AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿರಳೆಗಿಡುವ ವಿಷವನ್ನು ಕಂದನಿಗಿಟ್ಟ ತಾಯಿ! ಚಿಕಿತ್ಸೆ ಫಲಕಾರಿ ಆಗದೇ 3 ವರ್ಷದ ಮಗು ಸಾವು

ರಾಮನಗರ (Ramanagara) ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಗೋದೂರ ಗ್ರಾಮದಲ್ಲಿ ಮಗು ಜೊತೆ ಲಕ್ಷ್ಮಣರೇಖೆ ಔಷಧಿ ಕುಡಿದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಸತತ ವಾಂತಿ ಹಾಗೂ ಭೇದಿಯಿಂದ ಮಗು ಕೊನೆಯುಸಿರೆಳೆದಿದೆ. ಇದೀಗ ದಯಾನಂದ ಆಸ್ಪತ್ರೆಯಲ್ಲಿ ಮಗುವಿನ ಮರೋಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ.

ಜಿರಳೆಗಿಡುವ ವಿಷವನ್ನು ಕಂದನಿಗಿಟ್ಟ ತಾಯಿ! ಚಿಕಿತ್ಸೆ ಫಲಕಾರಿ ಆಗದೇ 3 ವರ್ಷದ ಮಗು ಸಾವು
ಮೃತ ಮಗು
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 24, 2024 | 8:58 PM

ರಾಮನಗರ, ಜ.24: ಮಗು ಜೊತೆ ಲಕ್ಷ್ಮಣರೇಖೆ ಔಷಧಿ ಕುಡಿದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರ (Ramanagara) ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಗೋದೂರ ಗ್ರಾಮದಲ್ಲಿ ನಡೆದಿದೆ. ಈ ವೇಳೆ 3 ವರ್ಷದ ಮಗು ಸಾವನ್ನಪ್ಪಿದರೆ, ಅಸ್ವಸ್ಥ ತಾಯಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೀಕ್ಷಿತ್ ಗೌಡ‌(3) ಮೃತಪಟ್ಟ ಮಗು ಹಾಗೂ ಪೂರ್ಣಿಮಾ(24) ಮಗುವಿಗೆ ವಿಷವುಣಿಸಿದ ತಾಯಿ.

ಸತತ ವಾಂತಿ, ಭೇದಿಯಿಂದ ಕೊನೆಯುಸಿರೆಳೆದ ಮಗು

ಇನ್ನು ಲಕ್ಷ್ಮಣ ರೇಖೆ ಎಂಬ ಹೆಸರಿನ ಜಿರಳೆಗಿಡುವ ವಿಷ ಇದಾಗಿದ್ದು, ತಾಯಿ ಪೂರ್ಣಿಮಾ ತಾನೂ ಕುಡಿದು, ಮಗುವಿಗೂ ವಿಷವುಣಿಸಿದ್ದಾರೆ. ಸತತ ವಾಂತಿ ಹಾಗೂ ಭೇದಿಯಿಂದ ಮಗು ಕೊನೆಯುಸಿರೆಳೆದಿದೆ. ಇದೀಗ ದಯಾನಂದ ಆಸ್ಪತ್ರೆಯಲ್ಲಿ ಮಗುವಿನ ಮರೋಣೋತ್ತರ ಪರೀಕ್ಷೆ ಮಾಡಲಾಗುತ್ತಿದ್ದು, ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮೀಟರ್​ ಬಡ್ಡಿ ದಂಧೆ ಹಾವಳಿ, ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಎಚ್ಚೆತ್ತ ತುಮಕೂರು ಪೊಲೀಸರಿಂದ ಸಹಾಯವಾಣಿ

ಲೋಕಾ ಬಲೆಗೆ ಬಿದ್ದ ಸರ್ವೆ ಅಧಿಕಾರಿ

ಉತ್ತರ ಕನ್ನಡ: ಜಿಲ್ಲೆಯ ಯಲ್ಲಾಪುರ ಪಟ್ಟಣದಲ್ಲಿನ ಆಡಳಿತಸೌಧದಲ್ಲಿ 2,500 ರೂ. ಲಂಚ ಸ್ವೀಕರಿಸುತ್ತಿದ್ದ ಸರ್ವೆ ಅಧಿಕಾರಿ ಲೋಕಾ ಬಲೆಗೆ ಬಿದ್ದಿದ್ದಾರೆ. ಸಾಮಾಜಿಕ ಕಾರ್ಯಕರ್ತ ಧೀರಜ್​ ತಿನೇಕರ್ ಹುಣಶೆಟ್ಟಿಕೊಪ್ಪರ ಜಮೀನು ಭಾಗ ಮಾಡುವ ವಿಚಾರಕ್ಕೆ ಸರ್ವೆ ಇಲಾಖೆ ಅಧಿಕಾರಿ ಚಂದ್ರ ಮೋಹನ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಇಂದು 2,500 ರೂ. ಲಂಚ ಸ್ವೀಕರಿಸುವಾಗ ದಿಢೀರ್​ ಲೋಕಾಯುಕ್ತ ದಾಳಿ ನಡೆಸಿದ್ದು, ಕಾರವಾರ ಲೊಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:44 pm, Wed, 24 January 24

Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ