AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲಿಬಾಲ್ ಟಚ್ ಆಯ್ತು ಎಂದು ಜಗಳ; ರಾಡ್​ನಿಂದ ವಿದ್ಯಾರ್ಥಿಯಿಂದ ಮತ್ತೊಂದು ವಿದ್ಯಾರ್ಥಿ ಮೇಲೆ ಹಲ್ಲೆ

ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿರುವ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದಾರೆ. ಪುನೀತ್ ಎಂಬ ವಿದ್ಯಾರ್ಥಿ ಕಾಲಿಗೆ ವಾಲಿಬಾಲ್ ಟಚ್ ಆದ ಕಾರಣ ಪುನೀತ್, ಸೊಳ್ಳೆ ಪರದೆ ಹಾಕಲು ಅಳವಡಿಸಲಾಗಿದ್ದ ರಾಡ್​ನಿಂದ ರಾಹುಲ್ ಎಂಬ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾನೆ. ಹೊಡೆದಿರೋ ವಿಚಾರ ಪೋಷಕರಿಗೆ ತಿಳಿಸಿದ್ರೇ ಅಷ್ಟೇ. ಗೊತ್ತಲ್ಲ‌ ಇಲ್ಲಿ ನಾನೇ ಪ್ರಧಾನ ಮಂತ್ರಿ, ಇಲ್ಲಿ ನಂದೇ ರೂಲ್ಸ್ ಅಂತ ವಾರ್ನಿಂಗ್ ಮಾಡಿದ್ದಾನೆ.

ವಾಲಿಬಾಲ್ ಟಚ್ ಆಯ್ತು ಎಂದು ಜಗಳ; ರಾಡ್​ನಿಂದ ವಿದ್ಯಾರ್ಥಿಯಿಂದ ಮತ್ತೊಂದು ವಿದ್ಯಾರ್ಥಿ ಮೇಲೆ ಹಲ್ಲೆ
ರಾಡ್​ನಿಂದ ವಿದ್ಯಾರ್ಥಿಯಿಂದ ಮತ್ತೊಂದು ವಿದ್ಯಾರ್ಥಿ ಮೇಲೆ ಹಲ್ಲೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Sep 19, 2023 | 9:41 AM

Share

ರಾಮನಗರ, ಸೆ. 19: ಹತ್ತನೇ ತರಗತಿ ವಿದ್ಯಾರ್ಥಿ(Students) 9ನೇ ತರಗತಿ ವಿದ್ಯಾರ್ಥಿಗೆ ರಾಡ್​ನಿಂದ‌ ಹಲ್ಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿರುವ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ರಾಹುಲ್ (14) ಹಲ್ಲೆಗೊಳಗಾದ ವಿದ್ಯಾರ್ಥಿ. ಪುನೀತ್ ಗೌಡ ಎಂಬ ವಿದ್ಯಾರ್ಥಿ ಮೇಲೆ ದೂರು ದಾಖಲಾಗಿದೆ. ಸೆ.12ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 10ನೇ ತರಗತಿ ಓದುತ್ತಿರುವ ಪುನೀತ್, ಶಾಲೆಯ ಚುನಾವಣೆಯಲ್ಲಿ ಪ್ರಧಾನಿ ಪಟ್ಟ ಗಿಟ್ಟಿಸಿಕೊಂಡಿದ್ದ. ಅಲ್ಲಿಂದ ಶಾಲೆಯಲ್ಲಿ ತನ್ನ ಹಿಡಿತ ಸಾಧಿಸಲು ಶುರು ಮಾಡಿದ್ದ. ಸದ್ಯ ಇಬ್ಬರು ವಿದ್ಯಾರ್ಥಿಗಳ ನಡುವೆ ಚಿಕ್ಕ ಗಲಾಟೆಯಾಗಿದ್ದು ಹಲ್ಲೆ ನಡೆದಿದೆ.

ಪುನೀತ್ ಶಾಲೆಯ ಪ್ರಧಾನಿ ಎಂಬ ಸೊಕ್ಕಿನಲ್ಲಿ ತಾನು ಏನೇ ಮಾಡಿದ್ರು ಯಾರೂ ತನ್ನ ವಿರುದ್ಧ ಮಾತಾಡಬಾರದು ಅಂತ ವಾರ್ನಿಂಗ್ ಕೊಟ್ಟಿದ್ದನಂತೆ. ಸೆ.12ರ ರಾತ್ರಿ ಊಟದ ಬಳಿಕ ರಾಹುಲ್ ವಾಲಿಬಾಲ್ ಆಡಲು ತೆರಳಿದ್ದ. ರಾಹುಲ್ ತೆರಳುವ ದಾರಿಯಲ್ಲಿ ಪುನೀತ್ ಕೂತಿದ್ದ. ಈ ವೇಳೆ ನನ್ನ ಕಾಲಿಗೆ ಏನಾದ್ರು ವಾಲಿಬಾಲ್ ಟಚ್ ಆದರೆ ಪರಿಣಾಮ ನೆಟ್ಟಗಿರಲ್ಲ ಎಂದು ರಾಹುಲ್​ಗೆ ಬವಾರ್ನಿಂಗ್ ಕೊಟ್ಟಿದ್ದಾನೆ. ಆಟ ಆಡುವ ವೇಳೆ ಅಜಾನಕ್ ಆಗಿ ಪುನೀತ್ ಕಾಲಿಗೆ ವಾಲಿಬಾಲ್ ಟಚ್ ಆಗಿದೆ. ಇದರಿಂದ ಕೋಪಗೊಂಡ ಪುನೀತ್, ಸೊಳ್ಳೆ ಪರದೆ ಹಾಕಲು ಅಳವಡಿಸಲಾಗಿದ್ದ ರಾಡ್​ನಿಂದ ಹಲ್ಲೆ ನಡೆಸಿದ್ದಾನೆ. ಹೊಡೆದಿರೋ ವಿಚಾರ ಪೋಷಕರಿಗೆ ತಿಳಿಸಿದ್ರೇ ಅಷ್ಟೇ. ಗೊತ್ತಲ್ಲ‌ ಇಲ್ಲಿ ನಾನೇ ಪ್ರಧಾನ ಮಂತ್ರಿ, ಇಲ್ಲಿ ನಂದೇ ರೂಲ್ಸ್ ಅಂತ ವಾರ್ನಿಂಗ್ ಕೊಟ್ಟಿದ್ದಾನೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪತ್ನಿಯ ನಂಬರ್ ಕೇಳಿದ ಸ್ನೇಹಿತನ ಮೇಲೆ ಹಲ್ಲೆ,‌ ರೌಡಿಶೀಟರ್ ಮನೆಗೆ ದಾಳಿ

ಇನ್ನು ಹಲ್ಲೆ ನಂತರವೂ ರಾಹುಲ್ ಮೇಲೆ ಪುನೀತ್ ದಬ್ಬಾಳಿಕೆ ಮುಂದುವರೆದಿದ್ದು ಮಾನಸಿಕವಾಗಿ ಕುಗ್ಗಿದ್ದ ರಾಹುಲ್ ಕೊನೆಗೂ ತನ್ನ ತಂದೆ ಬಳಿ ತನ್ನ ಮೇಲಿನ ಹಲ್ಲೆ ಬಗ್ಗೆ ತಿಳಿಸಿದ್ದಾನೆ. ಅಲ್ಲದೆ ಹಲ್ಲೆ ಬಳಿಕ ತಾನೇ ಬಿದ್ದೆ ಅಂತ ಹೇಳು ಎಂದು ಪುನೀತ್, ರಾಹುಲ್​ಗೆ ಐಡಿಯಾ ಕೊಟ್ಟಿದ್ದ ಜೊತೆಗೆ ಮೊರಾರ್ಜಿ ದೇಸಾಯಿ ಶಾಲೆ ಪ್ರಾಂಶುಪಾಲರು ಕೂಡ ಹಲ್ಲೆಯ ವಿಚಾರ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಾಟ್ ಮೇಲಿಂದ‌‌ ಬಿದ್ದೆ ಅಂತ ಹೇಳು, ಇಲ್ದಿದ್ರೆ ಚೆನ್ನಾಗಿರಲ್ಲ ಅಂತ ಪ್ರಾಂಶುಪಾಲರು ಬೆದರಿಕೆ ಹಾಕಿದ್ದರಂತೆ. ಹಲ್ಲೆ ವಿಚಾರ ಮನೆಯಲ್ಲಿ ತಿಳಿಸದ ಕಾರಣ ಪುನೀತ್ ಮತ್ತೆ ರ‍್ಯಾಗಿಂಗ್‌ ಶುರುಮಾಡಿದ್ದನಂತೆ. ಸದ್ಯ ಘಟನೆ ಸಂಬಂಧ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ದೂರು ದಾಖಲಿಸಿಕೊಂಡು ಪೊಲೀಸರು ಪರಿಶೀಲನೆ ಆರಂಭಿಸಿದ್ದಾರೆ.

ರಾಮನಗರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ