ಸಂಭವಿಸಿತ್ತು. ಅದೃಷ್ಟವಶಾತ್ ​ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲವಾಗಿತ್ತು.

ಇದನ್ನೂ ಓದಿ:ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀಡಲಾದ ಆಹಾರದಲ್ಲಿ ಜಿರಳೆ ಪತ್ತೆ, ಕ್ಷಮೆಯಾಚಿಸಿದ ಐಆರ್​ಸಿಟಿಸಿ

ರಾಜ್ಯದ ಮೊದಲ ಮೈಸೂರು-ಚನ್ನೈ  ವಂದೇ ಭಾರತ್​ ಎಕ್ಸಪ್ರೆಸ್​ ರೈಲಿಗೂ ಕಲ್ಲೆಸೆತ

ಕರ್ನಾಟಕದ ಮೊದಲ ಮೈಸೂರು-ಚನ್ನೈ  ವಂದೇ ಭಾರತ್​ ಎಕ್ಸಪ್ರೆಸ್​ ರೈಲಿಗೂ ಕೆ ಆರ್​ ಪುರಂ ಮತ್ತು ಬೆಂಗಳೂರು ಕಂಟೋನ್​​ಮೆಂಟ್​​ ರೇಲ್ವೆ ನಿಲ್ದಾಣದ ಮಧ್ಯೆ ಕೀಡಿಗೇಡಿಗಳು ಕಲ್ಲೆಸೆತ ಮಾಡಿದ ಘಟನೆ ನಡೆದಿತ್ತು. ಈ ವೇಳೆ ಕಿಟಕಿಯ ಗಾಜು ತಾಕಿ ಪ್ರಯಾಣಿಕರಿಗೆ ಗಾಯಗಳಾಗಿತ್ತು ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿತ್ತು. ಈ ಘಟನೆ ಹಿನ್ನಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ರಾಮನಗರದಲ್ಲಿ ಮತ್ತೆ ಇಂತಹ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Fri, 28 July 23

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್