AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಮಳೆ ಬಂದ್ರೆ ಶಾಲೆ ಸೋರುತ್ತೆ, ನಮ್ಮ ಶಾಲೆಯನ್ನು ಸರಿಪಡಿಸಿ ಕೊಡಿ ಎಂದು ಸಿಎಂಗೆ ಮಕ್ಕಳ ಮನವಿ

ಕಂಗೆಟ್ಟ ವಿದ್ಯಾರ್ಥಿಗಳು ‘ನಮ್ಮ ಶಾಲೆಗೆ ಪೇಂಟಿಂಗ್ ಮಾಡ್ಸಿ, ಮಳೆ ಬಂದರೆ ಸೋರುತ್ತದೆ. ಇದರಿಂದ ಹುಳ-ಹುಪ್ಪಟೆಗಳು ತರಗತಿ ಒಳಗಡೆ ಬರುತ್ತದೆ. ಇಷ್ಟೇ ಅಲ್ಲದೆ, ಸುಣ್ಣ ಬಣ್ಣವಿಲ್ಲದೇ ಗೋಡೆಗಳು ಪಾಳು ಬಿದ್ದಂತಾಗಿದ್ದು, ಬ್ಲಾಕ್ ಬೋರ್ಡ್​ನಿಂದ ಸಿಮೆಂಟ್ ಕಿತ್ತಿ ಬಂದಿದೆ. ಮಧ್ಯದಿಂದ ಛಾವಣಿ ಸೀಳಿ ಹೋಗಿದೆ. ದಯವಿಟ್ಟು ಸರಿ ಮಾಡಿಸಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ.

ರಾಮನಗರ: ಮಳೆ ಬಂದ್ರೆ ಶಾಲೆ ಸೋರುತ್ತೆ, ನಮ್ಮ ಶಾಲೆಯನ್ನು ಸರಿಪಡಿಸಿ ಕೊಡಿ ಎಂದು ಸಿಎಂಗೆ ಮಕ್ಕಳ ಮನವಿ
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Sep 14, 2023 | 4:43 PM

Share

ರಾಮನಗರ, ಸೆ.14: ಈಗಾಗಲೇ ರಾಜ್ಯದಲ್ಲಿ ಸರ್ಕಾರಿ ಶಾಲೆ (Government School) ಗಳು ಮುಚ್ಚಿ ಹೋಗುತ್ತಿದ್ದು, ಬಡ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅದರಂತೆ ರಾಮನಗರ (Ramanagara) ತಾಲೂಕಿನ ಬಿಡದಿ ಹೋಬಳಿಯ ಬಾನಾಂದೂರು ಗ್ರಾಮದ ಶಾಲೆಯಲ್ಲಿ, ಮಳೆ ಬಂದರೆ ಸಾಕು ಮೇಲ್ಛಾವಣಿ ಸೋರುತ್ತಿದ್ದು, ಗೋಡೆಗಳು ಬಣ್ಣ ಕಾಣದೆ ಪಾಳು ಬಿದ್ದಂತಾಗಿದೆ. ಇದರಿಂದ ಹಾವು, ಹುಳಗಳು ಕ್ಲಾಸ್​ ರೂಂ ಒಳಗಡೆ ಬರುತ್ತಿದೆ ಎಂದು ಶಾಲೆಯ ವಿದ್ಯಾರ್ಥಿಗಳು ಅಳಲನ್ನು ತೋಡಿಕೊಂಡಿದ್ದಾರೆ.

ದುರಸ್ಥಿ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ

ಇನ್ನು ಇದರಿಂದ ಕಂಗೆಟ್ಟ ವಿದ್ಯಾರ್ಥಿಗಳು ‘ನಮ್ಮ ಶಾಲೆಗೆ ಪೇಂಟಿಂಗ್ ಮಾಡ್ಸಿ, ಮಳೆ ಬಂದರೆ ಸೋರುತ್ತದೆ. ಇದರಿಂದ ಹುಳ-ಹುಪ್ಪಟೆಗಳು ತರಗತಿ ಒಳಗಡೆ ಬರುತ್ತದೆ. ಇಷ್ಟೇ ಅಲ್ಲದೆ, ಸುಣ್ಣ ಬಣ್ಣವಿಲ್ಲದೇ ಗೋಡೆಗಳು ಪಾಳು ಬಿದ್ದಂತಾಗಿದ್ದು, ಬ್ಲಾಕ್ ಬೋರ್ಡ್​ನಿಂದ ಸಿಮೆಂಟ್ ಕಿತ್ತಿ ಬಂದಿದೆ. ಮಧ್ಯದಿಂದ ಛಾವಣಿ ಸೀಳಿ ಹೋಗಿದೆ. ದಯವಿಟ್ಟು ನಮ್ಮ ಶಾಲೆಯನ್ನು ದುರಸ್ತಿ ಮಾಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲಾ ಮಕ್ಕಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಶಿಸ್ತು, ಶಿಕ್ಷಣಕ್ಕೆ ಹೆಸರುವಾಸಿಯಾದ ಬಾಗಲಕೋಟೆ ಸರ್ಕಾರಿ ಶಾಲೆ: ನಿಜಕ್ಕೂ ಬಡ ಮಕ್ಕಳಿಗೆ ಇದು ಅಕ್ಷರದಾಸೋಹ

ಇನ್ನು ಇಂತಹ ಘಟನೆಗಳು ಹೊಸದಲ್ಲ. ಜುಲೈ 19 ರಂದು ರಾಜ್ಯದಲ್ಲಿ ತಡವಾಗಿಯಾದರೂ ಮಳೆ ಆರಂಭವಾಗಿದ್ದು, ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಈ ಹಿನ್ನಲೆ ಸರ್ಕಾರಿ ಶಾಲೆಯ ಮಕ್ಕಳು ಯಾಕಾದರೂ ಮಳೆಗಾಲ ಆರಂಭವಾಯಿತೆಂದು ಚಿಂತಿಸುವಂತಾಗಿತ್ತು. ಹೌದು, ಸರ್ಕಾರಿ ಶಾಲೆಯ ಅನೇಕ ಕೊಠಡಿಗಳು ಸೋರುತ್ತಿದ್ದು, ಅನೇಕ ಕಡೆ ಬೀಳುವ ಹಂತದಲ್ಲಿತ್ತು. ಇನ್ನೂ ಅನೇಕ ಕಡೆ ಮೇಲ್ಛಾವಣಿ ಕುಸಿದು ಬೀಳುವ ಆತಂಕವಿದ್ದು, ಸರ್ಕಾರ ಹತ್ತಾರು ಭಾಗ್ಯಗಳನ್ನು ನೀಡುತ್ತಿದೆ. ಆದ್ರೆ, ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಾತ್ರ ದೌರ್ಬಾಗ್ಯ ಕಾಡುತ್ತಿತ್ತು. ಅದರಂತೆ ಡಿಸಿಎಂ ತವರು ಜಿಲ್ಲೆ ರಾಮನಗರ ಜಿಲ್ಲೆಯಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ