AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಮಳೆ ಬಂದ್ರೆ ಶಾಲೆ ಸೋರುತ್ತೆ, ನಮ್ಮ ಶಾಲೆಯನ್ನು ಸರಿಪಡಿಸಿ ಕೊಡಿ ಎಂದು ಸಿಎಂಗೆ ಮಕ್ಕಳ ಮನವಿ

ಕಂಗೆಟ್ಟ ವಿದ್ಯಾರ್ಥಿಗಳು ‘ನಮ್ಮ ಶಾಲೆಗೆ ಪೇಂಟಿಂಗ್ ಮಾಡ್ಸಿ, ಮಳೆ ಬಂದರೆ ಸೋರುತ್ತದೆ. ಇದರಿಂದ ಹುಳ-ಹುಪ್ಪಟೆಗಳು ತರಗತಿ ಒಳಗಡೆ ಬರುತ್ತದೆ. ಇಷ್ಟೇ ಅಲ್ಲದೆ, ಸುಣ್ಣ ಬಣ್ಣವಿಲ್ಲದೇ ಗೋಡೆಗಳು ಪಾಳು ಬಿದ್ದಂತಾಗಿದ್ದು, ಬ್ಲಾಕ್ ಬೋರ್ಡ್​ನಿಂದ ಸಿಮೆಂಟ್ ಕಿತ್ತಿ ಬಂದಿದೆ. ಮಧ್ಯದಿಂದ ಛಾವಣಿ ಸೀಳಿ ಹೋಗಿದೆ. ದಯವಿಟ್ಟು ಸರಿ ಮಾಡಿಸಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ.

ರಾಮನಗರ: ಮಳೆ ಬಂದ್ರೆ ಶಾಲೆ ಸೋರುತ್ತೆ, ನಮ್ಮ ಶಾಲೆಯನ್ನು ಸರಿಪಡಿಸಿ ಕೊಡಿ ಎಂದು ಸಿಎಂಗೆ ಮಕ್ಕಳ ಮನವಿ
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Sep 14, 2023 | 4:43 PM

Share

ರಾಮನಗರ, ಸೆ.14: ಈಗಾಗಲೇ ರಾಜ್ಯದಲ್ಲಿ ಸರ್ಕಾರಿ ಶಾಲೆ (Government School) ಗಳು ಮುಚ್ಚಿ ಹೋಗುತ್ತಿದ್ದು, ಬಡ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅದರಂತೆ ರಾಮನಗರ (Ramanagara) ತಾಲೂಕಿನ ಬಿಡದಿ ಹೋಬಳಿಯ ಬಾನಾಂದೂರು ಗ್ರಾಮದ ಶಾಲೆಯಲ್ಲಿ, ಮಳೆ ಬಂದರೆ ಸಾಕು ಮೇಲ್ಛಾವಣಿ ಸೋರುತ್ತಿದ್ದು, ಗೋಡೆಗಳು ಬಣ್ಣ ಕಾಣದೆ ಪಾಳು ಬಿದ್ದಂತಾಗಿದೆ. ಇದರಿಂದ ಹಾವು, ಹುಳಗಳು ಕ್ಲಾಸ್​ ರೂಂ ಒಳಗಡೆ ಬರುತ್ತಿದೆ ಎಂದು ಶಾಲೆಯ ವಿದ್ಯಾರ್ಥಿಗಳು ಅಳಲನ್ನು ತೋಡಿಕೊಂಡಿದ್ದಾರೆ.

ದುರಸ್ಥಿ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ

ಇನ್ನು ಇದರಿಂದ ಕಂಗೆಟ್ಟ ವಿದ್ಯಾರ್ಥಿಗಳು ‘ನಮ್ಮ ಶಾಲೆಗೆ ಪೇಂಟಿಂಗ್ ಮಾಡ್ಸಿ, ಮಳೆ ಬಂದರೆ ಸೋರುತ್ತದೆ. ಇದರಿಂದ ಹುಳ-ಹುಪ್ಪಟೆಗಳು ತರಗತಿ ಒಳಗಡೆ ಬರುತ್ತದೆ. ಇಷ್ಟೇ ಅಲ್ಲದೆ, ಸುಣ್ಣ ಬಣ್ಣವಿಲ್ಲದೇ ಗೋಡೆಗಳು ಪಾಳು ಬಿದ್ದಂತಾಗಿದ್ದು, ಬ್ಲಾಕ್ ಬೋರ್ಡ್​ನಿಂದ ಸಿಮೆಂಟ್ ಕಿತ್ತಿ ಬಂದಿದೆ. ಮಧ್ಯದಿಂದ ಛಾವಣಿ ಸೀಳಿ ಹೋಗಿದೆ. ದಯವಿಟ್ಟು ನಮ್ಮ ಶಾಲೆಯನ್ನು ದುರಸ್ತಿ ಮಾಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲಾ ಮಕ್ಕಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಶಿಸ್ತು, ಶಿಕ್ಷಣಕ್ಕೆ ಹೆಸರುವಾಸಿಯಾದ ಬಾಗಲಕೋಟೆ ಸರ್ಕಾರಿ ಶಾಲೆ: ನಿಜಕ್ಕೂ ಬಡ ಮಕ್ಕಳಿಗೆ ಇದು ಅಕ್ಷರದಾಸೋಹ

ಇನ್ನು ಇಂತಹ ಘಟನೆಗಳು ಹೊಸದಲ್ಲ. ಜುಲೈ 19 ರಂದು ರಾಜ್ಯದಲ್ಲಿ ತಡವಾಗಿಯಾದರೂ ಮಳೆ ಆರಂಭವಾಗಿದ್ದು, ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಈ ಹಿನ್ನಲೆ ಸರ್ಕಾರಿ ಶಾಲೆಯ ಮಕ್ಕಳು ಯಾಕಾದರೂ ಮಳೆಗಾಲ ಆರಂಭವಾಯಿತೆಂದು ಚಿಂತಿಸುವಂತಾಗಿತ್ತು. ಹೌದು, ಸರ್ಕಾರಿ ಶಾಲೆಯ ಅನೇಕ ಕೊಠಡಿಗಳು ಸೋರುತ್ತಿದ್ದು, ಅನೇಕ ಕಡೆ ಬೀಳುವ ಹಂತದಲ್ಲಿತ್ತು. ಇನ್ನೂ ಅನೇಕ ಕಡೆ ಮೇಲ್ಛಾವಣಿ ಕುಸಿದು ಬೀಳುವ ಆತಂಕವಿದ್ದು, ಸರ್ಕಾರ ಹತ್ತಾರು ಭಾಗ್ಯಗಳನ್ನು ನೀಡುತ್ತಿದೆ. ಆದ್ರೆ, ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಾತ್ರ ದೌರ್ಬಾಗ್ಯ ಕಾಡುತ್ತಿತ್ತು. ಅದರಂತೆ ಡಿಸಿಎಂ ತವರು ಜಿಲ್ಲೆ ರಾಮನಗರ ಜಿಲ್ಲೆಯಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ