AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಡಿಕೆ ಶಿವಕುಮಾರ್​ ತವರು ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ, ವರ್ಗಾವಣೆಯನ್ನು ತಡೆಹಿಡಿದ ಡಿಡಿಪಿಐ

ಕನಕಪುರ ತಾಲೂಕಿನ ಸರಕಾರಿ ಶಾಲೆಯ 138 ಶಿಕ್ಷಕರ ವರ್ಗಾವಣೆಗೆ ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದರು, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಣ್ಣಸ್ವಾಮಿ ಈ ವರ್ಗಾವಣೆಯನ್ನು ತಡೆಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಆದೇಶದ ಪ್ರಕಾರ ವರ್ಗಾವಣೆ ನೀಡುವಂತೆ ಮನವಿ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ತವರು ಕ್ಷೇತ್ರದಲ್ಲೇ ಶಿಕ್ಷರ ಕೊರತೆ ಇರುವ ಹಿನ್ನೆಲೆಯಲ್ಲಿ ವರ್ಗಾವಣೆಗೆ ತಡೆಹಿಡಿಯಲಾಗಿದೆ.

ರಾಮನಗರ: ಡಿಕೆ ಶಿವಕುಮಾರ್​ ತವರು ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ, ವರ್ಗಾವಣೆಯನ್ನು ತಡೆಹಿಡಿದ ಡಿಡಿಪಿಐ
ವರ್ಗಾವಣೆ ಬಯಸಿದ ಶಿಕ್ಷಕರು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Aug 16, 2023 | 3:08 PM

Share

ರಾಮನಗರ: ಕನಕಪುರ (Kanakpur) ತಾಲೂಕಿನ ಸರಕಾರಿ ಶಾಲೆಯ (Government School) 138 ಶಿಕ್ಷಕರ (Teachers) ವರ್ಗಾವಣೆಗೆ ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದರು, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (DDPI) ಗಂಗಣ್ಣಸ್ವಾಮಿ ಈ ವರ್ಗಾವಣೆಯನ್ನು ತಡೆಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಆದೇಶದ ಪ್ರಕಾರ ವರ್ಗಾವಣೆ ನೀಡುವಂತೆ ಮನವಿ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ತವರು ಕ್ಷೇತ್ರದಲ್ಲೇ ಶಿಕ್ಷರ ಕೊರತೆ ಇರುವ ಹಿನ್ನೆಲೆಯಲ್ಲಿ ವರ್ಗಾವಣೆಗೆ ತಡೆಹಿಡಿಯಲಾಗಿದೆ. “ಶಿಕ್ಷಕರು ವರ್ಗಾವಣೆ ಆದರೆ‌ 96 ಶಾಲೆ ಮುಚ್ಚುವ ಪರಿಸ್ಥಿತಿ ಎದುರಾಗುತ್ತದೆ” ಎಂದು ಡಿಡಿಪಿಐ ಗಂಗಣ್ಣಸ್ವಾಮಿ ಹೇಳಿದ್ದಾರೆ.

ತಮಿಳುನಾಡಿನ ಗಡಿಯಲ್ಲಿರುವ ಕನಕಪುರ ತಾಲೂಕಿನ ಉಯ್ಯಂಬಳಿ, ಕೋಡಿಹಳ್ಳಿ ಹೋಬಳಿಗಳಲ್ಲಿ 122 ಸರಕಾರಿ ಶಾಲೆಗಳಿವೆ. 3,600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. 122 ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸಲು 318 ಮಂದಿ ಶಿಕ್ಷಕರ ಅವಶ್ಯಕತೆ ಇದೆ. ಆದರೆ ಕೇವಲ 115 ಶಿಕ್ಷಕರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ 115 ಶಿಕ್ಷಕರಲ್ಲಿ 92 ಮಂದಿ ಶಿಕ್ಷಕರು ವರ್ಗಾವಣೆ ಬಯಸಿದ್ದಾರೆ. ಒಂದುವೇಳೆ ಶಿಕ್ಷಕರು ವರ್ಗವಾದರೇ 48 ಶಾಲೆಗಳಿಗೆ ಬೀಗ ಹಾಕಬೇಕಾಗುತ್ತದೆ. ಈ ಹಿನ್ನೆಲೆ 92 ಶಿಕ್ಷಕರು ಸೇರಿದಂತೆ ಉಳಿದ 136 ಶಿಕ್ಷಕರ ವರ್ಗಾವಣೆಯನ್ನು ತಡೆಹಿಡಿಯಲಾಗಿದೆ.

ಇದನ್ನೂ ಓದಿ:  ಶತಮಾನದ ಬಾಲಕಿಯರ ಸರ್ಕಾರಿ ಶಾಲೆ ಶಿಥಿಲಾವಸ್ಥೆಯಲ್ಲಿದೆ

ಅಲ್ಲದೇ ಗಡಿ ಭಾಗದ ಶಾಲೆಗಳಲ್ಲಿ ಖಾಯಂ ಶಿಕ್ಷಕರ ಕೊರತೆ ಉಂಟಾಗಿದ್ದು, ಕೇವಲ ಅತಿಥಿ ಶಿಕ್ಷಕರುಗಳೇ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಕನಕಪುರದ ಒಟ್ಟು 78 ಶಾಲೆಗಳಲ್ಲೂ ವಿದ್ಯಾರ್ಥಿಗಳಿದ್ದರೂ ಶಿಕ್ಷಕರು ಇಲ್ಲದೆ ಶಾಲೆ ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಈ ಸಂಬಂಧ ಒಂದು ವಾರ ಅವಕಾಶ ನೀಡುವಂತೆ ಶಿಕ್ಷಣ ಇಲಾಖೆಗೆ ಡಿಡಿಪಿಐ ಗಂಗಣ್ಣಸ್ವಾಮಿ ಕೋರಿದ್ದರು. ಇದೀಗ ಎರಡು ವಾರ ಕಳೆದರೂ ಡಿಡಿಪಿಐ ಗಂಗಣ್ಣಸ್ವಾಮಿ ಸ್ಪಂದಿಸಿಲ್ಲ.

ಶಿಕ್ಷಕರನ್ನು ಯಾವುದೇ ಕಾರಣಕ್ಕೂ ವರ್ಗಾವಣೆ‌ ಮಾಡಬೇಡಿ

ಇನ್ನು ಈ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ವರ್ಗಾವಣೆ‌ ಮಾಡಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರಂತೆ. ಮುಖ್ಯಮಂತ್ರಿಗಳು ಹೇಳಿದರೂ ವರ್ಗಾವಣೆ ಮಾಡಿಬೇಡಿ ಎಂದಿದ್ದಾರಂತೆ. ಇನ್ನು ಈ ಸಂಬಂಧ ಇಲಾಖೆ ಆಯುಕ್ತರಿಗೆ ಪತ್ರ ಕೂಡ ಬರೆದಿದ್ದಾರಂತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Wed, 16 August 23

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?